
<p>ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ವಾರ-ವಾರವೂ ಎಲಿಮಿನೇಶನ್ ಇದ್ದೇ ಇರುತ್ತದೆ. ಕಳೆದ ಬಾರಿ ಮಾಳು ನಿಪನಾಳ ಅವರು ಎಲಿಮಿನೇಟ್ ಆಗಿದ್ದರು, ಆದರೆ ಸ್ಪಂದನಾ ಸೋಮಣ್ಣ ಹೊರಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ ಸ್ಪಂದನಾ ಯಾಕೆ ಹೊರಹೋಗಲಿಲ್ಲ ಎಂದು ರಕ್ಷಿತಾ ಕಾರಣ ನೀಡಿದ್ದಾರೆ.</p><p> </p><img><p>ಕೆಲ ವಾರಗಳ ಹಿಂದೆ ಬಿಗ್ ಬಾಸ್ ಶೋನಲ್ಲಿ ಸ್ಪಂದನಾ ಸೋಮಣ್ಣ ಅವರು ಎಲಿಮಿನೇಟ್ ಆಗಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೂ ಕೂಡ ಅವರು ಈ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಹೀಗಾಗಿಯೇ ಗಿಲ್ಲಿ ನಟ ಅವರು ಸ್ಪಂದನಾರನ್ನು ಲಕ್ಕಿ ಎಂದು ಹೇಳುತ್ತಿರುತ್ತಾರೆ.</p><img><p>ಸ್ಪಂದನಾ ಸೋಮಣ್ಣ ಅವರು ಮನೆಯಲ್ಲಿ ಅಡುಗೆ ಕೆಲಸ ಮಾಡೋದಿಲ್ಲ, ಟಾಸ್ಕ್ ಆಡೋದಿಲ್ಲ, ಸ್ಟ್ಯಾಂಡ್ ತಗೊಳೋದಿಲ್ಲ, ಒಟ್ಟಿನಲ್ಲಿ ಕಾಣಿಸಿಕೊಳ್ಳೋದಿಲ್ಲ. ಆದರೂ ಅವರು ಹೇಗೆ ಉಳಿದುಕೊಂಡರು ಎನ್ನೋದು ಬಹುತೇಕರ ಪ್ರಶ್ನೆಯಾಗಿದೆ.</p><img><p>ಅಂದಹಾಗೆ ಕಾವ್ಯ ಶೈವ, ಧನುಷ್ ಗೌಡ ಕೂಡ ಸ್ಪಂದನಾ ಸೋಮಣ್ಣ ಉಳಿದುಕೊಂಡಿದ್ದರ ಬಗ್ಗೆ ಕಾಮಿಡಿ ಮಾಡಿದ್ದರು. ಅದನ್ನು ಕೇಳಿ ಸ್ಪಂದನಾ ಅವರು ಕೂಡ ನಕ್ಕಿದ್ದರು.</p><img><p>ಬಿಗ್ ಬಾಸ್ ಮನೆಯನ್ನು ಈ ಬಾರಿ ಅರಮನೆ ಥರ ರೆಡಿ ಮಾಡಲಾಗಿದೆ. ಸ್ಪಂದನಾ ಅವರು ಮೈಸೂರಿನ ಹುಡುಗಿ, ಹೀಗಾಗಿ ಅವರನ್ನು ಉಳಿಸಿಕೊಳ್ಳಲಾಗಿದೆ ಎಂದು ಕಾವ್ಯ ಶೈವ ಕಾಮಿಡಿ ಮಾಡಿದ್ದಾರೆ.</p><img><p>ಈಗ ರಕ್ಷಿತಾ ಶೆಟ್ಟಿ ಅವರು, “ಸ್ಪಂದನಾ ಸೋಮಣ್ಣಗೆ ಬೆಂಗಳೂರಿನಲ್ಲಿ ಮನೆ ಇಲ್ಲ ಎಂದು ಬಿಗ್ ಬಾಸ್ ಮನೆಯಲ್ಲಿ ಉಳಿಸಿಕೊಳ್ಳಲಾಗಿದೆ” ಎಂದು ಕಾಮಿಡಿ ಮಾಡಿದ್ದಾರೆ. ರಕ್ಷಿತಾ ಮಾತು ಕೇಳಿ ಎಲ್ಲರೂ ನಕ್ಕಿದ್ದಾರೆ.</p>
Source link
ಇನ್ನೂ ಸ್ಪಂದನಾ ಸೋಮಣ್ಣ Bigg Boss ಮನೇಲಿ ಇರೋದ್ಯಾಕೆ? ಗುಟ್ಟು ಬಿಚ್ಚಿಟ್ಟ Rakshita Shetty