ರಸ್ತೆ, ಚರಂಡಿ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ? ಚರ್ಚೆಗೆ ಗ್ರಾಸವಾದ ಪರಮೇಶ್ವರ್ ಹೇಳಿಕೆ

ರಸ್ತೆ, ಚರಂಡಿ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ? ಚರ್ಚೆಗೆ ಗ್ರಾಸವಾದ ಪರಮೇಶ್ವರ್ ಹೇಳಿಕೆ


ತುಮಕೂರು, ಡಿಸೆಂಬರ್ 15: ರಸ್ತೆ, ಚರಂಡಿ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರಶ್ನಿಸಿದ್ದಾರೆ. ತುಮಕೂರಿನಲ್ಲಿ ಭಾನುವಾರ ನಡೆದ ಬಂಜಾರ ಸಮುದಾಯದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಸ್ತೆ ಮತ್ತು ಚರಂಡಿಗಳ ನಿರ್ಮಾಣದಿಂದ ಜನಸಮೂಹ ನಿಜವಾಗಿಯೂ ಉದ್ದಾರವಾಗುತ್ತದೆಯೇ? ಬಡವರ ಜೀವನ ಉದ್ದಾರವಾಗುತ್ತದೆಯೇ ಎಂದು ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರನ್ನು ಉದ್ದೇಶಿಸಿ ಪ್ರಶ್ನಿಸಿದ್ದಾರೆ. ವರ್ಷಕ್ಕೆ 58 ಸಾವಿರ ಕೋಟಿ ರೂಪಾಯಿ ವೆಚ್ಚದ ಈ ಯೋಜನೆಗಳನ್ನು ನಿಲ್ಲಿಸಿದರೆ ಬಡವರ ಬದುಕು ಸುಧಾರಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. ರಸ್ತೆ, ಬಡವರ ಜೀವನದಲ್ಲಿ ಅಥವಾ ಇತರ ಕಾರ್ಯಕ್ರಮಗಳಿಂದ ಮಾತ್ರ ಬದಲಾವಣೆ ಬರುವುದಿಲ್ಲ. ಸಾವಿರಾರು ವರ್ಷಗಳ ಶೋಷಣೆಯನ್ನು ಕೊನೆಗಾಣಿಸುವುದು ಮತ್ತು ಜನರ ಜೀವನವನ್ನು ಸುಧಾರಿಸುವುದೇ ಗ್ಯಾರಂಟಿ ಯೋಜನೆಗಳ ಮುಖ್ಯ ಉದ್ದೇಶ. ನಾವು ರಸ್ತೆ, ಮನೆ ನಿರ್ಮಾಣ ಅಥವಾ ನೀರಾವರಿ ಯೋಜನೆಗಳನ್ನು ನಿಲ್ಲಿಸಿಲ್ಲ, ಅವು ನಿಧಾನವಾಗಿರಬಹುದು. ಆದರೆ ಅವು ನಿಲ್ಲುವುದಿಲ್ಲ. ಜನರ ಜೀವನ ಉತ್ತಮಗೊಳ್ಳಬೇಕು ಮತ್ತು ಸುಧಾರಣೆಯಾಗಬೇಕು ಎಂಬ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *