Headlines

ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದು ಕಿಡಿಗೇಡಿಗಳಿಂದ ವಿಕೃತಿ

ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದು ಕಿಡಿಗೇಡಿಗಳಿಂದ ವಿಕೃತಿ


ಶಿವಮೊಗ್ಗ, ಮಾರ್ಚ್ 04: ಗೆ ಗಾಂಜಾ ಹಾವಳಿ ಮತ್ತೆ ಮುನ್ನೆಲೆಗೆ ಬಂದಿದ್ದು, ಮಾದಕ ವಸ್ತುವಿನ ಅಮಲಿನಲ್ಲಿ ದುಷ್ಕರ್ಮಿಗಳು ಹೊಸ ಕಾರನ್ನು ಜಖಂಗೊಳಿಸಿರುವ ಘಟನೆ ಶರಾವತಿ ನಗರದ ಹಂದಿಜೋಗಿ ಕ್ಯಾಂಪ್‌ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗ್ಲಾಸ್‌ಗಳನ್ನು ಪುಡಿಪುಡಿ ಮಾಡಿದ್ದಾರೆ. ಕಾರು ಮಾಲೀಕ ಸುರೇಶ್ ಅವರು ಕೇವಲ ನಾಲ್ಕು ತಿಂಗಳ ಹಿಂದೆ ಈ ಕಾರನ್ನು ಖರೀದಿಸಿದ್ದರು. ಈ ಪ್ರದೇಶದಲ್ಲಿ ಗಾಂಜಾ ಸೇದುವುದು, ಕುಡಿಯುವುದು, ಗಲಾಟೆ ಮಾಡುವುದು, ಹಾಗೆಯೇ ಜನರಿಗೆ ತೊಂದರೆ ನೀಡುವುದು ಸಾಮಾನ್ಯವಾಗಿದೆ. ಬೈಕ್‌ಗಳನ್ನು ಜಖಂಗೊಳಿಸುವುದು, ಪೆಟ್ರೋಲ್ ಕಳವು ಮಾಡುವುದು ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಈ ಪುಂಡರ ಹಾವಳಿಯಿಂದ ಬೇಸತ್ತ ಸ್ಥಳೀಯ ನಿವಾಸಿಗಳು ತಮಗೂ ಮತ್ತು ತಮ್ಮ ಆಸ್ತಿಪಾಸ್ತಿಗಳಿಗೆ ರಕ್ಷಣೆ ನೀಡುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ. ಇಂದು ಕಾರುಗಳಿಗೆ ಹಾನಿ ಮಾಡಿರುವ ಇವರು ನಾಳೆ ತಮ್ಮ ಕುಟುಂಬಗಳಿಗೆ ತೊಂದರೆ ನೀಡಬಹುದೆಂಬ ಆತಂಕ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *