ಬೆಂಗಳೂರು, ಅಕ್ಟೋಬರ್ 24: ಮುಂದಿನ ದಿನಗಳಲ್ಲಿ ಬೆಂಗಳೂರು ಇನ್ನೂ ಬೆಳೆಯುತ್ತೆ. ಬಿಎಂಆರ್ ಡಿಎ ವ್ಯಾಪ್ತಿ ಇಂದಲ್ಲ ನಾಳೆ ಬೆಂಗಳೂರು ಆಗುತ್ತೆ. ಅದಕ್ಕೆ ಹಲವಾರು ಡೈರೆಕ್ಷನ್ ಕೊಟ್ಟಿದ್ದೀನಿ ಎಂದು ಡಿಸಿಎಂ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್)ಹೇಳಿದರು. ಬೆಂಗಳೂರು ನಗರ ಜಿಲ್ಲೆಗೆ ಸಂಬಂಧಿಸಿದ 11ರಿಂದ 12 ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಬಹಳ ಪ್ರಮುಖ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ಮೊದಲೇ ಪ್ಲ್ಯಾನಿಂಗ್ ಸರಿಯಾಗಿ ಇರಬೇಕೆಂದು ಸಭೆಯಲ್ಲಿ ಹೇಳಿರುವೆ. ಒಂದು ಹೊಸ ಮಾಸ್ಟರ್ ಪ್ಲ್ಯಾನ್ ತಯಾರು ಮಾಡುವಂತೆ ಹೇಳಿದ್ದೇನೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.