Headlines

ಕರಾವಳಿಯಲ್ಲಿ ಮತ್ತೆ ಎಂಡೋಸಲ್ಫಾನ್ ಭೀತಿ: ಆರೋಗ್ಯ ಇಲಾಖೆಯಿಂದ ಆಘಾತಕಾರಿ ವರದಿ

ಕರಾವಳಿಯಲ್ಲಿ ಮತ್ತೆ ಎಂಡೋಸಲ್ಫಾನ್ ಭೀತಿ: ಆರೋಗ್ಯ ಇಲಾಖೆಯಿಂದ ಆಘಾತಕಾರಿ ವರದಿ


ಎಂಡೋಸಲ್ಫಾನ್ ಪರಿಣಾಮ ವೈಕಲ್ಯಕ್ಕೆ ತುತ್ತಾಗಿರುವ ಮಗು

ಕಾರವಾರ, ಜನವರಿ 23: ಮಹಾಮಾರಿ ಎಂಡೋಸಲ್ಫಾನ್ (ಎಂಡೋಸಲ್ಫಾನ್) ಕರಾವಳಿ (ಕರಾವಳಿ ಕರ್ನಾಟಕ) ಭಾಗದ ಸಾವಿರಾರು ಮನೆಗಳ ನೆಮ್ಮದಿಯನ್ನೇ ಕಡಡಿತ್ತು. ಗೇರುಬೀಜ ಇಳುವರಿಗೆ ಅಡ್ಡಿಯಾಗಿದ್ದ ಸೊಳ್ಳೆಗಳ ನಾಶಕ್ಕಾಗಿ ಸಿಂಪರಿಸಿದ್ದ ಎಂಡೋಸಲ್ಫಾನ್, ಜನರ ಮೇಲೆ ಪರಿಣಾಮ ಬೀರಿತ್ತು. ಹುಟ್ಟುತ್ತಲೇ ಬುದ್ಧಿ ಭ್ರಮಣೆ ,ಬಹು ಅಂಗಾಂಗ ವೈಫಲ್ಯದಿಂದಾಗಿ ಅದೆಷ್ಟೋ ಮಕ್ಕಳು ನರಕಯಾತನೆ ಅನುಭವಿಸಿದ್ದರು. ಇದೀಗ ಮತ್ತೆ ಕರಾವಳಿ ಜನತೆಯಲ್ಲಿ ಎಂಡೋಸಲ್ಫಾನ್ ಭಯ ಆವರಿಸಿದೆ.

ಅಂದಹಾಗೆ 1986 ರಿಂದ 2011 ರ ಉತ್ತರ ಕನ್ನಡ ಸುಮಾರು 11,794 ಹೆಕ್ಟೇರ್ ಗೇರು ಬೆಳೆದ ಭೂಮಿಗೆ ಎಂಡೋಸಲ್ಫಾನ್ ವಿಷದ್ರಾವಣವನ್ನು ನೀಡಲಾಗಿದೆ. ಇದು ಗರ್ಭಿಣಿಯರ ಮೇಲೆ ನೇರ ಪರಿಣಾಮ ಬೀರಿತ್ತು. ಮಕ್ಕಳು ಹುಟ್ಟುತ್ತಲೇ ಬುದ್ಧಿಮಾಂದ್ಯ, ಅಂಗವೈಕಲ್ಯ, ನರ ದೌರ್ಬಲ್ಯಕ್ಕೆ ತುತ್ತಾಗಿದ್ದರು. ಇನ್ನು ಪುರುಷರೂ ಕೂಡ ಉಸಿರಾಟ ಸಮಸ್ಯೆ, ಪಾರ್ಶ್ವವಾಯು, ನರದೌರ್ಬಲ್ಯದಂತಹ ಸಮಸ್ಯೆ ಎದುರಿಸುತ್ತಿದ್ದರು. 2023-24 ರಲ್ಲಿ ಒಟ್ಟು 1554 ಜನರನ್ನುಡೋಸಲ್ಫಾನ್ ಪೀಡಿತ ಎಂ ಗುರುತಿಸಲಾಗಿದೆ. ಇದೀಗ ಹೊಸ ಸರ್ವೆಯಲ್ಲಿ ಮಕ್ಕಳು ಸೇರಿ 54 ಜನರನ್ನು ಎಂಡೋ ಪೀಡಿತ ಗುರುತು ಗುರುತಿಸಲಾಗಿದೆ.

ವಂಶವಾಹಿ ಮೂಲಕ ಹರಡುತ್ತಿರುವ ಕಾಯಿಲೆಗಳು

ವೀಕ್ಷಣೆಗಳ ಪ್ರಕಾರ, ಎಂಡೋಸಲ್ಫಾನ್ ಪ್ರಕಾರದಿಂದ ಬರುವ ನ್ಯೂನತೆಗಳು ವಂಶವಾಹಿ ಮೂಲಕ ಒಬ್ಬರಿಂದ ಒಬ್ಬರಿಗೆ ಹಬ್ಬಿವೆ. ಎಂಡೋ ಬಾಧಿತರ ಸಂಖ್ಯೆ ಕಡಿಮೆಯಾಗಿದೆ ಎಂದು ಈ ಹಿಂದೆಯೇ ಸರ್ಕಾರ ಪೀಡಿತರಿಗೆ ನೀಡುವ ಸೌಲಭ್ಯವನ್ನು ನಿಲ್ಲಿಸಿತ್ತು. ಯಾವ ಪೀಡಿತರಿಗೆ ಸೌಲತ್ತು ಇಲ್ಲದೇ ತೊಂದರೆ ಪಡುವಂತಾಗಿತ್ತು. ಆದರೆ ಈಗ ಮತ್ತೆ ಎಂಡೋ ಪೀಡಿತರ ಸಂಖ್ಯೆ ಹೆಚ್ಚಾಗಿರುವುದು ಆತಂಕ ತಂದಿದೆ. ಸರ್ಕಾರ ಈ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಕಾಣುತ್ತಿದ್ದಾರೆ.

ಇದನ್ನೂ ಓದಿ: ಮೋಜು ಮಸ್ತಿಗಾಗಿ ಅರಣ್ಯ ಅಧಿಕಾರಿಗಳಿಂದಲೇ ಮರಗಳ ಮಾರಣ ಹೋಮ? ತನಿಖೆಗೆ ಆದೇಶ

ಈ ಎಂಡೋ ಸಲ್ಫಾನ್ ಪರಿಣಾಮದಿಂದ ಬರುವ ಕಾಯಿಲೆಗಳು ಹುಟ್ಟಿದಾಗಿನಿಂದ ಸಾಯುವವರೆಗೂ ಜೀವ ಹಿಂಡುತ್ತವೆ. ಇದೀಗ ಮೂರನೇ ತಲೆಮಾರಿಗೂ ನರಕ ತೋರಿಸುತ್ತಿರುವುದು ವಿಪರ್ಯಾಸ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *