Headlines

ಇಂತಹ ಸ್ಥಿತಿ ಯಾವ ಹೆತ್ತವರಿಗೂ ಬರಬಾರದು: ಪತಿಯ ಶವದೊಂದಿಗೇ 10 ದಿನ ಕಳೆದ ಪತ್ನಿ! ಮಕ್ಕಳಿದ್ದೂ ಅನಾಥರಾದ ಪೋಷಕರು

ಇಂತಹ ಸ್ಥಿತಿ ಯಾವ ಹೆತ್ತವರಿಗೂ ಬರಬಾರದು: ಪತಿಯ ಶವದೊಂದಿಗೇ 10 ದಿನ ಕಳೆದ ಪತ್ನಿ! ಮಕ್ಕಳಿದ್ದೂ ಅನಾಥರಾದ ಪೋಷಕರು


ಇಂತಹ ಸ್ಥಿತಿ ಯಾವ ಹೆತ್ತವರಿಗೂ ಬರಬಾರದು: ಪತಿಯ ಶವದೊಂದಿಗೇ 10 ದಿನ ಕಳೆದ ಪತ್ನಿ! ಮಕ್ಕಳಿದ್ದೂ ಅನಾಥರಾದವರು

ಚಿಕ್ಕಮಗಳೂರು, ಏ.9: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಮನ ಕಲಕುವ ಘಟನೆಯೊಂದು ಬೆಳಕಿಗೆ ಬಂದಿದೆ. 77 ವರ್ಷದ ಸಿರಿಲ್ ಮೋನಿಸ್ ಎಂಬವರು ಅನಾರೋಗ್ಯದಿಂದ ಮಲಗಿದ್ದಲ್ಲೇ ಇರುತ್ತಿದ್ದರು. ಆದರೆ, ಅವರ ಪತ್ನಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಾರಣ, ಪತಿ ಸಾವನ್ನಪ್ಪಿರುವುದು ಅವರಿಗೆ ತಿಳಿದಿರಲೇ ಇಲ್ಲ. ಸುಮಾರು 10 ದಿನಗಳ ಕಾಲ ಅವರು ಕೊಳೆತು ಹುಳ ಹಿಡಿದಿದ್ದ ಪತಿಯ ಶವದ ಪಕ್ಕದಲ್ಲೇ ಕಾಲ ಕಳೆದಿದ್ದಾರೆ.

ಮನೆಯಿಂದ ವಿಪರೀತ ದುರ್ವಾಸನೆ ಬಂದಾಗ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೆಂಡತಿ ಬಂದಾಗ “ನನ್ನ ಗಂಡ ನನಗೆ ಬೇಕು, ಯಾರೂ ಮುಟ್ಟಬೇಡಿ” ಎಂದು ಶವವನ್ನು ಮುಟ್ಟಲು ಬಿಡದೆ ಹಠ ಹಿಡಿದಿದ್ದರು. ಮಗನಲ್ಲಿ ಕೆಲಸ ಮಾಡುತ್ತಿದ್ದರೆ, ಮಗಳು ದುಬೈನಲ್ಲಿ ಶಿಕ್ಷಕರಾಗಿದ್ದಾರೆ. ಮಗ ನಿತ್ಯ ಕರೆ ಮಾಡಿದರೂ ತಾಯಿ “ಅಪ್ಪ ಚೆನ್ನಾಗಿದ್ದಾರೆ” ಎಂದೆನ್ನಿಸುತ್ತದೆ. ಅಪ್ಪ ಸತ್ತ 10 ದಿನಗಳ ನಂತರ ಮಗ ಬಂದರೂ, ತಂದೆಯ ಮುಖ ನೋಡುವ ಭಾಗ್ಯ ಆತನಿಗೆ ಸಿಗಲಿಲ್ಲ. ಇನ್ನು ಮಗಳು ಅಪ್ಪ ಸತ್ತರೂ ಬಂದು ನೋಡಿಲ್ಲ.

ಇದನ್ನೂ ಓದಿ: 4 ದಿನ ಕಾಡಿನಲ್ಲಿದ್ದ ಯುವತಿ ಮೇಲೆ ಈಗ ನಕ್ಸಲ್ ಶಂಕೆ! ಈ ಬಗ್ಗೆ ಶರಣ್ಯ ಹೇಳಿದ್ದೇನು?

ಶವ ಸಂಪೂರ್ಣ ಕೊಳೆತು ಹೋಗುವುದರಿಂದ ಸ್ಥಳೀಯರು ಮುಟ್ಟಲು ಹಿಂಜರಿದರು. ಈ ವೇಳೆ ಸಮಾಜ ಸೇವಕ ಆರೀಫ್ ಅವರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿ, ಅಂತ್ಯಸಂಸ್ಕಾರಕ್ಕೆ ನೆರವಾದರು.ಬಣಕಲ್ ಕ್ರೈಸ್ತ ಸ್ಮಶಾನದಲ್ಲಿ ಸಂಜೆ ವೇಳೆಗೆ ಮೋನಿಸ್ ಅವರ ಅಂತ್ಯಸಂಸ್ಕಾರ ನೆರವೇರಿತು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *