
<p>ಬೆಂಗಳೂರಿನ ರಸ್ತೆ ಗುಂಡಿ ಮತ್ತು ಕಸ ವಿಲೇವಾರಿ ಕುರಿತು ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. </p><img><p>ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಅವರು ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿ, ಕಸ ವಿಲೇವಾರಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕಿರಣ್ ಮಜುಂದಾರ್ ಶಾ ಭೇಟಿಯಾಗಿದ್ದಾರೆ.</p><img><p>ಕಳೆದ ಕೆಲವು ದಿನಗಳಿಂದ ರಾಜ್ಯ ಸರ್ಕಾರದ ವಿರುದ್ಧ ಕಿರಣ್ ಮಜುಂದಾರ್ ಶಾ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್, ಟ್ವೀಟ್ಗಳ ಹಿಂದೆ ಬೇರೆ ಅಜೆಂಡಾ ಇದೆ ಎಂದು ಆರೋಪಿಸಿದ್ದರು. ಈ ಹೇಳಿಕೆಗೂ ಕಿರಣ್ ಮಜುಂದಾರ್ ಶಾ ಪ್ರತಿಕ್ರಿಯಿಸಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ ಉಪಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದಾರೆ.</p><img><p>ಕಾರ್ಯಕ್ರಮವೊಂದಕ್ಕೆ ಆಹ್ವಾನಿಸಲು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ. ಆದ್ರೆ ಈ ಕುರಿತು ಅಧಿಕೃತ ಮಾಹಿತಿ ತಿಳಿದು ಬಂದಿಲ್ಲ. ಡಿಕೆ ಶಿವಕುಮಾರ್ ಅವರಿಗೆ ಆಹ್ವಾನ ಪತ್ರಿಕೆ ನೀಡುತ್ತಿರುವ ಫೋಟೋಗಳು ಏಷ್ಯಾನೆಟ್ ಸುವರ್ಣನ್ಯೂಸ್ಗೆ ಲಭ್ಯವಾಗಿವೆ.</p><img><p>‘ಬೆಂಗಳೂರಲ್ಲಿ ರಸ್ತೆ ಸರಿಯಿಲ್ಲ. ಇಷ್ಟೊಂದು ಕಸ ಏಕಿದೆ? ಚೀನಾದಲ್ಲಿ ಹೀಗಿಲ್ಲ ಎಂದು ಬೆಂಗಳೂರಿಗೆ ಬಂದಿದ್ದ ಉದ್ಯಮಿಯೊಬ್ಬರು ನನಗೆ ಕೇಳಿದರು’ ಎಂದು ಸರ್ಕಾರವನ್ನು ಪ್ರಶ್ನಿಸಿ ಕಿರಣ್ ಟ್ವೀಟ್ ಮಾಡಿದ್ದರು. ಈ ಟ್ವೀಟ್ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ವಿಪಕ್ಷಗಳು ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದವರು.</p><p><strong>ಇದನ್ನೂ ಓದಿ: </strong><strong>’ನೀವೇ ಯಾಕೆ ಗುಂಡಿ ಮುಚ್ಬಾರ್ದು..’ ರಸ್ತೆಗುಂಡಿ ಬಗ್ಗೆ ಕಿರಣ್ ಮಜುಂದಾರ್ ಶಾ ಟ್ವೀಟ್ಗೆ ಎಂಬಿ ಪಾಟೀಲ್ ಕಿಡಿ!</strong></p><img><p>‘ಬೆಂಗಳೂರು ಯಶ ಕಂಡಿರುವುದು ಸಾಮೂಹಿಕ ಯತ್ನದಿಂದಲೇ ಹೊರತು ನಿರಂತರ ಟೀಕೆಯಿಂದಲ್ಲ. ಬೆಂಗಳೂರಲ್ಲಿ ಸವಾಲಿವೆ. ಎದುರಿಸಿ ಕೆಲಸ ಮಾಡುತ್ತ ₹1100 ಕೋಟಿ ಖರ್ಚಲ್ಲಿ 10 ಸಾವಿರ ಗುಂಡಿ ಗುರುತಿಸಿ 5 ಸಾವಿರ ಗುಂಡಿ ಮುಚ್ಚಿಸಿದ್ದೇವೆ. ಬೆಂಗಳೂರನ್ನು ಒಡೆವ ಬದಲು ನಾವೆಲ್ಲ ಒಟ್ಟಾಗಿ ಕಟ್ಟೋಣ’ ಎಂದು ಹೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದರು.</p><p><strong>ಇದನ್ನೂ ಓದಿ: </strong><strong>ಕಿರಣ್ ಮಜುಂದಾರ್ ಶಾ ಟೀಕಿಸಿದ ಡಿ.ಕೆ.ಶಿವಕುಮಾರ್ ವಿರುದ್ಧ ಉದ್ಯಮಿ ಗೋಯೆಂಕಾ ಆಕ್ರೋಶ</strong></p>
Source link
Bengaluru: ಟ್ವೀಟ್ ವಾರ್ ಬೆನ್ನಲ್ಲೇ ಡಿಸಿಎಂ ಡಿಕೆಶಿಯನ್ನು ಭೇಟಿಯಾದ ಕಿರಣ್ ಮಜುಂದಾರ್ ಶಾ