ಬೀದರ್, ಜನವರಿ 14: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿಯಾಗಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಮಂಗಲಗಿ ಗ್ರಾಮದ ಬಳಿ ನಡೆದಿದೆ. ಬಂಬಳಗಿ ಗ್ರಾಮದ ಸಂಜುಕುಮಾರ್ ಹೊಸಮನಿ(48) ಮೃತ ದುರ್ದೈವಿ ಪತ್ತೆ, ಪೊಲೀಸ್ ವರದಿ ಪ್ರಕಾರ ಸಂಜುಕುಮಾರ್ ಸ್ಥಳೀಯ ಆಸ್ಪತ್ರೆಯಿಂದ ತನ್ನ ಮಕ್ಕಳನ್ನು ಕರೆತರಲು ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಮೃತ ವ್ಯಕ್ತಿ ಲಾರಿ ಕ್ಲೀನರ್ ಆಗಿ ಉದ್ಯೋಗ ಮಾಡಿಕೊಂಡಿದ್ದರು ಎಂಬುದು ಗೊತ್ತಾಗಿದೆ.
ಬೆಳಿಗ್ಗೆ ಸುಮಾರು 11 ಗಂಟೆ ಹೊತ್ತಿಗೆ ಮೋಟರ್ ಸೈಕಲ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಳಮಡಗಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ ಬಳಿ ಮಾಂಜಾ ದಾರ ಸಂಜುಕುಮಾರ್ ಹೊಸಮನಿ ಕುತ್ತಿಗೆಗೆ ಸುತ್ತಿಕೊಂಡಿದೆ. ಈ ವೇಳೆ ಅರ್ಧ ಕುತ್ತಿಗೆ ಕಟ್ಟಾದ ಪರಿಣಾಮ ತೀವ್ರ ರಕ್ತಸ್ರಾವವಾಗಿದೆ. ಈ ವೇಳೆ ಸಂಜುಕುಮಾರ್ ಬೈಕ್ ನಿಂದ ರಸ್ತೆಗೆ ಬಿದ್ದಿದ್ದು, ಸ್ಥಳದಲ್ಲೇ ಅಸುನೀಗಿದ್ದಾರೆ. ಆ ಮೂಲಕ ಸಂಕ್ರಾಂತಿ ಸಂಭ್ರಮದಲ್ಲಿದ್ದ ಮನೆಯಲ್ಲಿ ಶೋಕ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.’
ಇದನ್ನೂ ಓದಿ: ಕರ್ನಾಟಕದಲ್ಲಿ ಮಾಂಜಾ ದಾರ ನಿಷೇಧ; ಗಾಳಿಪಟ ಹಾರಿಸಲು ಹತ್ತಿ ದಾರಕ್ಕೆ ಮಾತ್ರ ಅವಕಾಶ
ಮಾಂಜಾ ದಾರ ಮಾರಾಟಗಾರರಿಗೆ ಎಸ್ಪಿ ಎಚ್ಚರಿಕೆ
ಘಟನೆಯ ಬಗ್ಗೆ ಕಾಣಿಸಿಕೊಂಡಿರುವ ಬೀದರ್ ಎಸ್ಪಿ ಪ್ರದೀಪ್ ಗುಂಟಿ, ಮಾಂಜಾದಾರ ಮಾರಾಟ ಹಾಗೂ ಬಳಕೆಯಲ್ಲಿ ಎರಡು ಅಪರಾಧವಾಗಿದೆ. ಹೀಗಾಗಿ ಇಂತಹ ಸನ್ನಿವೇಶಗಳು ಕಂಡುಬಂದರೆ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ. ಸಂಕ್ರಾಂತಿ ಹಬ್ಬದ ನಿಮಿತ್ತ ಮಾಂಜಾ ದಾರಗಳ ಮಾರಾಟ ನಡೆಯುವ ಸಾಧ್ಯತೆ ಇರುವ ಕಾರಣ ನಾವು ಜಿಲ್ಲೆಯಲ್ಲಿ ಹಲವು ಅಂಗಡಿಗಳ ಮೇಲೆ ದಾಳಿ ಮಾಡಿದ್ದೇವೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದ್ದರೂ ಅವರ ಮಾರಾಟ ಮುಂದುವರಿಸಿದ್ದಾರೆ. ಅಂಗಡಿಗಳ ಕುರಿತು ಪರಿಶೀಲನೆ ಮುಂದುವರಿದಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.