Headlines

ಕೊಲೆ ಆರೋಪಿಯನ್ನು 68 ಬಾರಿ ಮಾರಕಾಸ್ತ್ರಗಳಿಂದ ಕೊಚ್ಚಿದ ಪುಂಡರು: ವ್ಯಕ್ತಿ ಬದುಕಿದ್ದೇ ಪವಾಡ!

ಕೊಲೆ ಆರೋಪಿಯನ್ನು 68 ಬಾರಿ ಮಾರಕಾಸ್ತ್ರಗಳಿಂದ ಕೊಚ್ಚಿದ ಪುಂಡರು: ವ್ಯಕ್ತಿ ಬದುಕಿದ್ದೇ ಪವಾಡ!


ಕೊಲೆ ಆರೋಪಿಯನ್ನು 68 ಬಾರಿ ಮಾರಕಾಸ್ತ್ರಗಳಿಂದ ಕೊಚ್ಚಿದ ಪುಂಡರು: ವ್ಯಕ್ತಿ ಬದುಕಿದ್ದೇ ಪವಾಡ!

ಬೆಂಗಳೂರು, ಮಾರ್ಚ್ 11: ವ್ಯಕ್ತಿಯೋರ್ವನ ಮೇಲೆ ಹಾಡು ಹಗಲೇ ನಡು ರಸ್ತೆಯಲ್ಲಿ ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸುತ್ತಿರುವ ಸಾರ್ವಜನಿಕ ಘಟನೆಕಾರಿ ಬೆಂಗಳೂರಿನ ಮಾಗಡಿ ರಸ್ತೆ ಠಾಣಾ ವ್ಯಾಪ್ತಿಯ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ. ಮಾರ್ಚ್ 9 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರ ಭಯವೇ ಇಲ್ಲದಂತೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸಂತೋಷ್ ಎಂಬಾತನ ಮೇಲೆ ಡೆಡ್ಲಿ ಅಟ್ಯಾಕ್ ನಡೆದಿದ್ದು, ಒಂದೆರಡಲ್ಲ ಬರೋಬ್ಬರಿ 68 ಬಾರಿ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ. ದಾಳಿ ನಡೆಸಿ ಶರತ್ ಮತ್ತು ಗ್ಯಾಂಗ್ ಎಂಬುದು ಗೊತ್ತಾಗಿದ್ದು, ಅಟ್ಯಾಕ್ ಬಳಿಕ ಅರೋಪಿಗಳು ಡ್ಯಾನ್ಸ್ ಮಾಡಿ ವಿಕೃತಿ ಕೂಡ ಮೆರೆದಿದ್ದಾರೆ.

ಇನ್ನು ಹಲ್ಲೆಗೊಳಗಾದ ಸಂತೋಷದ ಮೇಲೆ ಕೊಲೆ ಆರೋಪವಿತ್ತು. ಕಾರು ಓಡಿಸುವ ವಿಚಾರಕ್ಕೆ ಸ್ನೇಹಿತ ಮೋಹನ್ ಎಂಬಾತನ ಜೊತೆಗೆ ಸಂತೋಷ್ ಬೆಂಗಳೂರಿನಲ್ಲಿ ಗಲಾಟೆ ಮಾಡಿಕೊಂಡಿದ್ದ. ಬಳಿಕ ಮಂಡ್ಯದಲ್ಲಿ ಕುಡಿದು ಕೊಳ್ಳೇಗಾಲಕ್ಕೆ ಹೋಗಿದ್ದ ವೇಳೆ ಮೋಹನ್ ಮೇಲೆ ದಾಳಿ ಮಾಡಿದ್ದ ಸಂತೋಷ್ ಆತನನ್ನು ಕೊಲೆ ಮಾಡಿದ್ದಾನೆ. 2024ರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಮೋಹನನನ್ನು ಕಾರಿನಲ್ಲಿ ಕೂರಿಸಿ ಭಯ ಸಂತೋಷ ಪರಾರಿಯಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ UDR ಆಗಿದೆ. ನಂತರ ವಿಚಾರಣೆ ವೇಳೆ ಆರೋಪಿಯನ್ನು ಬಂಧಿಸಿದ್ದರು. ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ಸಂತೋಷ್ 4 ತಿಂಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಹೊರ ಬಂದಿದ್ದ. ಹೀಗಾಗಿ ಹಳೇದ ಹಿನ್ನೆಲೆ ಈತನಿಂದ ಕೊಲೆಯಾದ ಮೋಹನ್ ಸಹೋದರ ಶರತ್ ತಂಡ ಕಟ್ಟಿಕೊಂಡು ಬಂದು ಸಂತೋಷದ ಮೇಲೆ ಅಟ್ಯಾಕ್ ಮಾಡಿದ್ದಾನೆ.

ಇದನ್ನೂ ಓದಿ: ಮೆಸೇಜ್ ಮಾಡಿ ಲಾಡ್ಜ್ಗೆ ಕರೆತಿದೆ; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು! ಹನಿಟ್ರ್ಯಾಪ್ ಮಾಡುತ್ತಿರುವ ಕತರ್ನಾಕ್ ಲೇಡಿ ಅರೆಸ್ಟ್

ಸಂತೋಷ್ ಬದುಕುಳಿದಿದ್ದೇ ಪವಾಡ

ಹಳೇ ದ್ವೇಷದ ಹಿನ್ನಲೆ ಶರತ್ ಆಯಂಡ್ ಗ್ಯಾಂಗ್ ಸಂತೋಷ್ ಮೇಲೆ ಮನಸೋ ಇಚ್ಛೆ ದಾಳಿ ಮಾಡಿದೆ. ಬರೋಬ್ಬರಿ 68 ಬಾರಿ ಮಚ್ಚಿನಿಂದ ಆಟ್ಯಾಕ್ ಮಾಡಿ, ಅಟ್ಟಹಾಸ ಮೆರೆದಿದೆ. ಘಟನೆಯಲ್ಲಿ ಗಂಭೀರವಾಗಿ ಬದುಕಿದ್ದರೂ ಸಂತೋಷ್’ ಪವಾಡ ಎಂಬಂತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *