Headlines

‘ಕೇರಳಕ್ಕೆ ಮೋಜು ಮಸ್ತಿಗೆ ಹೋಗಿರಲಿಲ್ಲ’: ಆಪ್ತರ ತಲೆದಂಡಕ್ಕೆ ಜಮೀರ್ ಕೆಂಡ, ಭುಗಿಲೆದ್ದ ಅಸಮಾಧಾನ

‘ಕೇರಳಕ್ಕೆ ಮೋಜು ಮಸ್ತಿಗೆ ಹೋಗಿರಲಿಲ್ಲ’: ಆಪ್ತರ ತಲೆದಂಡಕ್ಕೆ ಜಮೀರ್ ಕೆಂಡ, ಭುಗಿಲೆದ್ದ ಅಸಮಾಧಾನ


ಬೆಂಗಳೂರು, ಏಪ್ರಿಲ್ 16: ದಾವಣಗೆರೆ ದಕ್ಷಿಣ ಉಪಚುನಾವಣೆಯ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್‌ನಲ್ಲಿ (ಕಾಂಗ್ರೆಸ್) ಭಿನ್ನಮತದ ಸ್ಫೋಟಗೊಂಡಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ಅಮಾನತು ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರ ಪದಚ್ಯುತಿಯು ಪಕ್ಷದೊಳಗೆ ಸಂಚಲನ ಸೃಷ್ಟಿಸಿದೆ. ಈ ಬೆಳವಣಿಗೆಗಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಾನೇನು ಮೋಜು-ಮಸ್ತಿಗೆ ಹೋಗಲಿಲ್ಲ’: ಜಮೀರ್ ಕಿಡಿ

ದಾವಣಗೆರೆಯಿಂದ ಉಳಿದು ಕೇರಳಕ್ಕೆ ತೆರಳಲು ಪ್ರಚಾರದ ವಿಚಾರವಾಗಿ ಜಮೀರ್ ಅಹ್ಮದ್ ಖಡಕ್ ಉತ್ತರ ನೀಡಿದ್ದಾರೆ. ನಾನೇನು ಕೇರಳಕ್ಕೆ ಮೋಜು-ಮಸ್ತಿ ಮಾಡಲು ಹೋಗಿರಲಿಲ್ಲ. ಐಸಿಸಿ ನಾಯಕ ಕೆ.ಸಿ. ವೇಣುಗೋಪಾಲ್ ಅವರ ಸೂಚನೆಯಂತೆ ಪಕ್ಷದ ಕೆಲಸಕ್ಕಾಗಿಯೇ ಅಲ್ಲಿಗೆ ಹೋಗಿದ್ದೆ. ನನ್ನ ಹಣೆಬರಹ ಬರೆಯಲು ಯಾರಿಂದಲೂ ಸಾಧ್ಯವಿಲ್ಲ, ನನ್ನನ್ನು ಯಾರೂ ಟಾರ್ಗೆಟ್ ಮಾಡಲು ಆಗಲ್ಲ ಎಂದು ಜಮೀರ್ ಗುಡುಗಿದ್ದಾರೆ.

ಸರಣಿ ಕ್ರಮಗಳ ಹಿನ್ನೆಲೆ

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತ ನಾಯಕರಿಗೆ ಟಿಕೆಟ್ ನೀಡಬೇಕೆಂದು ಜಮೀರ್ ಮತ್ತು ತಂಡ ಪಟ್ಟು ಹಿಡಿದಿತ್ತು. ಆದರೆ ಶಾಮನೂರು ಮಲ್ಲಿಕಾರ್ಜುನ್ ಪುತ್ರ ಸಮರ್ಥ್‌ಗೆ ಟಿಕೆಟ್ ನೀಡಲಾಯಿತು. ಇದರಿಂದ ಅಸಮಾಧಾನಗೊಂಡ ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹ್ಮದ್ ಪ್ರಚಾರದಿಂದ ದೂರ ಉಳಿದಿದ್ದರು ಎಂಬ ಆರೋಪವಿದೆ. ಇದರ ಪರಿಣಾಮವಾಗಿ ನಸೀರ್ ಅಹ್ಮದ್‌ರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ, ಜಬ್ಬಾರ್ ಅವರ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಅಮಾನತುಗೊಂಡಿದ್ದಾರೆ.

ಸಿಎಂ ಬಣ ಟಾರ್ಗೆಟ್?

ಪಕ್ಷದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ಸಿಎಂ ಸಿದ್ದರಾಮಯ್ಯ ಅವರ ಆಪ್ತ ತಂಡವನ್ನು ಗುರಿಯಾಗಿಸಿಕೊಂಡು ನಡೆಯುತ್ತಿದೆಯೇ ಎಂಬ ಅನುಮಾನ ಮೂಡಿದೆ. ಈ ಬಗ್ಗೆ ವ್ಯಂಗ್ಯವಾಡಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ‘ಕಾಂಗ್ರೆಸ್ ಶಿಸ್ತಿನ ಪಕ್ಷ, ಆದರೆ ಇಲ್ಲಿ ದೊರೆ ಮಾಡಿದ್ದಕ್ಕೆ ದಂಡ ಇಲ್ಲ’ ಎನ್ನುವ ಮೂಲಕ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಟೀಕೆ ಮಾಡಿದ್ದಾರೆ. ಒಟ್ಟಿನಲ್ಲಿ ಉಪಚುನಾವಣೆ ಫಲಿತಾಂಶ ಬರುವ ಮೊದಲೇ ಕೈ ಪಾಳೆಯದಲ್ಲಿ ಅಧಿಕಾರ ಮತ್ತು ಶಿಸ್ತಿನ ಸಮರ ತಾರಕಕ್ಕೇರಿದೆ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ದಾವಣಗೆರೆ ಉಪಕದನ ಕಿಚ್ಚು: ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಆಪ್ತರಿಂದಲೂ ಸಾಮೂಹಿಕ ರಾಜೀನಾಮೆ!

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *