Headlines

‘ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು’; ದೊಡ್ಡ ಘೋಷಣೆ ಮಾಡಿದ ಗಿಲ್ಲಿ ನಟ

‘ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು’; ದೊಡ್ಡ ಘೋಷಣೆ ಮಾಡಿದ ಗಿಲ್ಲಿ ನಟ


ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ (ಗಿಲ್ಲಿ ನಟ) ಅವರು ಈಗ ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಅವರು ವಾಸ್ತವಕ್ಕೆ ಬರೋಕೆ ಒದ್ದಾಡುತ್ತಿದ್ದಾರೆ. ಈ ಮಧ್ಯೆ ಅವರು ದೊಡ್ಡ ಘೋಷಣೆ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಅವರ ಮುಂದಿನ ಪ್ರಾಜೆಕ್ಟ್ ಬಗ್ಗೆ ಕುತೂಹಲ ಮೂಡಿದೆ.

ಬಿಗ್ ಬಾಸ್ ಆದ ಬಳಿಕ ಗಿಲ್ಲಿ ನಟ ಹುಟ್ಟೂರಿನಲ್ಲಿ ರ್ಯಾಲಿ ಮಾಡಿದ್ದಾರೆ. ಆ ಬಳಿಕ ಮಾಧ್ಯಮಗಳಿಗೆ ಸಂದರ್ಶನ. ಈಗ ಅವರು ವಿಡಿಯೋ ಮಾಡಿ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಅವರಿಗೆ ಇನ್ನೂ ವಾಸ್ತವಕ್ಕೆ ಬರೋಕೆ ಆಗುತ್ತಿಲ್ಲ ಎಂಬುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ.

‘ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ. ಬಿಗ್ ಬಾಸ್ ಮನೆಯಲ್ಲಿ ಜನರಿಂದ ಇಷ್ಟೊಂದು ಬೆಂಬಲ ಸಿಗುತ್ತದೆ ಎಂದು ನನಗೆ ಗೊತ್ತಿರಲಿಲ್ಲ. ಇದನ್ನು ನಂಬೋಕೆ ಆಗುತ್ತಿಲ್ಲ. ಟ್ಯಾಟೂ ಹಾಕಿಸಿಕೊಂಡ, ಹರಕೆ ಹೊತ್ತವರಿಗೆ, ಮಾಧ್ಯಮದವರಿಗೆ, ಸೋಶಿಯಲ್ ಮೀಡಿಯಾದಲ್ಲಿ ಬೆಂಬಲಿಸಿದವರಿಗೆ ಧನ್ಯವಾದ’ ಎಂದು ಗಿಲ್ಲಿ.

ಆ ಬಳಿಕ ಅವರು ಹೊಸ ಘೋಷಣೆ ಬಗ್ಗೆಯೂ ಮಾಹಿತಿ ಮಾಹಿತಿ. ವಿಡಿಯೋಗೆ ಕ್ಯಾಪ್ಶನ್ ನೀಡಿರೋ ಅವರು, ‘ಇಷ್ಟು ದೂರ ಕರ್ಕೊಂಡು ಬಂದಿದ್ದೀರಿ. ಮನಸ್ಸಲ್ಲಿ ಜಾಗ ಕೊಟ್ಟಿದೆ. ಕೈ ಮೇಲೆ ಹಚ್ಚೆ ಹಾಕಿಸ್ಕೊಂಡೆ. ನಿರಂತರವಾಗಿ ಬೆಂಬಲಿಸಿದೆ. ಇದುವರೆಗೂ ಬರಿ ರನ್ನರ್ ಅಪ್ ಆಗೇ ಉಳ್ಕೋತಿದ್ದ ಗಿಲ್ಲಿಗೆ ಗೆಲುವಿನ ಕಿರೀಟ ತೊಡಿಸಿದೆ, ಮೆರೆಸಿದೆ. ಈ ಪ್ರೀತಿಗೆ ಏನು ಹೇಳಿದ್ರು, ಎಷ್ಟು ಹೇಳಿದ್ರು ಕಡಿಮೇನೆ’ ಅವರು. ‘ಈ ಗೆಲುವಿನ ಬೆನ್ನಲ್ಲೇ ಹೊಸ ಹೆಜ್ಜೆ , ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು’ ಎಂದು ಬರೆಯಲಾಗಿದೆ. ಈ ಸಾಲು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಗಿಲ್ಲಿ ‘ಬಡವ’ ಕಾರ್ಡ್ ಬಳಸಿ ಗೆದ್ದ ಎಂದವರಿಗೆ ಮುಟ್ಟಿ ನೋಡಿಕೊಳ್ಳೋ ಉತ್ತರ ಕೊಟ್ಟ ಸಹ ಸ್ಪರ್ಧಿ ಅಭಿಷೇಕ

‘ಗಿಚ್ಚಿ ಗಿಳಿಗಿಲಿ’ ಶೋ ಬರುತ್ತಿದೆ. ಅದರಲ್ಲಿ ಗಿಲ್ಲಿ ಕಾಣಿಸಿಕೊಳ್ಳುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಈ ಶೋಗೆ ಅವರು ನಿರೂಪಣೆ ಮಾಡಬೇಕು ಎಂಬ ಬೇಡಿಕೆಯೂ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 10:38 am, ಗುರುವಾರ, 22 ಜನವರಿ 26





Source link

Leave a Reply

Your email address will not be published. Required fields are marked *