ಡಿಐಜಿ ಹರ್ಚರಣ್ ಸಿಂಗ್ ಬುಲ್ಲರ್
ಚಂಡೀಗಢ, ಅಕ್ಟೋಬರ್ 17: ಭ್ರಷ್ಟಾಚಾರ ಪ್ರಕರಣದಲ್ಲಿ ಪಂಜಾಬ್ನ (ಪಂಜಾಬ್) ರೋಪರ್ ವಲಯ ಡಿಐಜಿ ಹರ್ಚರಣ್ ಸಿಂಗ್ ಬುಲ್ಲರ್ (ಹರ್ಚರಣ್ ಸಿಂಗ್ ಭುಲ್ಲರ್) ಗೆ (ಸಿಬಿಐ) ಗುರುವಾರ ಬಂಧಿಸಿದೆ. ಅವರ ನಿವಾಸದಿಂದ ಅಪಾರ ಪ್ರಮಾಣದ ನಗದು, ಚಿನ್ನಾಭರಣ, ಕಂತೆ ಕಂತೆ ನೋಟುಗಳು, ವಜ್ರ, ಚಿನ್ನದ ಆಭರಣಗಳು, ಉತ್ಕೃಷ್ಟ ವಾಚ್ಗಳು ಸೇರಿದಂತೆ ಸಂಪತ್ತಿನ ಖಜಾನೆಯನ್ನೇ ವಶಕ್ಕೆ ಪಡೆದಿದ್ದಾರೆ. 8 ಲಕ್ಷ ರೂ. ಲಂಚ ಪ್ರಕರಣದಲ್ಲಿ ಅಖಾಡಕ್ಕಿಳಿದ ಪ್ರಕರಣ, ಭ್ರಷ್ಟ ಐಪಿಎಸ್ ಅಧಿಕಾರಿಯ ಸಂಪತ್ತಿನ ಖಜಾನೆ ಕಂಡು ನಿಬ್ಬೆರಗಾಗಿದೆ.
ಭ್ರಷ್ಟ ಡಿಐಜಿ ಬಲೆಗೆ ಬಿದ್ದಿದ್ದೇಗೆ?
ಹರ್ಚರಣ್ ಸಿಂಗ್ ಬುಲ್ಲರ್ 2009ರ ಬ್ಯಾಚ್ನ ಐಪಿಎಸ್ ಅಧಿಕಾರಿ. ಪಂಜಾಬ್ನ ರೋಪರ್ ವಲಯದಲ್ಲಿ ಡಿಐಜಿ ಇದೆ. 8 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಬಲೆಗೆ ಬಿದ್ದಿದ್ದಾರೆ. ಇವರ ಜೊತೆ ಮಧ್ಯವರ್ತಿ ಕೃಷ್ಣ ಎಂಬಾತನನ್ನು ಬಂಧಿಸಲಾಗಿದೆ. ಆಕಾಶ್ ಬಟ್ಟಾ ಎಂಬ ಸ್ಕ್ರ್ಯಾಪ್ ವ್ಯಾಪಾರಿ ವಿರುದ್ಧ ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಮಧ್ಯವರ್ತಿ ಮೂಲಕ ಲಂಚ ಪಡೆಯುವ ವೇಳೆ ಲಾಕ್ ಆಗಿದ್ದಾರೆ. 8 ಲಕ್ಷ ರೂ. ಲಂಚ ಕೊಡದಿದ್ದರೆ ಕ್ರಿಮಿನಲ್ ಕೇಸ್ ಜೊತೆ ಉದ್ಯಮಕ್ಕೆ ತೊಂದರೆ ಎದುರಿಸಬೇಕಾಯಿತು ಎಂದು ಡಿಐಜಿ ಬೆದರಿಸಿದ್ದರು. ಈ ಬಗ್ಗೆ ಉದ್ಯಮಿ ಆಕಾಶ್ಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದಲ್ಲಿ ಅಖಾಡಕ್ಕಿಳಿದ ಅಧಿಕಾರಿಗಳು, ಲಂಚ ಪಡೆಯುವ ವೇಳೆ ರೆಡ್ಹ್ಯಾಂಡಾಗಿ ಡಿಐಜಿ ಹರ್ಚರಣ್ರನ್ನು ಬಂಧಿಸಿದ್ದಾರೆ.
ಭ್ರಷ್ಟ ಡಿಐಜಿ ಮನೆಯಲ್ಲಿ ಏನೇನು ಸಿಕ್ತು?
5 ಕೋಟಿ ರೂಪಾಯಿಗೂ ಹೆಚ್ಚು ನಗದು ಸಿಕ್ಕಿದೆ. ಇದಲ್ಲದೆ 1.5 ಕೆಜಿ ಚಿನ್ನಾಭರಣ, ನೂರಾರು ಕೋಟಿ ರೂ. ಮೌಲ್ಯದ ನಿವೇಶನ-ಜಮೀನಿನ ದಾಖಲೆಪತ್ರಗಳು, ಐಷಾರಾಮಿ ಮರ್ಸಿಡಿಸ್, ಆಡಿ ಕಾರ್ನ ಕೀಗಳು, 22 ದುಬಾರಿ ಬೆಲೆಯ ವಾಚ್ಗಳು, 40 ಲೀಟರ್ ಇನ್ಪೋರ್ಟೆಡ್ ಮದ್ಯ, ಡಬಲ್ ಬ್ಯಾರಲ್ ಶಾಟ್ಗನ್, ಒಂದು ಪಿಸ್ತೂಲ್, ಒಂದು ರಿವಾಲ್ವರ್ ಮತ್ತು 1 ಏರ್ಗನ್ ಅನ್ನು ವಶಕ್ಕೆ ಪಡೆಯಲಾಗಿದೆ.
ಇದಲ್ಲದೆ ಲಂಚದ ಡೀಲ್ ಕುದುರೆಸಿದ್ದ ಮಧ್ಯವರ್ತಿ ಕೃಷ್ಣ ಎಂಬಾತನಿಗೆ 21 ಲಕ್ಷ ರೂಪಾಯಿ ಜಪ್ತಿ ಮಾಡಲಾಗಿದೆ. ಡಿಜಿಐ ಮನೆಯಲ್ಲಿ ರಾತ್ರಿಯಿಡೀ ಮುಂದುವರಿದಿದ್ದು, ಬಂಧಿತರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿಲ್ಲ.
ಇದನ್ನೂ ಓದಿ: ಛತ್ತೀಸ್ಗ ಮತ್ತು ಉತ್ತರ ಅಬುಜ್ಮರ್ ಬಸ್ತಾರ್ ನಕ್ಸಲ್ ಮುಕ್ತ ಎಂದು ಘೋಷಿಸಿದ ಅಮಿತ್ ಶಾ
ವಿಶೇಷವೆಂದರೆ, ದಕ್ಷ ಅಧಿಕಾರಿ ಎಂದೆಂದಿಗೂ ಹೆಸರು ಪಡೆದಿರುವ ಐಪಿಎಸ್ ಹರ್ಚರಣ್ ಸಿಂಗ್ ಬುಲ್ಲರ್ ಈವರೆಗೆ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಡ್ರಗ್ಸ್ ಮಾಫಿಯಾ ವಿರುದ್ಧ ”ವಿನಾಶದ ವಿರುದ್ಧ ಯುದ್ಧ” ಎಂದು ದೊಡ್ಡ ಅಭಿಯಾನವನ್ನೇ ಕೈಗೊಂಡಿದ್ದರು. ಪಡೆದೇ ಇವರಿಗೆ ಡಿಐಜಿಯಾಗಿ ಬಡ್ತಿ ಸಿಕ್ಕಿತ್ತು. ಆದರೆ ಈಗ ಇವರ ಭ್ರಷ್ಟ ಮುಖವಾಡ ಕಳಚಿಬಿದ್ದಿದೆ. ಸಂಪತ್ತಿನ ಕೋಟೆ ನೋಡಿ ಅಧಿಕಾರಿಗಳು ದಂಗಾದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ