ಗದಗ, ಡಿಸೆಂಬರ್ 04: ಅಂಗಡಿ ಬಾಗಿಲು ಮುರಿಯದೆ ಖತರ್ನಾಕ್ ಗ್ಯಾಂಗ್ ಒಂದು ಬಂಗಾರದ ಅಂಗಡಿ ದೋಚಿರುವ ಘಟನೆ ಗದಗ ನಗರದ ಮಹೇಂದ್ರಕರ ಸರ್ಕಲ್ ಬಳಿ ನಡೆದಿದೆ. ಶಾಂತದುರ್ಗಾ ಹೆಸರಿನ ಜ್ಯುವೆಲ್ಲರಿ ಶಾಪ್ನಲ್ಲಿ ದರೋಡೆ ನಡೆದಿದ್ದು, ಚಿನ್ನ ಮತ್ತು ಬೆಳ್ಳಿ ಸೇರಿ ಸುಮಾರು 80 ಲಕ್ಷ ರೂ. ಮೌಲ್ಯದ ಆಭರಣಗಳು ರಾಬರಿಯಾಗಿವೆ. ಬೆಳಿಗ್ಗೆ ಬಂದು ಮಾಲಕರು ಅಂಗಡಿ ತೆರೆದ ಘಟನೆ ಬೆಳಕಿಗೆ ಬಂದಿದೆ.
ಇನ್ನು ದರೋಡೆ ನಡೆಸಿರುವ ಗ್ಯಾಂಗ್ ನ ಚಾಣಾಕ್ಷತೆ ಕಂಡು ಪೊಲೀಸರೇ ದಂಗಾಗಿದ್ದಾರೆ. ಅಂಗಡಿ ಶೆಟರ್ ಮುರಿದಿಲ್ಲ, ಅಕ್ಕಪಕ್ಕ ಸೇರಿ ಹಿಂಭಾಗದಲ್ಲಿಯೂ ಬೇರೆ ಕಟ್ಟಡಗಳಿವೆ. ಹೀಗಿದ್ದರೂ ಕಳ್ಳರು ಅಂಗಡಿಗೆ ನುಗ್ಗಿದ್ದರು ಎಂದು ಪೊಲೀಸರು ಪರೀಕ್ಷಿಸಿದಾಗ ಖತರ್ನಾಕ್ ಗ್ಯಾಂಗ್ ಚಿನ್ನದ ಅಂಗಡಿಗೆ ಎಂಟ್ರಿಕೊಟ್ಟಿದ್ದು ಕಟ್ಟಡದಿಂದ ಬೆಳಕಿಗೆ ಬಂದಿದೆ. ಅಂಗಡಿ ಅಂಗಡಿಯಲ್ಲಿ ಕೊರೆದು ಒಳನುಗ್ಗಿರೋ ಗ್ಯಾಂಗ್, ಅಪಾರ ಬೆಳ್ಳಿ ವಸ್ತುಗಳು ಮತ್ತು ಸ್ವಲ್ಪ ಪ್ರಮಾಣದ ಚಿನ್ನ ಸೇರಿ ನಗದಿದೆ.
ಇದನ್ನೂ ಓದಿ: ಇ.ಡಿ ಹೆಸರಿನಲ್ಲಿ ಚಿನ್ನದ ವ್ಯಾಪಾರಿ ದರೋಡೆ ಕೇಸ್; ಆರೋಪಿಗಳಿಗೆ ಖಾಕಿ ಶಾಕ್, ನಾಲ್ವರ ಬಂಧನ
ಘಟನೆ ಬೆಳಕಿಗೆ ಬಂದ ಸ್ಥಳಕ್ಕೆ ದೌಡಾಯಿಸಿದ ಶ್ವಾನ ತೀವ್ರ ಪರಿಶೀಲನೆ ನಡೆಸಿದೆ. ಆದರೆ, ಕಳ್ಳರ ಬಗ್ಗೆ ಯಾವುದೇ ಕುರುಹು ಇಲ್ಲ. ಇನ್ನು ಚಿನ್ನದ ಅಂಗಡಿಯಲ್ಲಿದ್ದ ಸಿಸಿ ಕ್ಯಾಮರಾಗಳು ಬಂದ್ ಆಗಿರುವ ಕಾರಣ, ದರೋಡೆಕೋರರ ಪತ್ತೆ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಎಸ್ಪಿ ರೋಹನ್ ಜಗದೀಶ್, ಡಿವೈಎಸ್ಪಿ ಮುರ್ತುಜಾ ಖಾಜಿ, ಸಿಪಿಐ ಲಾಲಸಾಬ್ ಜೂಲಕಟ್ಟಿ ಸೇರಿದಂತೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದೆ. ಸೋಕೋ ತಂಡದಿಂದಲೂ ನಡೆದಿದೆ.
ಖತರ್ನಾಕ್ ಗ್ಯಾಂಗ್ ನ ಕೈಚಲಕ ಕಂಡು ಮುದ್ರಣಕಾಶಿ ಗದಗದ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿ ಮೇಲಿಂದ ಮೇಲೆ ಇಂತಹ ದರೋಡೆ ಪ್ರಕರಣಗಳು ನಡೆದ ಬಗ್ಗೆ ಕೇಳುತ್ತಿದ್ದರು. ಆದರೆ ಈಗ ನಮ್ಮ ಕಾಲಬುಡದಲ್ಲೇ ಇಷ್ಟು ದೊಡ್ಡ ದರೋಡೆ ನಡೆದಿರೋದು ಅದನ್ನು ಸೃಷ್ಟಿಸಿದೆ. ಚಿನ್ನದ ಅಂಗಡಿ ದರೋಡೆ ನಡೆಸಿರುವ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 2:03 pm, ಗುರು, 4 ಡಿಸೆಂಬರ್ 25