
ಬೆಂಗಳೂರು, ಏ. 11: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ವಂಚನೆ ಜಾಲಗಳು ಪ್ರಾರಂಭವಾಗುತ್ತವೆ. ಸಾಮಾನ್ಯರಿಂದ ಹಿಡಿದು, ದೊಡ್ಡ ವ್ಯಕ್ತಿಗಳನ್ನು ಈ ಜಾಲದಲ್ಲಿ ಸಿಲುಕಿಸಲಾಗುತ್ತಿದೆ. ಇದೀಗ (ಸಿಬಿಐ) ಅಧಿಕಾರಿಗಳು ಉದ್ಯಮಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಭೀತಿಯಲ್ಲಿಟ್ಟು ಬರೋಬ್ಬರಿ 15 ಕೋಟಿ 45 ಲಕ್ಷ ರೂಪಾಯಿ ದೋಚಿದ್ದ ಇಬ್ಬರು ಆರೋಪಿಗಳನ್ನು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಮೂಲದ ವೆಂಕಟೇಶ್ ಶರತ್ ನಾಯಕ್ ಮತ್ತು ಡೆವಗತ್ ಶ್ರೀಪಾದ್ ನಾಯಕ್ ಬಂಧಿತ ಆರೋಪಿಗಳು.
ಬೆಳಗಾವಿ ಮೂಲದ ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವರಿಗೆ ಕಳೆದ ಫೆಬ್ರವರಿ 7 ರಂದು ಅಪರಿಚಿತ ಕರೆ ಬಂದಿತ್ತು. ಕರೆ ಮಾಡಿದ ವ್ಯಕ್ತಿ ತನ್ನನ್ನು ಪ್ರಸ್ತುತಪಡಿಸಿದ ನಿರ್ದೇಶಕ ಕೆ. ಸುಬ್ರಹ್ಮಣ್ಯಂ ಎಂದು ಪರಿಚಯಿಸಿಕೊಂಡಿದ್ದಾರೆ. “ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್ಗಳು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನರೇಶ್ ಗೋಯಲ್ ಅವರಿಗೆ ಸಂಬಂಧಿಸಿವೆ. ನಿಮ್ಮ ಖಾತೆಯಿಂದ 25 ಲಕ್ಷ ರೂ. ವರ್ಗಾವಣೆಯಾಗಿದೆ, ನಿಮಗೆ 5 ಲಕ್ಷ ರೂ. ಕಮಿಷನ್ ಸಂದಾಯವಾಗಿದೆ” ಎಂದು ಹೆದರಿಸಿದ್ದಾರೆ.
ಬಂಧನದ ಭೀತಿ ಹುಟ್ಟಿಸಿದ ವಂಚಕರು, ಉದ್ಯಮಿಯ ವಿಡಿಯೋ ಕಾಲ್ ಮೂಲಕ ಸುಮಾರು ಒಂದು ತಿಂಗಳ ಕಾಲ (30 ದಿನಗಳು) ನಿರಂತರವಾಗಿ ಕಣ್ಗಾವಲಿನಲ್ಲಿಟ್ಟಿದ್ದರು (ಡಿಜಿಟಲ್ ಬಂಧನ). ತನಿಖೆಗೆ ಸಹಕರಿಸದಿದ್ದರೆ ಜೈಲಿಗೆ ಹಾಕುವುದಾಗಿ ಬೆದರಿಸಿ, ಫೆಬ್ರವರಿ 9 ರಂದು ಅಜಿತ್ ಗೋಪಾಲಕೃಷ್ಣ ಅವರಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ 15,45,00,000 ರೂಪಾಯಿಗಳನ್ನು RTGS ಮೂಲಕ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಈ ಕೂಡಲೇ ರಾಜೀನಾಮೆ ನೀಡಿ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರಿಗೆ ಸೂಚನೆ! ಮುಂದಿನ ತಲೆದಂಡ ಸಚಿವ ಜಮೀರ್?
ವಂಚನೆಗೊಳಗಾದ ಉದ್ಯಮಿ ಬೆಳಗಾವಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಸೈಬರ್ ಕಮಾಂಡ್ ಡಿಜಿಪಿ ಪ್ರಣವ್ ಮೋಹಂತಿ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಸಿದ ಸಿಸಿಬಿಯ ಸೈಬರ್ ವಿಭಾಗ (CCU) ಆರೋಪಿಗಳು 10ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಪತ್ತೆಹಚ್ಚಿದ್ದಾರೆ. ಹೈದರಾಬಾದ್ನ ಗಚ್ಚಿಬೌಲಿ ಹಾಸ್ಟೆಲ್ನಲ್ಲಿ ಅಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, 2 ಕೋಟಿ ರೂಪಾಯಿ ಹಣವನ್ನು ಫ್ರೀಜ್ ಮಾಡಲಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ಸದ್ಯ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಮುಂದುವರಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ