ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತೊಂದು ಶಾಕ್: ಅಖಾಡಕ್ಕಿಳಿದ ಮತ್ತೋರ್ವ ಪ್ರಭಾವಿ ಮುಸ್ಲಿಂ ನಾಯಕ

ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತೊಂದು ಶಾಕ್: ಅಖಾಡಕ್ಕಿಳಿದ ಮತ್ತೋರ್ವ  ಪ್ರಭಾವಿ ಮುಸ್ಲಿಂ ನಾಯಕ


ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತೊಂದು ಶಾಕ್: ಅಖಾಡಕ್ಕಿಳಿದ ಮತ್ತೋರ್ವ ಪ್ರಭಾವಿ ಮುಸ್ಲಿಂ ನಾಯಕ

ದಾವಣಗೆರೆ, (ಮಾರ್ಚ್ 27): ದಾವಣಗೆರೆ (ದಾವಣಗೆರೆ) ಬೆಣ್ಣೆ ದೋಸೆಯಂತೆ ಸಲೀಸಾಗಿ ಉಪಚುನಾವಣೆ (ದಾವಣಗೆರೆ ದಕ್ಷಿಣ ಉಪ ಚುನಾವಣೆ) ಗೆದ್ದು ಬೀಗಲು ಮುಂದಾಗಿದ್ದ ಕಾಂಗ್ರೆಸ್ ಗೆ ದಾವಣಗೆರೆ ದಕ್ಷಿಣ ಕ್ಷೇತ್ರ ಬಿಸಿತುಪ್ಪವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆ ಮುಸ್ಲಿಂ (ಮುಸ್ಲಿಂ) ಮತಗಳು ಕೈತಪ್ಪುವ ಆತಂಕ ಶುರುವಾಗಿದೆ. ಯಾಕಂದ್ರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋ ಸಾದಿಕ್ ಪೈಲ್ವಾನ್, ನಾಮಪತ್ರ ವಾಪಸ್ ಪಡೆಯದೆ, ತಮ್ಮ ಸ್ಪರ್ಧೆಯ ನಿಲುವು ಅಚಲ ಎಂದು ಸಂದೇಶ ಸಾರಿದ್ದಾರೆ. ಪೈಲ್ವಾನ್ ಸೇರಿದಂತೆ ಬರೋಬ್ಬರಿ 14 ಮುಸ್ಲಿಂ ಅಭ್ಯರ್ಥಿಗಳು ದಾವಣಗೆರೆ ದಕ್ಷಿಣ ಕಣದಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಆತಂಕಕ್ಕೆ ಒಳಗಾಗುವುದು ಸಾಮಾನ್ಯ. ನಿನ್ನೆ (ಮಾರ್ಚ್ 26) ಕಾಂಗ್ರೆಸ್ ನಾಯಕರು ಖುದ್ದು ಸಾದಿಕ್ ಮನೆಗೆ ಬಂದು ಸಂಧಾನಕ್ಕೆ ಯತ್ನಿಸಿದ್ದಾರೆ. ಈ ವೇಳೆ ಸಾದಿಕ್ ಬೆಂಬಲಿಗರು ಗೋ ಬ್ಯಾಕ್ ಘೋಷಣೆ ಕೂಗಿದ್ದಾರೆ. ಇದರಲ್ಲೇ ಇದೀಗ ಮುಸ್ಲಿಂ ಸಮುದಾಯ ರಾಜ್ಯ ನಾಯಕ ಇಬ್ರಾಹಿಂ ಸಹ ದಾಣಕ್ಕೆರೆ ಅಖಾಡಕ್ಕಿಳಿಯಲಿದ್ದು, ಪಕ್ಷೇತರ ಅಭ್ಯರ್ಥಿ ಖಾಲಿದ್ ಆದಿಲ್ ಪಾಷಾ ಪರ ಪ್ರಚಾರ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಕಾಂಗ್ರೆಸ್‌ಗೆ ಮತ್ತಷ್ಟು ಆತಂಕ ಎದುರಾಗಿದೆ.

ಯಾಕಂದ್ರೆ, ಸಿಎಂ ಇಬ್ರಾಹಿಂದ ಸಹ ಮುಸ್ಲಿಂ ಸಮುದಾಯದ ಪ್ರಮುಖ ನಾಯಕರು, ಜಮೀರ್ ಅಹಮ್ಮದ್ ಖಾನ್ ಹೇಗೋ ಹಾಗೆಯೇ ಇಬ್ರಾಹಿಂ ಸಹ ತಮ್ಮ ಸಮುದಾಯದ ಹಿಡಿತದಲ್ಲಿದ್ದರು. ಹೀಗಾಗಿ ಇಬ್ರಾಹಿಂ ಪಕ್ಷೇತರ ಅಭ್ಯರ್ಥಿ ಪರ ಪ್ರಚಾರ ಮಾಡಿ ಗೆಲ್ಲಿಸುವ ಶಕ್ತಿ ಇಲ್ಲವಾದರೂ ಮುಸ್ಲಿಂ ಮತಗಳನ್ನು ಸೆಳೆದ ಕಾಂಗ್ರೆಸ್ ಸೋಲಿಗೆ ಹಂಚಿಕೆಯಾಗಿದೆ. ಹೀಗಾಗಿ ಸಿಎಂ ಇಬ್ರಾಹಿಂದ ನಡೆ ತೀವ್ರ ಕುತೂಹಲ ಮೂಡಿಸಿದೆ

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *