
ಬೆಂಗಳೂರು, (ಜನವರಿ 08): ಬೆಂಗಳೂರಿನಲ್ಲಿ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ಮುಂದುವರೆದಿದೆ. ಇತ್ತೀಚೆಗಷ್ಟೇ ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳನ್ನು ತೆರೆವು ಮಾಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸರ್ಕಾರ ಅರ್ಹರಿಗೆ ಮನೆ ನೀಡಲು ಮುಂದಾಗಿದೆ. ಇದೀಗ ನಾಗವಾರ ಬಳಿಯ ಥಣಿಸಂದ್ರದ ಅಶ್ವತ್ಥ ಅನೇಕ ಅಕ್ರಮ ಮನೆಗಳ ತೆರವು ಕಾರ್ಯ ನಡೆದಿದೆ. ಸುಮಾರು 60 ಮನೆಗಳನ್ನು ತೆರೆಯುವ ಬಗ್ಗೆ ಬಿಡಿಎ ಮಾಹಿತಿ ನೀಡಿದೆ. ಆದಾಗ್ಯೂ, ಯಾವುದೇ ಮಾಹಿತಿ ಅಥವಾ ನೋಟಿಸ್ ನೀಡದೆ ಮನೆಗಳ ತೆರವು ಮಾಡಲಾಗುತ್ತಿದೆ ಎಂದು ಬಿಡಿಎ ಅಧಿಕಾರಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.