ಮೈಸೂರು, (ಅಕ್ಟೋಬರ್ 20): ಆನೆಗಳು ಕಾಡಿನಿಂದ ನಾಡಿಗೆ ಬಂದಿದ್ದು, ಗಜರಾಜರನ್ನು ಕಂಡು ಹಸುಗಳು ದಿಕ್ಕಾಪಾಲಾಗಿ ಓಡಿವೆ. ಹೌದು.. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಎರಡು ಕಾಡಾನೆಗಳು ಹೊರ ಬಂದಿವೆ. ಇದನ್ನು ಕಂಡ ಹಸುಗಳು ಭಯಬಿದ್ದು ದಿಕ್ಕಾಪಾಲಾಗಿ ಓಡಿವೆ. ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಡ್ಯಾಂ ಬಳಿ ಈ ಘಟನೆ ನಡೆದಿದ್ದು, ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.