Headlines

ಸಂಜು ಸ್ಯಾಮ್ಸನ್‌ಗಾಗಿ ಈ ಇಬ್ಬರು ವಿಶ್ವಕಪ್ ವಿನ್ನರ್ಸ್ ಬಲಿಕೊಡಲು ಮುಂದಾಯ್ತಾ ಚೆನ್ನೈ ಸೂಪರ್ ಕಿಂಗ್ಸ್?

ಸಂಜು ಸ್ಯಾಮ್ಸನ್‌ಗಾಗಿ ಈ ಇಬ್ಬರು ವಿಶ್ವಕಪ್ ವಿನ್ನರ್ಸ್ ಬಲಿಕೊಡಲು ಮುಂದಾಯ್ತಾ ಚೆನ್ನೈ ಸೂಪರ್ ಕಿಂಗ್ಸ್?




<p>ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಯಶಸ್ವಿಯಾಗಿ ಮುಕ್ತಾಯವಾಗಿ ಒಂದು ತಿಂಗಳು ಕಳೆದಿದೆ. ಹೀಗಿರುವಾಗಲೇ 2026ರ ಐಪಿಎಲ್ ಟೂರ್ನಿಗೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿರುವುದು ಸದ್ದು ಮಾಡುತ್ತಿದೆ.</p><img><p>5 ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್, 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಮೊದಲ ತಂಡವಾಗಿ ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದು ಮುಖಭಂಗ ಅನುಭವಿಸಿತ್ತು.</p><img><p>ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಮುಂಬರುವ ಐಪಿಎಲ್ ಮಿನಿ ಹರಾಜಿಗೂ ಮುನ್ನ ಟ್ರೇಡಿಂಗ್ ಮೂಲಕ ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಕರೆತರಲು ಮಾಸ್ಟರ್ ಪ್ಲಾನ್ ರೂಪಿಸಿದೆ ಎಂದು ವರದಿಯಾಗಿದೆ.</p><img><p>ಸಂಜು ಸ್ಯಾಮ್ಸನ್‌ಗಾಗಿ ತಮ್ಮ ತಂಡದಲ್ಲಿರುವ ಎರಡು ವಿಶ್ವಕಪ್ ಹೀರೋಗಳನ್ನು ರಾಜಸ್ಥಾನ ರಾಯಲ್ಸ್‌ಗೆ ಬಿಟ್ಟುಕೊಡಲು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮುಂದಾಗಿದೆ ಎನ್ನಲಾಗುತ್ತಿದೆ.</p><img><p>ಖ್ಯಾತ ಕ್ರಿಕೆಟ್ ವಿಶ್ಲೇಷಕ ಪ್ರಸನ್ನ ಅಘೋರಾಮ್ ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ಅನುಭವಿ ಬೌಲಿಂಗ್ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ ಹಾಗೂ ಶಿವಂ ದುಬೆ ಅವರನ್ನು ರಾಜಸ್ಥಾನ ರಾಯಲ್ಸ್‌ಗೆ ನೀಡಿ ಸಂಜು ಸ್ಯಾಮ್ಸನ್ ಕರೆತರಲು ಸಿಎಸ್‌ಕೆ ಫ್ರಾಂಚೈಸಿ ಒಲವು ತೋರಿದೆ ಎಂದು ಹೇಳಿದ್ದಾರೆ.</p><img><p>ರವಿಚಂದ್ರನ್ ಅಶ್ವಿನ್ ಭಾರತ ಪರ 2011ರ ಏಕದಿನ ವಿಶ್ವಕಪ್ ಹಾಗೂ 2013ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ವಿಜೇತ ತಂಡದ ಸದಸ್ಯರಾಗಿದ್ದರು.</p><img><p>ಇನ್ನೊಂದೆಡೆ ಶಿವಂ ದುಬೆ 2024ರ ಐಸಿಸಿ ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರಾಗಿದ್ದಾರೆ. ಸಂಜು ಕೂಡಾ 2024ರ ವಿಜೇತ ತಂಡದ ಸದಸ್ಯರಾಗಿದ್ದಾರೆ.</p><img><p>ಪ್ರಸನ್ನ, ಅಶ್ವಿನ್ ಅವರ ಜತೆ ಆತ್ಮೀಯ ಒಡನಾಟ ಹೊಂದಿದ್ದಾರೆ. ಅಶ್ವಿನ್ 10 ವರ್ಷಗಳ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ಕೂಡಿಕೊಂಡಿದ್ದರು. ಆದರೆ 9 ಪಂದ್ಯಗಳನ್ನಾಡಿ ಕೇವಲ 7 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದರು.</p><img><p>ಇನ್ನು ಶಿವಂ ದುಬೆ ಬ್ಯಾಟಿಂಗ್ ಆಲ್ರೌಂಡರ್ ಆಗಿದ್ದು, ಯಾವುದೇ ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಧಾರವಾಗಬಲ್ಲ ಆಟಗಾರ ಎನಿಸಿಕೊಂಡಿದ್ದಾರೆ.</p><img><p>ಸಂಜು ಸ್ಯಾಮ್ಸನ್ ಕೆಲ ವರ್ಷಗಳಿಂದ ರಾಜಸ್ಥಾನ ರಾಯಲ್ಸ್ ತಂಡದ ನಾಯಕರಾಗಿದ್ದರೂ, ಕಪ್‌ ಗೆಲ್ಲಿಸಲು ಸಾಧ್ಯವಾಗಿಲ್ಲ. ಸಂಜು ಸಿಎಸ್‌ಕೆ ತಂಡ ಕೂಡಿಕೊಂಡರೆ ಆರಂಭಿಕ ಅಟಗಾರನ ಜತೆಗೆ ವಿಕೆಟ್ ಕೀಪರ್ ಆಗಿಯೂ ಮಿಂಚಬಲ್ಲರು.</p>



Source link

Leave a Reply

Your email address will not be published. Required fields are marked *