
ಆದರೆ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಕೆಲ ಗಂಟೆಗಳ ನಂತರ ಬ್ಯಾಂಕ್ನ ಪ್ರಾದೇಶಿಕ ಮುಖ್ಯಸ್ಥರು ಮತ್ತು ಶಾಖಾ ವ್ಯವಸ್ಥಾಪಕರು ಮನೆಗೆ ಭೇಟಿ ನೀಡಿ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಲು ಸಹಾಯ ಮಾಡಿದರು. ಒಂದು ವಾರದೊಳಗೆ ಮೊತ್ತವನ್ನು ಮರುಪಾವತಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ ಎಂಬ ಮಾಹಿತಿಯನ್ನು ನಂತರದ ಪೋಸ್ಟ್ ಮೂಲಕ ಸಾಕೇತ್ ಮಾಹಿತಿ ನೀಡಿದ್ದಾರೆ.
ಜೊತೆಗೆ ಸಾಕೇತ್ ಅವರ ಪೋಸ್ಟ್ಗೆ ಸಾಮಾಜಿಕ ಜಾಲತಾಣದಲ್ಲೂ ಕೆನರಾ ಬ್ಯಾಂಕ್ ಪ್ರತಿಕ್ರಿಯಿಸಿದ್ದು, ಹಾಯ್ ಸಾಕೇತ್, ನಿಮಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ನಾವು ಅದನ್ನು ಸಂಬಂಧಪಟ್ಟ ತಂಡಕ್ಕೆ ರವಾನಿಸುತ್ತೇವೆ. ಅಲ್ಲದೆ, ನಿಮ್ಮ ವೈಯಕ್ತಿಕ ಮಾಹಿತಿಯನ್ನು ಸಾರ್ವಜನಿಕ ವೇದಿಕೆಯಲ್ಲಿ ಬಹಿರಂಗವಾಗಿ ಹಂಚಿಕೊಳ್ಳುವುದನ್ನು ತಡೆಯಲು ನಾವು ನಿಮ್ಮನ್ನು ವಿನಂತಿಸುತ್ತೇವೆ. ಧನ್ಯವಾದಗಳು ಎಂದು ಹೇಳಿದ್ದಾರೆ. ಈ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದ್ದು, ಹಲವಾರು ಬಳಕೆದಾರರು ಈ ವಿಷಯದ ಬಗ್ಗೆ ಆರ್ಬಿಐ ಮತ್ತು ಐಆರ್ಡಿಎಐ ಅನ್ನು ಸಂಪರ್ಕಿಸಬೇಕು ಎಂದು ಸೂಚಿಸಿದರು.
ಇದನ್ನೂ ಓದಿ: ಕಿಸ್ ಮಾಡಿ ವಿವಾದಕ್ಕೀಡಾಗಿದ್ದ ಗಾಯಕನಿಗೆ ಮತ್ತೆ ಸಂಕಷ್ಟ: ಕೋರ್ಟ್ ಮೆಟ್ಟಿಲೇರಿದ ಉದಿತ್ ನಾರಾಯಣ್ ಮೊದಲ ಪತ್ನಿ