ದೇವನಹಳ್ಳಿ, ನವೆಂಬರ್ 24: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಡ್ಲಘಟ್ಟಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ದೇವನಹಳ್ಳಿಯಲ್ಲಿ ಆತ್ಮೀಯ ಸ್ವಾಗತವನ್ನು ಸ್ವೀಕರಿಸಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ವೃತ್ತದಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಮತ್ತು ಹಲವು ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೂವಿನ ಹಾರ ಹಾಕಿ, ಚಕ್ಕೋತ ನೀಡಿ ಸ್ವಾಗತಿಸಿದ್ದು, ಸಚಿವ ಕೆ.ಹೆಚ್. ಮುನಿಯಪ್ಪ ಮುಖ್ಯಮಂತ್ರಿಗಳ ಜೊತೆಯಲ್ಲೇ ಶಿಡ್ಲಘಟ್ಟದ ಕಾರ್ಯಕ್ರಮಕ್ಕೆ ತೆರಳಿದರು. ಸಿಎಂ ಆಗಮನದ ಕೆಂಪೇಗೌಡ ವೃತ್ತದಲ್ಲಿ ಜನಸ್ತೋಮ ಸೇರಿತ್ತು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.