ಬೆಂಗಳೂರು, ಜನವರಿ 11: ಪ್ರಾಚೀನ ಕಾಲದಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ಅರಳೆಣ್ಣೆ (ಕ್ಯಾಸ್ಟರ್ ಆಯಿಲ್) ಮಹತ್ವಪೂರ್ಣ ಸ್ಥಾನವನ್ನು ಹೊಂದಿದೆ. ಜ್ಯೋತಿಷ್ಯ, ಆಧ್ಯಾತ್ಮಿಕ ಮತ್ತು ಧಾರ್ಮಿಕ ದೃಷ್ಟಿಕೋನದಿಂದ ಇದು ಶುಭ ಫಲಗಳನ್ನು ನೀಡುತ್ತದೆ. ವಿಶೇಷವಾಗಿ ಮಕ್ಕಳಿಗೆ ವಾರಕ್ಕೊಮ್ಮೆಯಾದರೂ ಅರಳೆಣ್ಣೆ ಅಭ್ಯಂಜನ ಸ್ನಾನ ಮಾಡಿಸುವುದು ಉತ್ತಮ ಎಂದು ಹೇಳಿದರು. ಗಂಡು ಮಕ್ಕಳಿಗೆ 21 ವರ್ಷ ಮತ್ತು ಹೆಣ್ಣು ಮಕ್ಕಳಿಗೆ 18 ವರ್ಷದವರೆಗೆ ಇದನ್ನು ಪಾಲಿಸುವುದು ಪ್ರಯೋಜನಕಾರಿ.
ಅರಳೆಣ್ಣೆಯನ್ನು ತಲೆಗೆ, ಹೊಕ್ಕಳಿಗೆ, ಪಾದಗಳಿಗೆ ಮತ್ತು ಅಂಗೈಗಳಿಗೆ ಹಚ್ಚಿ ಸ್ವಲ್ಪ ಸಮಯ ಬಿಸಿಲಿನಲ್ಲಿ ಬಿಡುವುದರಿಂದ ದೇಹದ ಉಷ್ಣಾಂಶ ಸಮತೋಲನಗೊಳ್ಳುತ್ತದೆ. ಇದು ಆರೋಗ್ಯ ಸಮಸ್ಯೆಗಳು ಮತ್ತು ಮಲಬದ್ಧತೆಯನ್ನು ಕಡಿಮೆ ಮಾಡುತ್ತದೆ. ಹೆಚ್ಚು ಕ್ರಿಯಾಶೀಲ ಕ್ರಿಯೆಯನ್ನು ಮಾಡುತ್ತದೆ. ಜ್ಯೋತಿಷ್ಯ ಪ್ರಕಾರ, ಈ ಅಭ್ಯಾಸವು ಕರ್ಮಫಲಗಳನ್ನು ಕಡಿಮೆ ಮಾಡಿ, ಬುದ್ಧಿಶಕ್ತಿಯನ್ನು ಚುರುಕುಗೊಳಿಸುತ್ತದೆ ಮತ್ತು ಗ್ರಹದೋಷಗಳನ್ನು ನಿವಾರಿಸುತ್ತದೆ. ಈ ಸಾಂಪ್ರದಾಯಿಕ ಮಕ್ಕಳ ದೈಹಿಕ ಮಾನಸಿಕ ಆರೋಗ್ಯಕ್ಕೆ ಮಹತ್ತರ ಕೊಡುಗೆ ನೀಡಲಾಗಿದೆ. ನಂತರ ಮಂದ ಬೆಚ್ಚಗಿನ ನೀರಿನಲ್ಲಿ ಸ್ನಾನ ಮಾಡುವುದು ಉತ್ತಮ. ದೊಡ್ಡವರೂ ಕೂಡ ಇದನ್ನು ಪಾಲಿಸಬಹುದು ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.