
ಆಗಸ್ಟ್ 15 ರಂದು ಸಿಎಂ ಚಂದ್ರಬಾಬು ನಾಯ್ಡು ವಿಜಯವಾಡದಲ್ಲಿ ಅದ್ದೂರಿಯಾಗಿ ಉಚಿತ ಬಸ್ ಯೋಜನೆಗೆ ಚಾಲನೆ ನೀಡಿದರು. ಮಹಿಳೆಯರಿಗೆ ವಿಶೇಷ ಟಿಕೆಟ್ ನೀಡುವ ಮೂಲಕ ಈ ಯೋಜನೆಯನ್ನು ಅಧಿಕೃತವಾಗಿ ಆರಂಭಿಸಿದರು. ಬಳಿಕ ಅವರೊಂದಿಗೆ ಡಿಸಿಎಂ ಪವನ್ ಕಲ್ಯಾಣ್, ಸಚಿವ ನಾರಾ ಲೋಕೇಶ್ ಕೂಡ ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದರು.
ರಾಜ್ಯಾದ್ಯಂತ ಈ ಯೋಜನೆ ಜಾರಿಯಲ್ಲಿದ್ದರೂ ತಿರುಮಲ ಮಾರ್ಗವನ್ನು ಹೊರತುಪಡಿಸಿರುವುದು ಗಮನಾರ್ಹ. ಇದರಿಂದ ಕೆಲವು ಭಕ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.