ದಿನ ಭವಿಷ್ಯ: ಇಂದು ಈ ರಾಶಿಯವರು ಮಕ್ಕಳಿಂದ ದೂರ ಹೋಗಬೇಕಾದೀತು

ದಿನ ಭವಿಷ್ಯ: ಇಂದು ಈ ರಾಶಿಯವರು ಮಕ್ಕಳಿಂದ ದೂರ ಹೋಗಬೇಕಾದೀತು


ದಿನ ಭವಿಷ್ಯ: ಇಂದು ಈ ರಾಶಿಯವರು ಮಕ್ಕಳಿಂದ ದೂರ ಹೋಗಬೇಕಾದೀತು

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ನವಮೀ ತಿಥಿಯ ಶುಕ್ರವಾರದಂದು ಹಿರಿಯರ ಸೇವೆ, ಮಾತಿಗೆ ಮಾತು, ಸಂಗಾತಿಗೆ ಸಂತೋಷ, ವ್ಯಾಪಾರದಲ್ಲಿ ಸಹನೆ, ಮಕ್ಕಳ ಪ್ರೀತಿ, ಹೊಸ ವ್ಯವಹಾರಕ್ಕೆ ಪ್ರಯತ್ನ ಇದೆಲ್ಲ ಈ ದಿನದ ವಿಶೇಷ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ವಾರ್ಷಿಕ : ವಸಂತ, ಚಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ನವಮೀ, ನಿತ್ಯನಕ್ಷತ್ರ ಸೂರ್ಯ : ದ್ರಾ, ಯೋಗ : ಶೋಭನ, ಕರಣ : ಬವ, 6 –ಸ್ತೋದಯ – 4 pm, 6 – 4 pm ಇಂದಿನ ಶುಭಾಶುಭ ಕಾಲ : ರಾಹು ಕಾಲ 10:59 – 12:30 ಯಮಗಂಡ ಕಾಲ 15:32 – 17:04, ಗುಳಿಕ ಕಾಲ 07:57 – 09:27

ಮೇಷ ರಾಶಿ :

ಸಂಗಾತಿಯ ಕಡೆಯಿಂದ ನಿಮಗೆ ಹೊಗಳಿಕೆ ಸಿಗುವುದು. ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳುವುದು ಅನಿವಾರ್ಯ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ಅತಿಯಾದ ಆಯಾಸವನ್ನು ಮಾಡಿಕೊಳ್ಳದೇ ಕಾರ್ಯವನ್ನು ಮಾಡಿರಿ. ಕಛೇರಿಯಲ್ಲಿ ಸಹೋದ್ಯೋಗಿಗಳಿಂದ ಇಂದು ನಿಮಗೆ ಸಹಾನುಭೂತಿಯು ಸಿಗುವುದು. ಸಂಬಂಧಗಳನ್ನು ಇಂದಿನ ಕೆಲಸ ಮಾಡುವಿರಿ.

ವೃಷಭ ರಾಶಿ :

ಇಂದು ಮಾಡಿದ ತಪ್ಪನ್ನೇ ಮತ್ತೆ ಮಾಡಿ ಅಪಹಾಸ್ಯಕ್ಕೆ ಯಾವುದೇ ಕಾರಣಕ್ಕೂ ಸಿಕ್ಕಿಬೀಳಬೇಡಿ. ಮನೆಯಲ್ಲಿ ಸಂತೋಷದ ವಾತಾವರಣ ಇರುತ್ತದೆ. ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬರುವುದು. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳಿ. ನೋವನ್ನು ನುಂಗಿ ಬದುಕುವ ರೀತಿಯು ನಿಮಗೆ ಗೊತ್ತಾಗಲಿದೆ. ನೂತನ ವಸ್ತುಗಳನ್ನು ಖರೀದಿಸಿ. ಕಾಲಹರಣದ ಬದಲು ಉಪಯೋಗಕ್ಕೆ ಬರುವಂತೆ ಈ ದಿನವನ್ನು ರೂಪಿಸಿಕೊಳ್ಳಿ. ಈ ದಿನ ಹಸಿವು ಬಾಯಾರಿಕೆ ಅಧಿಕವಾಗಿರುವುದು.

ಮಿಥುನ ರಾಶಿ :

ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ. ಸರಿಯಾದ ಸಮಯಕ್ಕೆ ಸ್ನೇಹಿತ ಬಂದು ನಿಮ್ಮ ಸಮಸ್ಯೆ ಬಗೆಹರಿಸಲಿದ್ದಾರೆ. ನಿಮ್ಮ ಆಲೋಚನೆಗಳು ಅಸ್ಥಿರ ಮತ್ತು ದ್ವಂದ್ವಗಳಿಂದ ಕೂಡಿರುತ್ತವೆ. ವಾಹನ ಸೌಕರ್ಯವು ಪ್ರಾಪ್ತಿಯಾಗಲಿದೆ. ಅಪರಿಚಿತರ ಜೊತೆ ಸಲುಗೆ ಅನವಶ್ಯಕ. ಉದ್ಯಮವನ್ನು ನಡೆಸುವವರ ಜೊತೆ ಸೇರಿಕೊಳ್ಳಿ. ದಾಂಪತ್ಯ ಜೀವನದಲ್ಲಿ ನಿಮ್ಮ ಸ್ಥಾನವು ಮುಖ್ಯವಾದಂತೆ ತೋರುವುದು. ಹೊಂದಾಣಿಕೆಯ ಮನೋಭಾವವು ಇರಬೇಕಾದೀತು.

ಕರ್ಕಾಟಕ ರಾಶಿ :

ಇಂದು ಮಾತು ಮತ್ತು ನಡವಳಿಕೆಯನ್ನು ಮಿತದಲ್ಲಿ ಇರಿಸಿಕೊಳ್ಳುವುದು ಒಳ್ಳೆಯ ಪ್ರಯೋಜನ ಸಿಗಲಿದೆ. ಅತಿ ಸೂಕ್ಷ್ಮವಾಗುವುದೂ ಮನಸ್ಸಿಗೆ ತೊಂದರೆಯಾಗುತ್ತದೆ. ಅನ್ಯ ಆಲೋಚನೆಯಿಂದ ನೀವು ಹಣವನ್ನು ಹೆಚ್ಚು ಖರ್ಚುಮಾಡಬೇಕಾಗುವುದು. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಆತಂಕವಿದೆ. ಕಳೆದುಕೊಂಡ ವಸ್ತುವಿನ ಬಗ್ಗೆ ಮೋಹವಿರುವುದು. ಗೊಂದಲವನ್ನು ಮಾಡಿಕೊಳ್ಳದೇ ಕೆಲಸವನ್ನು ಸರಳವಾಗಿ ಮಾಡಿಕೊಳ್ಳಿ.

ಸಿಂಹ ರಾಶಿ :

ಯಾರದ್ದೋ ಮಾತು ಕೇಳಿ ನಿಮ್ಮ ಒಳ್ಳೆಯ ನಿರ್ಧಾರವನ್ನು ಬದಲಿಸಿ. ಸಂತಾನದ ವಿಚಾರದಲ್ಲಿ ಮನೆಯವರ ನಡುವೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣದ ಬಗ್ಗೆ ಸರಿಯಾದ ನಿರ್ಧಾರವಿರಲಿ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ. ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಸಂಗಾತಿಯ ನಡವಳಿಕೆಯು ಇಷ್ಟವಾಗದು. ಕೆಲಸವನ್ನು ನೀವು ನಿರ್ಲಕ್ಷಿಸುವುದೇ ಸೂಕ್ತ. ವ್ಯಾಪರವು ಹೆಚ್ಚಿನ ಲಾಭವನ್ನು ಕೊಟ್ಟರೂ ಖರ್ಚು ಮಾಡುವ ಅನಿವಾರ್ಯತೆಯು ಬರಬಹುದು.

ಕನ್ಯಾ ರಾಶಿ :

ನಿಮ್ಮ ಬಗ್ಗೆ ಪ್ರಚಾರದ ಗೀಳನ್ನು ಕಡಿಮೆ ಮಾಡಿಕೊಳ್ಳಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ತಾಯಿಗೆ ನಿಮ್ಮಂದ ಯಾವುದಾದರೊಂದು ಲಾಭವಾಗಬಹುದು. ಯಾರದೋ ಮೂಲಕ ಸರ್ಕಾರಿ ಕೆಲಸದಲ್ಲಿ ಯಶಸ್ಸನ್ನು ಕಾಣುವಿರಿ. ತೆಗೆದುಕೊಂಡ ನಿರ್ಧಾರಗಳು ಕಾರ್ಯಗತಗೊಳ್ಳುವ ಸಾಧ್ಯತೆಯಿದೆ. ಭೂಮಿಯ ವ್ಯವಹಾರದಲ್ಲಿ ಲಾಭವಿರದೇ ಕೇವಲ ಓಡಾಟವಾಗುವುದು. ಮಾತನಾಡಬೇಕಾದ ಸಂದರ್ಭದಲ್ಲಿ ಮೌನ ವಹಿಸಿ ಎಲ್ಲರ ಕೋಪಕ್ಕೆ ಗುರಿಯಾಗುವಿರಿ.

ತುಲಾ ರಾಶಿ :

ಇಂದು ನೀವು ಅತ್ಯಂತ ಕಷ್ಟಕರವಾದ ಕೆಲಸವನ್ನು ಸುಲಭವಾಗಿ ಮಾಡಿ ಮುಗಿಸುವಿರಿ. ಸಂತಾನದಿಂದ ಒಳ್ಳೆಯ ಸುದ್ದಿಯನ್ನು ಪಡೆಯಿರಿ. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು. ಇತರರ ಬಳಿ ಇರುವ ನಿಮ್ಮ ದಾಖಲೆಯನ್ನು ಜಾಣ್ಮೆಯಿಂದ ಪಡೆದುಕೊಳ್ಳಿ. ಸಮಯವನ್ನು ಹಾಳುಮಾಡದೇ ಕೆಲಸದಲ್ಲೇ ಗಮನವಿರಲಿ. ಮನೆಯವರ ಜೊತೆ ಸಮಯವನ್ನು ನೀವು ಕಳೆಯಬೇಕು ಎನ್ನಬಹುದು.

ವೃಶ್ಚಿಕ ರಾಶಿ :

ದೂರದ ಬಂಧುಗಳ ಆಗಮನದಿಂದ ಜಟಿಲ ಸಮಸ್ಯೆ ನಿವಾರಣೆ ಮಾಡುವರು. ಕಾನೂನಿನ ವಿಷಯದಲ್ಲಿ ಸಲಹೆ ಪಡೆಯಿರಿ ಮತ್ತು ಸ್ವಂತವಾಗಿ ಯೋಚಿಸದೇ ಎಚ್ಚರಿಕೆ ವಹಿಸಬೇಕು. ನಿಮ್ಮ ನಡವಳಿಕೆಯು ವಿವೇಕಯುತವಾಗಿರಲಿ. ಎಲ್ಲರ ಜೊತೆ ಬೆರೆಯುವುದನ್ನು ಇಷ್ಟಪಡುವಿರಿ. ಯಾವುದೇ ಒತ್ತಡವಿಲ್ಲದ ಕೆಲಸವು ನಿಧಾನವಾಗುವುದು. ಮಕ್ಕಳ ಕಲಿಕೆಗೆ ಬೇಕಾದ ಸಹಕಾರವನ್ನು ನೀಡುವಿರಿ. ತಾಯಿಯ ಪ್ರೀತಿಗೆ ಸೋಲುವಿರಿ. ನೂತನ ಗೃಹವನ್ನು ಖರೀದಿಸುವ ಅವಕಾಶ ಬರಬಹುದು.

ಧನು ರಾಶಿ :

ಹೊರಗಿನ ಆಹಾರದಿಂದ ಸಂತೋಷವಾಗುತ್ತದೆ. ಆದರೆ ಆರೋಗ್ಯದ ಬಗ್ಗೆಯೂ ಕಾಳಜಿ ಅಗತ್ಯ. ಯಾರಾದರೂ ನಿಮ್ಮನ್ನು ಉದ್ವೇಗಗೊಳಿಸಬಹುದು. ಅದಕ್ಕೆ ನೀಡುವುದು ಬೇಡ, ಉತ್ತಮ ಸಮಯದ ನಿರೀಕ್ಷೆಯಲ್ಲಿ ನೀವು ಇರುವಿರಿ. ದೂರದ ಬಂಧುಗಳ ಸಮಾಗಮವಾಗಬಹುದು. ಸರಿಯಾಗಿ ಪ್ರತಿಕ್ರಯಿಸಲು ನಿಮಗೆ ಬಾರದೇ ಇರುವುದು. ಉದ್ಯೋಗದಲ್ಲಿ ಸ್ವಲ್ಪ ಬದಲಾವಣೆಯನ್ನು ಮಾಡಿಕೊಳ್ಳಬೇಕಾದೀತು. ದಿನಗೂಲಿ ಕಾರ್ಮಿಕರಿಗೆ ಕೆಲಸ ಸಿಗದೇ ಕಷ್ಟವಾಯಿತು.

ಮಕರ ರಾಶಿ :

ಹಣಕಾಸಿನ ಯೋಜನೆಯಲ್ಲಿ ಕೆಲವು ತೊಂದರೆಗಳಿದ್ದರೂ ಅನಂತರ ದಾರಿಯು ಸ್ಪಷ್ಟವಾಗುತ್ತದೆ. ಉದ್ಯೋಗದ ಸ್ಥಳದಲ್ಲಿ ನೀವು ಸಹೋದ್ಯೋಗಿಗಳ ಜೊತೆ ಸ್ನೇಹಪರ ವಾತಾವರಣದಲ್ಲಿ ಕೆಲಸ ಮಾಡಲು ಇಂದು ಸಾಧ್ಯ. ತುರ್ತು ಪ್ರಯಾಣವನ್ನು ನೀವು ಮಾಡಬೇಕಾಗಬಹುದು. ರಾಜಕೀಯ ವ್ಯಕ್ತಿಗಳಿಂದ ಆಗಬೇಕಾದ ಕೆಲಸವನ್ನು ಮಾಡಿಕೊಳ್ಳುವಿರಿ. ಸ್ನೇಹಿತನ ಸಹವಾಸದಿಂದ ದುರಭ್ಯಾಸಕ್ಕೆ ತುತ್ತಾಗಬೇಕಾದೀತು.

ಕುಂಭ ರಾಶಿ :

ನಿಮ್ಮ ಮನಸ್ಸು ಸೂಕ್ಷ್ಮವಾದ ಸಂಗತಿಗಳನ್ನು ಇಂದು ಸ್ವೀಕರಿಸಬಹುದು. ನೀವು ಕಾಲ್ಪನಿಕ ಪ್ರಪಂಚದಿಂದ ವಾಸ್ತವಕ್ಕೆ ಬರಬೇಕಾಗುವುದು. ಕುಟುಂಬದ ವಿಷಯಗಳಲ್ಲಿ ಆಸಕ್ತಿ ವಹಿಸುತ್ತೀರಿ. ಎಲ್ಲಿಗಾದರೂ ದೂರದವರೆಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ಪ್ರೀತಿಯನ್ನು ಕೊಡುವವರ ಮೇಲೆ ಸುಮ್ಮನೆ ಅನುಮಾನ ಬೇಡ. ಸ್ಥಿರಾಸ್ತಿಯ ವಿಚಾರಕ್ಕೆ ಬಿಸಿ ಮಾತುಗಳು ಕುಟುಂಬದಲ್ಲಿ ಬರಬಹುದು. ಕಾನೂನಾತ್ಮಕ ವಿಷಯವನ್ನು ಚರ್ಚಿಸಿ ಕಾರ್ಯರೂಪಕ್ಕೆ ತೆಗೆದುಕೊಂಡು ಬನ್ನಿ.

ಮೀನ ರಾಶಿ :

ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆದಷ್ಟು ಸ್ಥಿರಾಸ್ತಿಯ ಬಗ್ಗೆ ಸಲ್ಲದ ಚರ್ಚೆ ಮಾಡುವುದನ್ನು ತಪ್ಪಿಸಿ. ಅಪಘಾತಗಳು ಸಂಭವಿಸುವ ಸಾಧ್ಯತೆಯಿದೆ, ವಾಹನವನ್ನು ಎಚ್ಚರಿಕೆಯಿಂದ ಚಾಲನೆ ಮಾಡಿ. ನೀರಿಗೆ ಸಂಬಂಧಿಸಿದ ಉದ್ಯಮದಲ್ಲಿ ಆದಾಯ ಹೆಚ್ಚು. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯುವಿರಿ. ನಿಮ್ಮ ಕಷ್ಟವನ್ನು ಸ್ನೇಹಿತರ ಜೊತೆ ಹಂಚಿಕೊಳ್ಳುವುದೂ ಕಷ್ಟವಾದೀತು. ನಿಮ್ಮ ಯಶಸ್ಸೇ ನಿಮಗೆ ಮುಳುವಾಗಬಹುದು. ನಿಮ್ಮನ್ನು ಅವಲೋಕನ ಮಾಡಿಕೊಳ್ಳುವ ಬಗ್ಗೆ ಆಸಕ್ತಿ ವಹಿಸಿ.

-ಲೋಹಿತ ಹೆಬ್ಬಾರ್-8762924271 (ಯಾವ ಅಪ್ಲಿಕೇಶನ್ ಮಾತ್ರ)



Source link

Leave a Reply

Your email address will not be published. Required fields are marked *