ಚಿತ್ರದುರ್ಗ, ಡಿಸೆಂಬರ್ 25: ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಖಾಸಗಿ ಸ್ಲೀಪರ್ ಬಸ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಟ್ಟು 6 ಜನ ಸಜೀವ ದಹನವಾಗಿದ್ದಾರೆ. ಲಾರಿ ಚಾಲಕ ಸೇರಿ ಬಸ್ ನಲ್ಲಿದ್ದ 5 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಬಸ್ನಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದರು. ಚಿತ್ರದುರ್ಗ, ಶಿರಾ, ಹಿರಿಯೂರು ಸೇರಿ ವಿವಿಧ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ತಾಯಿ ಮಗು ದಾರುಣ ಸಾವು
ಇನ್ನು ಅಪಘಾತದಲ್ಲಿ ಬದುಕುಳಿದ ಒಬ್ಬೊಬ್ಬ ಪ್ರಯಾಣಿಕರ ಕತೆಯೂ ರೋಚಕವಾಗಿದೆ. ಒಂದೇ ಐಟಿ ಕಂಪನಿಯ 6 ಮಂದಿ ಸಹೋದ್ಯೋಗಿಗಳು ಬೆಂಕಿಯ ಕೆನ್ನಾಲೆಯ ನಡುವೆ ಸಿಲುಕಿ ಒದ್ದಾಡಿದ್ದಾರೆ. ಕವಿತಾರ ಮದುವೆ ನಿಗದಿಯಾಗಿರುವ ಹಿನ್ನೆಲೆ ಬ್ಯಾಚುಲರ್ ಪಾರ್ಟಿಗೆಂದು ಇವರು ಗೋಕರ್ಣಕ್ಕೆ ತೆರಳಿದರು. ಅಲ್ಲಿ ಖಾಸಗಿ ರೆಟ್ನಲ್ಲಿ ಪಾರ್ಟಿಯೂ ನಿಗದಿಯಾಗಿತ್ತು. ಕ್ರಿಸ್ಮಸ್ ರಜೆ ಹಿನ್ನೆಲೆ ತಂಡವೇ ಗೋಕರ್ಣಕ್ಕೆ ಹೊರಟಿತ್ತು. ಆ ಹೊರಗೆ ಬಿಂದು ಮತ್ತು ಆಕೆಯ 5 ವರ್ಷದ ಮಗುಗ್ರೇಯ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಗಾಯಾಳುಗಳಾದ ಶಶಾಂಕ್ ಮತ್ತು ಸಂಧ್ಯಾ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
ಇದನ್ನೂ ಓದಿ: ಸೀಬರ್ಡ್ ಬಸ್ ದುರಂತ; ಪ್ರಾಣ ಉಳಿಸಿಕೊಂಡವರು ಒಂದೊಂದು ಕಥೆ ರೋಚಕ
ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ
ಹಾಸನ ಜಿಲ್ಲೆ ಚನ್ನರಾಯಪಟ್ಟಣ ಮೂಲದ ಮಾನಸ ಐಡಿಯಲ್ಲಿ ನಾಲ್ಕು ಜನರಿಗೆ ಟಿಕೆಟ್ ಬುಕ್ ಆಗಿದೆ. ಬೆಂಗಳೂರು ಐಟಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಮಾನಸ ಪಿಜಿಯಲ್ಲಿ ವಾಸವಿದ್ದರು. ತಮ್ಮ ಜೊತೆಗೆ ಇದ್ದ ನವ್ಯಾ, ಮಿಲನ ಸೇರಿ ಅಭಿಷೇಕ್ ಎಂಬವರ ಜೊತೆ ಗೋಕರ್ಣ ಪ್ರವಾಸಕ್ಕೆ ಹೊರಟಿದ್ದರು. ಮಾನಸಾಗೆ ಮದುವೆಯೂ ನಿಗದಿತ, ಆಭರಣವನ್ನೂ ಕುಟುಂಬ ಖರೀದಿಸಿತು. ಆದರೆ ವಿಧಿಯಾಟಕ್ಕೆ ಹಸೆಮಣೆ ಏರುವ ಮುನ್ನವೇ ಅವರು ಮಸಣ ಸೇರಿದ್ದಾರೆ.
ಬಸ್ಸು ಹೊತ್ತಿ ಉರಿಯುತ್ತಿದ್ದರೆ ಏನು ಮಾಡಬೇಕೆಂದು ತೋಚದೆ ಕೆಲವು ಬಸ್ಸುಗಳು ಹೊರಗೆ ಹಾರಿದ ಪರಿಣಾಮ ಅವರ ಪ್ರಾಣ ಉಳಿದಿದೆ. ಎರಡು ಬಸ್ಗಳಿಂದ ಜಿಗಿಯುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಕಿಂಗ್ ಪ್ರಯಾಣಿಕರು ದಾರಿ ಮಧ್ಯೆ ಬಸ್ ಹತ್ತಿದ ಇಬ್ಬರು ಕೂಡ ಬಸ್ ನಲ್ಲಿ ಇರುವುದು ಗೊತ್ತಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.