
ಬೆಳಗಾವಿ, ಮಾರ್ಚ್ 24: ಬೆಳಗಾವಿ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ಗಾಗಿ ಭಾರೀ ಜನಸಂದಣಿ ನಡೆದಿದೆ. ‘ನಾಲ್ಕು ದಿನಗಳ ಕಾಲ ಪೆಟ್ರೋಲ್ ಸಿಗುವುದಿಲ್ಲ’ ಎಂಬ ವದಂತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಇದರಿಂದ ಜನತೆ ಭಯಭೀತರಾಗಿ ಇಂಧನ ಬಂಕ್ಗಳನ್ನು ಧಾವಿಸಿದರು. ಅಜಮ್ ನಗರ, ಕೊಲ್ಲಾಪುರ ಸರ್ಕಲ್, ನೆಹರು ನಗರ, ವೈಭವ ನಗರ, ಮತ್ತು ಗಾಂಧಿನಗರದಂತಹ ಪ್ರಮುಖ ಬ್ಯಾಂಕ್ಗಳಲ್ಲಿ ವಾಹನ ಸವಾರರು ಮುಗಿಬಿದ್ದರು. ಜನರು ತಮ್ಮ ವಾಹನಗಳಿಗೆ ಇಂಧನ ತುಂಬಿಸಿಕೊಳ್ಳುವುದರ ಜೊತೆಗೆ ಬಾಟಲಿಗಳು ಮತ್ತು ಆಯಿಲ್ ಕ್ಯಾನ್ಗಳಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳುತ್ತಿರುವುದು ಕಂಡುಬಂದಿದೆ. ಏಕಾಏಕಿ ದೊಡ್ಡ ಸಂಖ್ಯೆಯ ಜನ ನೆರೆಯಿಂದ ಪೆಟ್ರೋಲ್ ಬಂಕ್ ಸಿಬ್ಬಂದಿಗಳ ಪರಿಸ್ಥಿತಿಯನ್ನು ನಿಯಂತ್ರಿಸಲು ಕಷ್ಟವಾಯಿತು. ಕೆಲವೆಡೆ ಪೊಲೀಸರ ನೆರವು ಪಡೆಯಲಾಯಿತು. ಹಲವು ಬ್ಯಾಂಕ್ಗಳಲ್ಲಿ ಇಂಧನ ಕೊರತೆಯು ಮತ್ತಷ್ಟು ಆತಂಕ ಸೃಷ್ಟಿಸಿತು, ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಯಿತು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ