ದೇಶವೇ ತಲೆತಗ್ಗಿಸುವ ಕೆಲಸ; ಎಐ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಆಕ್ರೋಶ

ದೇಶವೇ ತಲೆತಗ್ಗಿಸುವ ಕೆಲಸ; ಎಐ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಆಕ್ರೋಶ


ನವದೆಹಲಿ, ಫೆಬ್ರವರಿ 20: ದೆಹಲಿಯ ಭಾರತ ಮಂಟಪದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆ (AI ಇಂಪ್ಯಾಕ್ಟ್ ಶೃಂಗಸಭೆ) ಆವರಣದೊಳಗೆ ಪ್ರಧಾನಿ ಮೋದಿ ಹಾಗೂ ಟ್ರಂಪ್ ಫೋಟೋ ಹಾಗೂ ಅವರ ವಿರುದ್ಧ ಕಾಂಗ್ರೆಸ್ ಘೋಷಣೆ ಇರುವ ಟಿ-ಶರ್ಟ್ ಹಾಕಿಕೊಂಡು ಬಂದಿದ್ದ ಯುವ ಕಾರ್ಯರ್ತರು ಆ ಅಂಗಿಯನ್ನು ಬಿಚ್ಚಿ ‘ಪ್ರಧಾನಿ ಮೋದಿ ರಾಜಿ ಮಾಡಿಕೊಂಡಿದ್ದಾರೆ’ ಎಂದು ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದರು. ಕೈಯಲ್ಲಿ ಅಂಗಿಯನ್ನು ಬೀಸುತ್ತಾ ಅರೆಬೆತ್ತಲೆ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ, ಎಫ್ ಐಆರ್ ದಾಖಲಿಸಿದ್ದಾರೆ. ಕಾಂಗ್ರೆಸ್ ನ ಈ ವರ್ತನೆಗೆ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಕಾಂಗ್ರೆಸ್ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. “ರಾಷ್ಟ್ರೀಯ ಅವಮಾನ” ಎಂದು ಅವರು ಕರೆದರು, ಭಾರತ ಸರ್ಕಾರವು ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಜಾಗತಿಕ AI ಶೃಂಗಸಭೆಯಲ್ಲಿದೆ, ಕಾಂಗ್ರೆಸ್ ಪಕ್ಷವು ಘನತೆಯಿಂದ ವರ್ತಿಸುವುದನ್ನು ಬಿಟ್ಟು ದೇಶವೇ ತಲೆತಗ್ಗಿಸುವಂತೆ ವರ್ತಿಸುತ್ತಿರುವುದು ಸಹಿಸಲಾಗದ ಸಂಗತಿ. ಇದು ಕಾಂಗ್ರೆಸ್ ನಾಯಕರ ಸ್ಥಿತಿಯನ್ನು ತೋರಿಸುತ್ತದೆ” ಎಂದು X ನಲ್ಲಿ ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

“ರಾಹುಲ್ ಗಾಂಧಿಯ ನಾಯಕತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಐ ಶೃಂಗಸಭೆಯಲ್ಲಿ ಕೋಲಾಹಲವನ್ನು ಸೃಷ್ಟಿಸಿ ಜಾಗತಿಕ ಮಟ್ಟದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಮುಜುಗರ ಉಂಟುಮಾಡಿದ್ದಾರೆ. ಹಾಗೆ ತಲೆತಗ್ಗಿಸಲು ಅರ್ಹವಾಗಿಲ್ಲ” ಎಂದು ಅಮಿತ್ ಮಾಳವಿಯಾ ಟೀಕಿಸಿದ್ದಾರೆ.

ದೆಹಲಿ ಕ್ಯಾಬಿನೆಟ್ ಸಚಿವ ಸಿರ್ಸಾ ಕೂಡ ಈ ಪ್ರತಿಭಟನೆಯನ್ನು ಖಂಡಿಸುತ್ತಾ, “ಇಂದು ರಾಹುಲ್ ಗಾಂಧಿ ಎಐ ಶೃಂಗಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಿಟ್ಟು ಪ್ರತಿಭಟನೆ ನಡೆಸಿದರು. ಅವರು ತಮ್ಮ ಬಟ್ಟೆಗಳನ್ನು ತೆಗೆದು ವಿದೇಶಿ ಅತಿಥಿಗಳ ಮುಂದೆ ಬೆತ್ತಲೆಯಾಗಿ ನೃತ್ಯ ಮಾಡಿದರು. ಇದು ತುಂಬಾ ನಾಚಿಕೆಗೇಡಿನ ಸಂಗತಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ದೆಹಲಿಯ ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಶರ್ಟ್ ಬಿಚ್ಚಿ ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ

ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಕೂಡ ಪ್ರತಿಕ್ರಿಯಿಸಿದ್ದಾರೆ, “ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದುರಹಂಕಾರದ ವರ್ತನೆ ತೋರಿದ್ದಾರೆ. ಅವರು ಬಿಜೆಪಿ ಸರ್ಕಾರವನ್ನು ಗುರಿಯಾಗಿಸಲು ಭಾರತ ದೇಶವನ್ನು ಅವಮಾನಿಸಿದ್ದಾರೆ” ಎಂದು ಹೇಳಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ, “ಕಾಂಗ್ರೆಸ್ ದೇಶ ವಿರೋಧಿ ಕೃತ್ಯ ಎಸಗಿದೆ” ಎಂದು ಟೀಕಿಸಿದ್ದಾರೆ.

ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್, “ಭಾರತವು ಜಾಗತಿಕ ತಂತ್ರಜ್ಞಾನವನ್ನು ಕೇಂದ್ರವಾಗಿಟ್ಟುಕೊಂಡು ತನ್ನನ್ನು ತಾನು ಸ್ಥಾನಿಕವಾಗಿಸಿಕೊಳ್ಳುವ ಹೆಜ್ಜೆ ಇಡುತ್ತಿರುವ ಸಮಯದಲ್ಲಿ ಕಾಂಗ್ರೆಸ್ ಅನ್ನು ಮುಜುಗರಕ್ಕೀಡುಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಇದು ರಾಜಕೀಯ ವಿರೋಧವಲ್ಲ, ಇದು ಭಾರತದ ಜಾಗತಿಕ ಚಿತ್ರವನ್ನು ಹಾಳುಮಾಡುತ್ತದೆ. ಹೇಯ ಪ್ರಯತ್ನ” ಎಂದು ಹೇಳಿದರು.

ಯೂತ್ ಕಾಂಗ್ರೆಸ್ ಕಾರ್ಯರ್ತರು ಎಂದು ಹೇಳಿಕೊಂಡಿರುವ ಜನರ ಗುಂಪು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಭಾರತ್ ಮಂಟಪದೊಳಗೆ ಪ್ರವೇಶಿಸಿದ್ದಾರೆ. ಅವರು ಸ್ವೆಟರ್ ಮತ್ತು ಜಾಕೆಟ್ ಅನ್ನು ಮೇಲಕ್ಕೆತ್ತಿದ ಸೆಕ್ಯುರಿಟಿಗಳಿಗೆ ಅವರ ಶರ್ಟ್ ಮೋದಿ ಮತ್ತು ಟ್ರಂಪ್ ಫೋಟೋ, ಘೋಷಣೆ ಕಾಣಿಸಲಿಲ್ಲ. ಒಳಗೆ ಬಂದ ನಂತರ ಅವರು ತಮ್ಮ ಜಾಕೆಟ್ ಬಿಚ್ಚಿ ಅಂಗಿಯನ್ನು ಕೈಯಲ್ಲಿ ಹಿಡಿದು ಘೋಷಣೆ ಕೂಗಿದರು. ಈ ವಿಷಯ ಗೊತ್ತಾಗುತ್ತಿದ್ದಂತೆ ಕೆಲವೇ ನಿಮಿಷಗಳಲ್ಲಿ ನಮ್ಮನ್ನು ವಶಕ್ಕೆ ಪಡೆಯಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *