ಚಾಮರಾಜನಗರ: ಟಿವಿ9 ವರದಿಯ ಬಿಗ್ ಇಂಪ್ಯಾಕ್ಟ್; ಪಚ್ಚೆದೊಡ್ಡಿ ಮಕ್ಕಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಜಿಲ್ಲಾಧಿಕಾರಿ

ಚಾಮರಾಜನಗರ: ಟಿವಿ9 ವರದಿಯ ಬಿಗ್ ಇಂಪ್ಯಾಕ್ಟ್; ಪಚ್ಚೆದೊಡ್ಡಿ ಮಕ್ಕಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಜಿಲ್ಲಾಧಿಕಾರಿ


ಟಿವಿ9 ವರದಿಯ ಬಿಗ್ ಇಂಪ್ಯಾಕ್ಟ್; ಪಚ್ಚೆದೊಡ್ಡಿ ಮಕ್ಕಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಜಿಲ್ಲಾಧಿಕಾರಿ

ಚಾಮರಾಜನಗರ, ಡಿಸೆಂಬರ್ 06: ಜಿಲ್ಲೆಯ ಪಚ್ಚೆದೊಡ್ಡಿ ಗ್ರಾಮದ ವಿದ್ಯಾರ್ಥಿಗಳು ಪ್ರತಿನಿತ್ಯ ಶಾಲೆಗೆ 14 ಕಿ.ಮೀ ನಡೆದೇ ಹೋಗಬೇಕಿತ್ತು. ರಸ್ತೆಯಲ್ಲಿ ಕಾಡು ಪ್ರಾಣಿಗಳ ಕಾಟದಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಭಯಪಡುತ್ತಿದ್ದಾರೆ, ಈ ಕುರಿತು ಸಿಎಂ ಸಿದ್ದರಾಮಯ್ಯ (ಸಿದ್ದರಾಮಯ್ಯ) ಮತ್ತು ಶಾಸಕರಿಗೆ ಪತ್ರ ಬರೆದಿದ್ದನ್ನು ಟಿವಿ9 ವರದಿ ಮಾಡಿತ್ತು. ಆ ಬಳಿಕ ಎಚ್ಚೆತ್ತ ಜಿಲ್ಲಾಧಿಕಾರಿ, ಸಾರಿಗೆ ವ್ಯವಸ್ಥೆ ಕಲ್ಪಿಸಿದ್ದಾರೆ.

ವಿದ್ಯಾರ್ಥಿಗಳ ಕೂಗು ಕೇಳಿಸಿಕೊಂಡ ಜಿಲ್ಲಾಧಿಕಾರಿ

ದಟ್ಟ ಕಾಡಿನಲ್ಲಿ ಕಿಲೋಮೀಟರ್ ಗಟ್ಟಲೆ ಸಂಚರಿಸಬೇಕಿದ್ದ ಆದಿವಾಸಿ ಸೋಲಿಗ ವಿದ್ಯಾರ್ಥಿಗಳ ಸಂಕಷ್ಟವನ್ನು ಶನಿವಾರ ಟಿವಿ9 ವರದಿ ಮಾಡಿದೆ. ಜಿಲ್ಲೆಯಲ್ಲಿ ಹೆಚ್ಚಿದ್ದ ಕಾಡುಪ್ರಾಣಿಗಳ ಹಾವಳಿಯಿಂದ ಶಾಲಾ-ಕಾಲೇಜುಗಳಿಗೆ ಹೆದರುತ್ತಿದ್ದ ವಿದ್ಯಾರ್ಥಿಗಳು ಮತ್ತು ಶಾಸಕರಿಗೆ ಪತ್ರ ಬರೆದು ಸುರಕ್ಷಿತ ಪ್ರಯಾಣಕ್ಕೆ ಸಾರಿಗೆ ವ್ಯವಸ್ಥೆ ಮಾಡುವಂತೆ ಕೇಳಿದ್ದರು. ಇದಕ್ಕೆ ಪೂರಕವಾಗಿರುವ ಜಿಲ್ಲಾಧಿಕಾರಿ ಶಿಲ್ಪಾನಾಗ್, ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಬಾಸ್ಕರ್ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಬಳಿಕ ಜನ ವನ ಯೋಜನೆಯಡಿ ಅರಣ್ಯ ಇಲಾಖೆ ವತಿಯಿಂದ ಪ್ರತಿನಿತ್ಯ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳನ್ನು ಪಿಕಪ್ ಹಾಗೂ ಡ್ರಾಪ್ ಮಾಡುವಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ.

ಇದನ್ನೂ ಓದಿ ಮಕ್ಕಳು ಶಾಲೆಗೆ 14 ಕಿಮೀ ನಡೆದೇ ಹೋಗಬೇಕು! ಕಾಡು ಪ್ರಾಣಿಗಳಿಂದ ಸುರಕ್ಷತೆ ಕೋರಿ ಸಿಎಂಗೆ ಪತ್ರ ಬರೆದ ವಿದ್ಯಾರ್ಥಿಗಳು

ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ತಮ್ಮ ದಯನೀಯ ಸ್ಥಿತಿಯನ್ನು ಹೇಳಿರುವ ವಿದ್ಯಾರ್ಥಿಗಳು, ನಮ್ಮ ಗ್ರಾಮದ ರಸ್ತೆಯ ಅವ್ಯವಸ್ಥೆ, ಕಾಡಾನೆ, ಚಿರತೆ ಮತ್ತು ಹುಲಿಯಂತಹ ಪ್ರಾಣಿಗಳು ರಸ್ತೆಯಲ್ಲಿ ಸಂಚರಿಸುವುದು ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಉಲ್ಲೇಖಿಸಿದ್ದಾರೆ. ನಾವು ದಿನ ನಿತ್ಯ ಶಾಲಾ ಕಾಲೇಜುಗಳಿಗೆ ಹೋಗಲು 14 ಕಿ.ಮೀ ನಡೆಯಬೇಕು. ನಮಗೆ ಶಾಲಾ ವಾಹನ ಅಥವಾ ಬಸ್ಸಿನ ವ್ಯವಸ್ಥೆ ಇಲ್ಲದ ಕಾರಣ ಕಾಲ್ನಡಿಗೆಯಲ್ಲಿಯೇ ಸಂಚರಿಸಬೇಕಾಗಿದೆ ಎಂದಿದ್ದರು. ಅವರ ಕಷ್ಟ ಪರಿಹರಿಸಲು ಬಸ್ ಅಥವಾ ವ್ಯಾನ್ನ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿಗಳು ಕೇಳಿಸಿಕೊಂಡರು. ಈ ಸಮಸ್ಯೆಗೀಗ ಪರಿಹಾರ ಸಿಕ್ಕಿದ್ದು, ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *