ರಾಮನಗರ, ಮಾ.4: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಆಡಿದ ಮಾತುಗಳು ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. “ಮುಂದೆ ಮತ್ತೆ ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ” ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.”ಮುಂದೆ ನಾನು ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ನನಗೆ ಗೊತ್ತಿಲ್ಲ. 115 ಕಿ.ಮೀ ದೂರದಿಂದ ನೀರು ತಂದು ಮಾಗಡಿಯ 18 ಕೆರೆಗಳಿಗೆ ಕಾವೇರಿ ನೀರು ತುಂಬಿಸುವ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯೂ ಸಾಧ್ಯವಿರಲಿಲ್ಲ. ಆದರೆ ನಾವು ಕೊಟ್ಟ ಮಾತಿನಂತೆ ಅದನ್ನು ಮಾಡಿ ತೋರಿಸಿದ್ದೇವೆ ಎಂದು ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ನೀರಿನ ಅಭಾವ ನೀಗಿಸಲು ಡಿ.ಕೆ. ಶಿವಕುಮಾರ್ ಅವರು ಹಗಲಿರುಳು ಶ್ರಮಿಸುತ್ತಿದ್ದಾರೆ. ಸತ್ತೇಗಾಲ ನೀರಾವರಿ ಯೋಜನೆಯು ಕೆಲವೇ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡುತ್ತದೆ.”ನಾವು ಸುಳ್ಳು ಹೇಳಿ, ಕಣ್ಣೀರು ಹಾಕಿದರೆ ಜನರ ಬಳಿ ಹೋಗುವುದಿಲ್ಲ. ಬದಲಾಗಿ ಕೆಲಸ ಮಾಡಿ ತೋರಿಸುತ್ತೇವೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ