Headlines

ಶಾರ್ಟ್ ಸರ್ಕ್ಯೂಟ್‌ನಿಂದ ಕುರಿ ಶೆಡ್‌ಗೆ ಬೆಂಕಿ: 700ಕ್ಕೂ ಹೆಚ್ಚು ಕುರಿಗಳು ಸಜೀವ ದಹನ

ಶಾರ್ಟ್ ಸರ್ಕ್ಯೂಟ್‌ನಿಂದ ಕುರಿ ಶೆಡ್‌ಗೆ ಬೆಂಕಿ: 700ಕ್ಕೂ ಹೆಚ್ಚು ಕುರಿಗಳು ಸಜೀವ ದಹನ



ಶಾರ್ಟ್ ಸರ್ಕ್ಯೂಟ್‌ನಿಂದ ಕುರಿ ಶೆಡ್‌ಗೆ ಬೆಂಕಿ: 700ಕ್ಕೂ ಹೆಚ್ಚು ಕುರಿಗಳು ಸಜೀವ ದಹನ
<p>ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕುರಿ ಶೆಡ್‌ಗೆ ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ ಮಧುಸೂದನ್ ರೆಡ್ಡಿ ಎಂಬುವರಿಗೆ ಸೇರಿದ 700ಕ್ಕೂ ಹೆಚ್ಚು ಕುರಿಗಳು ಸಜೀವ ದಹನವಾಗಿವೆ.</p><img><p>ರಾಯಚೂರು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕುರಿ ದೊಡ್ಡಿಗೆ ಬೆಂಕಿ ಬಿದ್ದ ಪರಿಣಾಮ ಶೆಡ್‌ನಲ್ಲಿದ್ದ ಸುಮಾರು 700ಕ್ಕೂ ಅಧಿಕ ಕುರಿಗಳು ಬೆಂಕಿಗಾಹುತಿಯಾದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಮುಕ್ಕುಂದ ಗ್ರಾಮದಲ್ಲಿ ನಡೆದಿದೆ.</p><img><p>ಮಧುಸೂದನ್ ರೆಡ್ಡಿ ಎಂಬುವರಿಗೆ ಸೇರಿದ ಕುರಿ ಶೆಡ್ ಇದಾಗಿದ್ದು, ದೊಡ್ಡದಾದ ಶೆಡ್ ಮಾಡಿ ಸುಮಾರು‌ 700ಕ್ಕೂ ಹೆಚ್ಚು ಕುರಿಗಳನ್ನು ಸಾಕಾಣಿಕೆ ಮಾಡಿದ್ದರು.</p><img><p>ನಿನ್ನೆ ತಡ ರಾತ್ರಿ ಶೆಡ್‌ಗೆ ಬೆಂಕಿ ಬಿದ್ದಿದ್ದು ನೋಡಿ ಇಬ್ಬರು ಕೆಲಸಗಾರರು ಬೆಂಕಿ ಬಿದ್ದಿದ್ದನ್ನು ನೋಡಿ ಶೆಡ್ ನೋಡಿಕೊಳ್ತಿದ್ದ ಇಬ್ಬರು ಕೆಲಸಗಾರರು ಜೋರಾಗಿ ಕಿರುಚಿಕೊಂಡಿದ್ದಾರೆ.</p><img><p>ಅವರ ಕಿರುಚಾಟ ಕೇಳಿ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕದಳದವರು ಸ್ಥಳಕ್ಕೆ ಭೇಟಿ ನೀಡುವ ವೇಳೆಗಾಗಲೇ ಇಡೀ ಕುರಿ ಶೆಡ್ ಬೆಂಕಿಗಾಹುತಿಯಾಗಿದ್ದು, ಶೆಡ್‌ನಲ್ಲಿದ್ದ ಎಲ್ಲಾ ಕುರಿಗಳು ಸಜೀವ ದಹನಗೊಂಡಿವೆ.</p><p><strong>ಇದನ್ನೂ ಓದಿ: </strong><strong>ಜೊತೆಯಾಗಿ ಮದುವೆಗೆ ಬಂದ ದಳಪತಿ ವಿಜಯ್ ತ್ರಿಷಾ ಕೃಷ್ಣನ್: ರವಿಮೋಹನ್ ಹಾಗೂ ಕೆನಿಷಾಗೆ ಹೋಲಿಸಿದ ನೆಟ್ಟಿಗರು</strong></p><img><p>ಸ್ಥಳಕ್ಕೆ ಸಿಂಧನೂರು ಸಿಂಧನೂರು ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಸೂಕ್ತ ಪರಿಹಾರಕ್ಕಾಗಿ ಕುರಿ ಶೆಡ್ ಮಾಲೀಕ ಮಧುಸೂದನ್ ರೆಡ್ಡಿ ಆಗ್ರಹಿಸಿದ್ದಾರೆ. ಸಿಂಧನೂರು ಗ್ರಾಮೀಣ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.</p><p><strong>ಇದನ್ನೂ ಓದಿ:</strong><strong> ಇರಾನ್ ಯುದ್ಧದ ಮಧ್ಯೆ ರಷ್ಯಾದ ತೈಲ ಖರೀದಿಸಲು ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ</strong></p>



Source link

Leave a Reply

Your email address will not be published. Required fields are marked *