
ಬೆಂಗಳೂರು, ಮಾರ್ಚ್ 6: ಕೇಂದ್ರ ಸರ್ಕಾರವು ಜಿಎಸ್ಟಿ ತರ್ಕಬದ್ಧಗೊಳಿಸಲಾಗಿದೆ (ಜಿಎಸ್ಟಿ ತರ್ಕಬದ್ಧಗೊಳಿಸುವಿಕೆ) ಮತ್ತು ತೆರಿಗೆ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆಯಾಗಿದೆ. ಆದಾಗ್ಯೂ ರಾಜ್ಯ ಸರ್ಕಾರ ಮೂರು ವರ್ಷಗಳಿಂದ ವಿತ್ತೀಯ ಶಿಸ್ತು ಕಾಯ್ದುಕೊಂಡು ಜವಾಬ್ದಾರಿತನ ಮೆರೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾಖಲೆಯ 4.48 ಲಕ್ಷ ಕೋಟಿ ರೂ ಮೊತ್ತದ ಮುಂಗಡಪತ್ರವನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಿದ ಸಿದ್ದರಾಮಯ್ಯ, ಜಿಎಸ್ಟಿ ಹಂಚಿಕೆಯಲ್ಲಿ ರಾಜ್ಯಗಳಿಗೆ ಆಗಿರುವ ಅನ್ಯಾಯವನ್ನು ವಿವರಿಸಲಾಗಿದೆ.
“ಕರ್ನಾಟಕವು ಸಂಪನ್ಮೂಲ ಕ್ರೋಢೀಕರಣದ ಸಾಮರ್ಥ್ಯದೊಂದಿಗೆ ಮುಂದೆ ಸಾಗುತ್ತಿದೆ. ಆದಾಗ್ಯೂ ಕೇಂದ್ರ ಸರ್ಕಾರ ಜಾರಿಗೆ ತಂದ ತೆರಿಗೆ ನೀತಿ ಬದಲಾವಣೆಯಿಂದ ರಾಜ್ಯದ ರಾಜಸ್ವ ಸಂಗ್ರಹಣೆಗೆ ಸವಾಲುಗಳು ಎದುರಾಗಿವೆ.
“ಸರಕು ಮತ್ತು ಸೇವಾ ತೆರಿಗೆಯು ರಾಜ್ಯದ ಪ್ರಮುಖ ರಾಜಸ್ವ ಆದಾಯವಾಗಿದೆ. ರಾಜ್ಯದ ಸ್ವಂತ ತೆರಿಗೆ ರಾಜಸ್ವದಲ್ಲಿ ಜಿಎಸ್ ಟಿ ಶೇ. 40 ಪಾಲು ಹೊಂದಿದೆ. ಜಿಎಸ್ ಟಿ ರಾಜಸ್ವ ಸಂಗ್ರಹಣೆಯಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಜಿಎಸ್ಟಿ ತರ್ಕಬದ್ಧಗೊಳಿಸಿದ ನಂತರ ಜಿಎಸ್ಟಿ ಮಾಸಿಕ ಸಂಗ್ರಹಣೆಯ ಬೆಳವಣಿಗೆ ಶೇ.4ಕ್ಕೆ ಕಡಿಮೆಯಾಗಿದೆ.
ಇದನ್ನೂ ಓದಿ: ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ ಸಿದ್ದರಾಮಯ್ಯ: ಬಜೆಟ್ ನಲ್ಲಿ ಮಹತ್ವದ ನಿರ್ಧಾರ
“ರಾಷ್ಟ್ರೀಯ ಮಟ್ಟದಲ್ಲೂ ಸಹ ಜಿಎಸ್ಟಿ ರಾಜಸ್ವ ಸಂಗ್ರಹಣೆ ನಿರಾಶಾದಾಯಕವಾಗಿದೆ. 2025-26ರ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯ ಅಂದಾಜಿನಲ್ಲಿ ನಿಗಧಿಪಡಿಸಲಾಗಿದೆ. ಸಂಗ್ರಹಣೆ ಕಡಿಮೆ ಆಗಿದೆ. ದೇಶದ ಜಿಎಸ್ ಟಿ ಸಂಗ್ರಹಣೆಯು ಪ್ರಸಕ್ತ ಸಾಲಿನಲ್ಲಿ 1.3 ಲಕ್ಷ ಕೋಟಿ ರೂ.
“ತೆರಿಗೆ ನೀತಿಯಲ್ಲಿ ಬದಲಾವಣೆ, ಜಿಎಸ್ ಟಿ ತರ್ಕಬದ್ಧತೆಯಿಂದ ಕೇಂದ್ರ ಸರ್ಕಾರಕ್ಕಿಂತ ಹೆಚ್ಚಾಗಿ ರಾಜ್ಯಗಳ ರಾಜಸ್ವ ಸಂಗ್ರಹಣೆಯ ಮೇಲೆ ನೇರವಾಗಿ ಪ್ರಭಾವ ಬೀರುತ್ತದೆ.
ಜಿಎಸ್ಟಿ ತರ್ಕಬದ್ಧಗೊಳಿಸುವಿಕೆಗೆ ರಾಜ್ಯದ ತಾತ್ವಿಕ ಬೆಂಬಲ: ಸಿದ್ದರಾಮಯ್ಯ
‘ಜಿಎಸ್ಟಿ ತರ್ಕಬದ್ಧಗೊಳಿಸುವಿಕೆ ರಾಜ್ಯ ಸರ್ಕಾರ ತಾತ್ವಿಕವಾಗಿ ಬೆಂಬಲಿಸುತ್ತದೆ. ಆದರೆ, ಇದರಿಂದ ರಾಜ್ಯಗಳಿಗೆ ಉಂಟಾಗುವ ರಾಜಸ್ವ ನಷ್ಟವನ್ನು ಪರಿಹರಿಸುವುದರ ಜೊತೆಗೆ, ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ ಕರ್ನಾಟಕವು ಇತರ ರಾಜ್ಯಗಳೊಂದಿಗೆ ಸೇರಿ ಜಿಎಸ್ಟಿ ಮಂಡಳಿಗೆ ಜಂಟಿ ಜ್ಞಾಪನ ಪತ್ರ ಸಲ್ಲಿಸಿತು. ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ಕೊಡಬೇಕೆಂಬ ಒತ್ತಾಯ ಮುಂದುವರಿಯಲಿದೆ. 14ನೇ ಹಣಕಾಸು ಆಯೋಗವು ರಾಜ್ಯದ ತೆರಿಗೆ ಪಾಲನ್ನು ಶೇ. 4.71 ಎಂದು ಶಿಫಾರಸು ಮಾಡಲಾಗಿತ್ತು. ಆದರೆ, 15ನೇ ಹಣಕಾಸು ಆಯೋಗದ ಅವಧಿಯ ತೆರಿಗೆ ಪಾಲು 3.647ಕ್ಕೆ ಇಳಿಕೆಯಾಗಿದೆ. ಇದು ಹಿಂದಿನ ಶಿಫಾರಸಿಗೆ ಶೇ. 23ರಷ್ಟು ಇಳಿಕೆಯಾಗಿದೆ’ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ ಮಾಡಿ ಸಿಎಂ ಘೋಷಣೆ
15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ 65,000 ಕೋಟಿ ರೂ ಆದಾಯ ನಷ್ಟ
15ನೇ ಹಣಕಾಸು ಆಯೋಗದ 6 ವರ್ಷದ ರಾಜ್ಯಕ್ಕೆ ತೆರಿಗೆ ನಷ್ಟ ಆಗಿರುವುದು 65,000 ಕೋಟಿ ರೂ. ಇಲ್ಲದೇ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿದ 5,495 ಕೋಟಿ ರೂ ವಿಶೇಷ ಅನುದಾನ ಮತ್ತು 6,000 ಕೋಟಿ ರೂಗಳ ರಾಜ್ಯ ಕೇಂದ್ರದ ಅನುದಾನವನ್ನು ರಾಜ್ಯಕ್ಕೆ ಬಿಡುಗಡೆ ಮಾಡಲಾಗಿದೆ. ರಾಜ್ಯಗಳಿಗೆ ನ್ಯಾಯಯುತ ತೆರಿಗೆ ಮಾಡಲು, ಸಮಾನತೆ ಮತ್ತು ಬೆಳವಣಿಗೆಗೆ ಪ್ರಾಮುಖ್ಯತೆ ನೀಡುವ ಸೂತ್ರವನ್ನು ಶಿಫಾರಸು ಮಾಡುವಂತೆ ರಾಜ್ಯವು 16ನೇ ಹಣಕಾಸು ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ಪ್ರಕಟಿಸಿದರು.
ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ