
ಬೆಂಗಳೂರು, ಏಪ್ರಿಲ್ 06: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಇದೇ ಕೇಸ್ ನಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್ ಪುರಂ ಶಾಸಕ ಭೈರತಿ ಬಸವರಾಜ್ (ಬೈರತಿ ಬಸವರಾಜ) ಇತ್ತೀಚೆಗೆ ಜಾಮೀನು ಮೇಲೆ ಕಾಣಿಸಿಕೊಂಡಿದ್ದರು. ಇದೀಗ ಜಾಮೀನು ರದ್ದುಪಡಿಸುವಂತೆ ಕೋರಿ ಪೊಲೀಸರಿಂದ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಆ ಮೂಲಕ ಭೈರತಿ ಬಸವರಾಜ್ ಗೆ ಮತ್ತೆ ಸಂಕಷ್ಟ ಶುರುವಾಗಿದೆ.
ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಕೆ.ಆರ್.ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್ 6 ತಿಂಗಳ ಬಳಿಕ ಬಲೆಗೆ ಬಿದ್ದಿದ್ದರು. ಕೆಂಪೇಗೌಡ ಏರ್ಪೋರ್ಟ್ನಲ್ಲಿ ರಾತ್ರಿ ಪೊಲೀಸರು ಭೈರತಿಯನ್ನು ಬಂಧಿಸಿದ್ದರು. ನಂತರ ಪರೀಕ್ಷೆಗೆ ಹಸ್ತಾಂತರಿಸಲಾಯಿತು.
ಇದನ್ನೂ ಓದಿ: ಬೈರತಿ ಬಸವರಾಜ್ ಬಿಡುಗಡೆ: ಸೆಂಟ್ರಲ್ ಜೈಲಿನಿಂದ ಬಿಜೆಪಿ ಶಾಸಕ ಬೈರತಿ ಬಸವರಾಜ್ ರಿಲೀಸ್
7 ದಿನ ನಿಗದಿಡಿ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ಕೋರ್ಟ್ ಜಡ್ಜ್ ಆದೇಶ ಹೊರಡಿಸಿದೆ. 7 ದಿನಗಳ ಕಾಲ ಅಧಿಕಾರಿಗಳು 258 ಪ್ರಶ್ನೆಗಳನ್ನು ಕೇಳಿದರು. ಈ ವೇಳೆ ಪ್ರಶ್ನೆಗಳಿಗೆ ಶಾಸಕರು ಗೊತ್ತಿಲ್ಲ ಎಂದು ಉತ್ತರವನ್ನೇ ನೀಡಿದ್ದರು. ಇದರ ಜೊತೆಗೆ ಶಾಸಕರ ಎರಡು ಮೊಬೈಲ್ಗಳು ಕೂಡ ಒಳಗೊಂಡಡಿ ಜಪ್ತಿ ಮಾಡಿತ್ತು. ಮಾರ್ಚ್ 13 ರಂದು ಷರತ್ತುಬದ್ಧ ಜಾಮೀನು ಮಂಜೂರು ಬೆನ್ನಲ್ಲೇ ಸೆಂಟ್ರಲ್ ಜೈಲಿನಿಂದ ಶಾಸಕ ಭೈರತಿ ಬಸವರಾಜ್ ಬಿಡುಗಡೆ ಆಗಿದ್ದರು.
ಪ್ರಕರಣದ ಹಿನ್ನೆಲೆ
ಕಿತ್ತಗನೂರಿನ ಜಮೀನು ವಿವಾದದ ಹಿನ್ನೆಲೆ ಕಳೆದ ವರ್ಷ ಜುಲೈ 15ರಂದು ದುಷ್ಕರ್ಮಿಗಳ ಗುಂಪೊಂದು ಮಾಜಿ ರೌಡಿ ಶೀಟರ್ ಬಿಕ್ಲು ಶಿವನನ್ನು ಮಚ್ಚು, ಲಾಂಗ್ಗಳಿಂದ ಅಟ್ಯಾಕ್ ಮಾಡಿ ಕೊಲೆ ಮಾಡಿತ್ತು. ಮೃತನ ತಾಯಿ ಭೈರತಿ ಬಸವರಾಜ್ ಸೇರಿದಂತೆ ಹಲವರ ಮೇಲೆ ದೂರು ನೀಡಿದ್ದರು. ಎಫ್ಐಆರ್ಗೆ ಅರ್ಜಿ ಸಲ್ಲಿಸಿ ಬಂಧನದಿಂದ ಮಧ್ಯಂತರ ರಕ್ಷಣೆ ಪಡೆದ ಭೈರತಿ ಬಸವರಾಜ್ ಪೊಲೀಸರ ಮುಂದೆ ತನಿಖೆಗೆ ಹಾಜರಾಗಿದ್ದರು. ಆದರೆ ಪ್ರಯಾಗ್ ರಾಜ್ ಗೆ ತನ್ನ ಜೊತೆಯಲ್ಲಿಯೇ ಪ್ರಯಾಣಿಸಿದ ಎ1 ಆರೋಪಿ ಜಗ್ಗ ಅಲಿಯಾಸ್ ಜಗದೀಶ್ ಯಾರೆಂಬುದೇ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ವೇಳೆ ಭೈರತಿ ಬಸವರಾಜ್ ತಗ್ಲಾಕಿಸಿಕೊಂಡರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.