
ಈ ಹಿಂದೆಯೂ ದರ್ಶನ್ ಇದೇ ಜೈಲಿನಲ್ಲಿ ಕೆಲ ದಿನಗಳಿದ್ದು, ಐಷಾರಾಮಿ ಜೀವನದ ಫೋಟೋ ವೈರಲ್ ಬೆನ್ನಲ್ಲೇ ಬಳ್ಳಾರಿಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಮತ್ತೆ ನಟನಿಗೆ ಪರಪ್ಪನ ಅಗ್ರಹಾರದ ದರ್ಶನವಾಗಲಿದೆ. ಇನ್ನುಳಿದ ಇಬ್ಬರು ಆರೋಪಿಗಳನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದ್ದು, ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ.