
ಪಶ್ಚಿಮ ಬಂಗಾಳ ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಯು ಇದು ಆತ್ಮಹತ್ಯೆ ಇರಬಹುದು ಎಂದು ಸೂಚಿಸಿದೆ. ಆದರೆ, ಮರಣೋತ್ತರ ಪರೀಕ್ಷೆಯ ನಂತರವೇ ನಿಖರ ಕಾರಣ ತಿಳಿಯಲಿದೆ. ವೈದ್ಯಕೀಯ ಮತ್ತು ವಿಧಿವಿಜ್ಞಾನ ವರದಿಗಳು ಬರುವವರೆಗೂ ಯಾವುದೇ ತೀರ್ಮಾನಕ್ಕೆ ಬರುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ವಿದ್ಯಾರ್ಥಿಯ ಕುಟುಂಬಕ್ಕೆ ಮಾಹಿತಿ ನೀಡಲಾಗಿದ್ದು, ಅವರು ದುರ್ಗಾಪುರಕ್ಕೆ ಬಂದಿದ್ದಾರೆ. ತನಿಖಾಧಿಕಾರಿಗಳು ಘಟನೆಗೂ ಮುನ್ನ ನಡೆದ ವಿದ್ಯಮಾನಗಳನ್ನು ತಿಳಿಯಲು ಸಹಪಾಠಿಗಳು ಮತ್ತು ಹಾಸ್ಟೆಲ್ ನಿವಾಸಿಗಳಿಂದ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.