
<p><strong>tiger cub died by Electric shock: </strong>ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ, ಕೇರಳ ಮೂಲದ ವ್ಯಕ್ತಿಯೊಬ್ಬರು ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿಗೆ ಸಿಲುಕಿ ಎರಡು ವರ್ಷದ ಹುಲಿಯೊಂದು ಸಾವನ್ನಪ್ಪಿದೆ. ಡ್ರೋನ್ ಮೂಲಕ ಪರಿಶೀಲನೆ ನಡೆಸುವಾಗ ಈ ಘಟನೆ ಬೆಳಕಿಗೆ ಬಂದಿದೆ.</p><img><p>ಚಾಮರಾಜನಗರ: ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಬಳಿ ನಡೆದಿದೆ.</p><p><strong>ಇದನ್ನೂ ಓದಿ: </strong><strong>ಹರ್ಮುಜ್ ಜಲಸಂಧಿಯನ್ನು ಇರಾನ್ ಹಿಡಿತದಿಂದ ಬಿಡಿಸಲು ಚೀನಾಗೆ ಬೆದರಿಸುತ್ತಲೇ ನ್ಯಾಟೋ ರಾಷ್ಟ್ರಗಳ ಸಹಾಯ ಕೇಳಿದ ಟ್ರಂಪ್</strong></p><img><p>ಕೇರಳ ಮೂಲದವರು ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು ಎರಡು ವರ್ಷ ವಯಸ್ಸಿನ ಹುಲಿಯೊಂದು ಸಾವನ್ನಪ್ಪಿದೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p><p><strong>ಇದನ್ನೂ ಓದಿ: </strong><strong>ಒಡಿಶಾದಲ್ಲಿ ರಣ ಭೀಕರ ಸುಂಟರಗಾಳಿಗೆ ಇಬ್ಬರು ಬಲಿ: 70ಕ್ಕೂ ಹೆಚ್ಚು ಮನೆಗಳಿಗೆ ಹಾನಿ: ವೀಡಿಯೋ ವೈರಲ್</strong></p><img><p>ಸ್ಥಳೀಯರ ಜಮೀನನ್ನು ಗುತ್ತಿಗೆ ಪಡೆದಿದ್ದ ಕೇರಳ ಮೂಲದ ಪರಮೇಶ್ ಎಂಬುವವರು ಇಲ್ಲಿ ಜಮೀನಿಗೆ ಅಕ್ರಮವಾಗಿ ವಿದ್ಯುತ್ ಬೇಲಿ ಹಾಕಿದ್ದರು.</p><p><strong>ಇದನ್ನೂ ಓದಿ: </strong></p><p>ಬಾರಾಮತಿ ಕ್ಷೇತ್ರದ ಉಪ ಚುನಾವಣೆ: ಅತ್ತಿಗೆ ಸುನೇತ್ರಾ ಪವಾರ್ ವಿರುದ್ಧ NCP ಅಭ್ಯರ್ಥಿ ಕಣಕ್ಕಿಳಿಸಲ್ಲ ಎಂದ ಸುಪ್ರಿಯಾ ಸುಳೆ</p><img><p>ಈ ಭಾಗದಲ್ಲಿ ಹುಲಿ, ಚಿರತೆ ಸಂಚಾರ ಹೆಚ್ಚಿರುವ ಹಿನ್ನೆಲೆ, ಅಧಿಕಾರಿಗಳು ಥರ್ಮಲ್ ಡ್ರೋನ್ ಹಾರಿಸುವಾಗ ಇಲ್ಲಿ ಹುಲಿ ಸತ್ತು ಬಿದ್ದಿರೋದು ಗಮನಕ್ಕೆ ಬಂದಿದೆ.</p><p><strong>ಇದನ್ನೂ ಓದಿ</strong><strong>: RSS ಸಂಘಟನೆಗೆ ನಿರ್ಬಂಧ ಹೇರಿ, ಆಸ್ತಿ ಜಪ್ತಿ ಮಾಡಿ: ಅಮೆರಿಕ ಧಾರ್ಮಿಕ ಸ್ವಾತಂತ್ರ್ಯ ಆಯೋಗದಿಂದ ಸರ್ಕಾರಕ್ಕೆ ಶಿಫಾರಸು</strong></p><img><p>ಈ ಹಿಂದೆ ಮಲೆ ಮಹದೇಶ್ವರ ವನ್ಯಧಾಮದಲ್ಲಿ ವಿಷಪ್ರಾಶನಕ್ಕೆ ಒಳಗಾಗಿ 6 ಹುಲಿಗಳು ಸಾವನ್ನಪ್ಪಿದ್ದವು. ಹಾಗೆಯೇ ಬಿಆರ್ ಟಿ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ಉರುಳಿಗೆ ಸಿಲುಕಿಒಂದು ಹುಲಿ ಸಾವನ್ನಪ್ಪಿತ್ತು. ಇದೀಗ ಗುಂಡ್ಲುಪೇಟೆ ಭಾಗದಲ್ಲಿ ಈಗ ಮತ್ತೊಂದು ಹುಲಿ ಸಾವನ್ನಪ್ಪಿದೆ.</p><p><strong>ಇದನ್ನೂ ಓದಿ: </strong><strong>ಎಲ್ಪಿಜಿ ಸಿಲಿಂಡರ್ ಬೇಕಿದ್ರೆ ಕೆವೈಸಿ ನೀಡುವುದು ಕಡ್ಡಾಯ: ಇಲ್ಲಿದೆ ಕೆವೈಸಿ ಪ್ರಕ್ರಿಯೆಯ ಡಿಟೇಲ್</strong></p>
Source link
ಗುಂಡ್ಲುಪೇಟೆಯಲ್ಲಿ ಕೇರಳಿಗ ಅಳವಡಿಸಿದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ 2 ವರ್ಷದ ಹುಲಿ ಮರಿ ಸಾವು