ಕೊಲೆಯಾದ ಕೃತಿಕಾ ರೆಡ್ಡಿಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ
ಬೆಂಗಳೂರು, ನವೆಂಬರ್ 03: ವೈದ್ಯ ಮಹೇಂದ್ರರೆಡ್ಡಿಯಿಂದ ಪತ್ನಿ ಡಾ.ಕೃತಿಕಾರೆಡ್ಡಿ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಹೊಸ ಹೊಸ ಮಾಹಿತಿಗಳು ಸಿಗುತ್ತಿವೆ. ಆರೋಪಿ ಮಹೇಂದ್ರರೆಡ್ಡಿ ಮೊಬೈಲ್, ಲ್ಯಾಪ್ಟಾಪ್ಗಳನ್ನು ಪರಿಶೀಲಿಸಿದ್ದು, ಎಫ್ಎಸ್ಎಲ್ಗೆ ರವಾನಿಸಲಾಗಿದೆ. ಆಪ್ತ ಸ್ನೇಹಿತೆ ಜೊತೆ ಮಹೇಂದ್ರರೆಡ್ಡಿ ಚಾಟಿಂಗ್ ನಡೆಸುತ್ತಿದ್ದ. ಆದರೆ ಪದೇ ಪದೇ ಚಾಟಿಂಗ್ ಮಾಡಿದ್ದರಿಂದ ಬೇಸರಗೊಂಡು ಆಕೆ ಈತನನ್ನು ಬ್ಲಾಕ್ ಮಾಡಿದ್ದಳು. ಹೀಗಾಗಿ ಮಹೇಂದ್ರೆಡ್ಡಿ ಬಳಿಕ ಫೋನ್ ಪೇನಲ್ಲಿ ಚಾಟ್ ಮಾಡಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ.
ಪೋನ್ ಪೇ ಮೂಲಕವೇ ನಾನು ನನ್ನ ಹೆಂಡತಿಯನ್ನು ಕೊಂದಿದ್ದೇನೆ.. ನಿನ್ನಿಂದಾಗಿ ಎಂದು ಸ್ನೇಹಿತೆಗೆ ಮಹೇಂದ್ರರೆಡ್ಡಿ ಮೆಸೇಜ್ ಕಳುಹಿಸಿದ್ದ. ಆ ಬಳಿಕ ಈ ಮೆಸೇಜ್ ಡಿಲೀಟ್ ಮಾಡಲು ಪ್ರಯತ್ನಿಸಿದ್ದ. ಆದರೆ ಅದು ಸಾಧ್ಯವಾಗಿಲ್ಲ ಈಗ ಲಾಕ್ ಆಗಿದ್ದಾನೆ. ಸ್ನೇಹಿತೆ ಜೊತೆಗಿನ ಪೂರ್ಣ ಚಾಟಿಂಗ್ ಹಿಸ್ಟರಿಯನ್ನ ಪೊಲೀಸರು ರಿಟ್ರೀವ್ ಮಾಡಿಕೊಂಡಿದ್ದು, ವೈಯಕ್ತಿಕ ವಿಚಾರಗಳ ಚಾಟಿಂಗ್ ಮಾಡಿರೋದು ಗೊತ್ತಾಗಿದೆ. ಪ್ರಕರಣ ಸಂಬಂಧ ಯುವತಿಯನ್ನ ಕರೆಸಿ ಕರೆಸಿ ವಿಚಾರಣೆಯನ್ನೂ ಮಾಡಲಾಗಿದೆ.
ಇದನ್ನೂ ಓದಿ: ಡಾ.ಕೃತಿಕಾರೆಡ್ಡಿ ಕೊಲೆ ಕೇಸ್, ತಪ್ಪೊಪ್ಪಿಕೊಂಡ ಪತಿ ಮಹೇಂದ್ರರೆಡ್ಡಿ
ಡಾ. ಕೃತಿಕಾರೆಡ್ಡಿಗಿದ್ದ ಆರೋಗ್ಯ ಸಮಸ್ಯೆಯಿಂದ ಪತಿ ಡಾ. ಮಹೇಂದ್ರರೆಡ್ಡಿ ಬೇಸತ್ತಿದ್ದ. ತನಗೆ ವೈಯಕ್ತಿಕ ಜೀವನ ಇಲ್ಲ ಎಂದು ಕೋಪಕೊಂಡಿದ್ದ. ಹೀಗಂತಾ ವಿಚ್ಛೇದನ ಪಡೆದರೆ ತನಗೆ ಏನು ಸಿಗಲ್ಲ ಎಂಬುದು ಆರೋಪಿಗೆ ಗೊತ್ತಿತ್ತು. ಯಾವುದೇ ಹೆಂಡತಿಯ ಆರೋಗ್ಯ ಸಮಸ್ಯೆಯನ್ನೇ ಬಂಡವಾಳವಾಗಿ ಕೊಲೆ ಮಾಡಿ ಅದನ್ನು ಸಹಜ ಎಂದು ಬಿಂಬಿಸಲು ಯೋಜನೆ ಸಿದ್ಧಪಡಿಸಿದೆ. ಇದರ ಭಾಗವಾಗಿ ಡಾ.ಕೃತಿಗೆ ಅನಸ್ತೇಶಿಯಾ ಕೊಟ್ಟಿದ್ದ. ಆಕೆಯ ದೇಹದ ತೂಕಕ್ಕೆ ಕೇವಲ ಏಳರಿಂದ ಎಂಟು ಎಂ.ಎಲ್. ಅನಸ್ತೇಶಿಯಾ ನೀಡಬಹುದಾಗಿತ್ತು. ಇದು ಗೊತ್ತಿದ್ದರೂ ಆ ದಿನ ಹದಿನೈದು ಎಂ.ಎಲ್. ನೀಡಿರುವುದು ತನಿಖೆ ವೇಳೆ ಗೊತ್ತಾಗಿತ್ತು. ಹೀಗಾಗಿ ಆರೋಪಿ ಮಹೇಂದ್ರರೆಡ್ಡಿಯನ್ನ ಬಂಧಿಸಿದ್ದರು. ಬಳಿಕ ಆತನಿಗೆ ಒಬ್ಬ ಸ್ನೇಹಿತೆಯೂ ಇರುವುದು ತನಿಖೆ ವೇಳೆ ಬೆಳಕಿಗೆ ಬಂದಿತ್ತು.
ವರದಿ: ವಿಕಾಸ್, Tv9 ಬೆಂಗಳೂರು
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.