
ನಟ ಅನಿರುದ್ಧ್ ಜತ್ಕರ್ (ಅನಿರುದ್ಧ್ ಜಟ್ಕರ್) ಅವರು ‘ಸ್ವಚ್ಛತೆಗಾಗಿ ನಾನೂ ಸಹಭಾಗಿ’ ಎಂಬ ಅಭಿಯಾನವನ್ನು ಕಳೆದ ಐದು ವರ್ಷಗಳಿಂದ ನಡೆಸುತ್ತಿದ್ದಾರೆ. ಎಲ್ಲಿಯೇ ಕಸದ ರಾಶಿ ಕಂಡರೂ ಅಧಿಕಾರಿಗಳು ಗಮನಕ್ಕೆ ತರುತ್ತಾರೆ. ಸಮಸ್ಯೆ ಪರಿಹಾರ ಆಗಬೇಕು ಎಂಬ ಉದ್ದೇಶದಿಂದ ಜನರಲ್ಲಿ ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿಕೊಳ್ಳುತ್ತಾರೆ. ಸಿನಿಮಾ, ಸೀರಿಯಲ್ ಕೆಲಸಗಳ ನಡುವೆಯೂ ಅವರು ಈ ಪ್ರದರ್ಶನದ ಅಭಿಯಾನ ನಿಲ್ಲಿಸಿಲ್ಲ. ಈಗ ಬೆಂಗಳೂರಿನ ‘ಡಾ. ವಿಷ್ಣುವರ್ಧನ್ ರಸ್ತೆ’ಯಲ್ಲಿ ಬಿದ್ದ ಕಸದ ರಾಶಿಯ ವಿಡಿಯೋವನ್ನು ಅವರು ಪೋಸ್ಟ್ ಮಾಡಿದ್ದಾರೆ. ಕಸ ಹಾಕಬಾರದು ಎಂಬ ಎಚ್ಚರಿಕೆಯ ಫಲದ ಎದುರಲ್ಲೇ ಜನರು ಕಸ ಸುರಿದಿದ್ದಾರೆ ಅನಿರುದ್ಧ್ ಅವರು ಟೀಕಿಸಿದ್ದಾರೆ. ಈ ವಿಡಿಯೋ ವೈರಲ್ ಆದ ಬಳಿಕ ಸಂಬಂಧಪಟ್ಟವರು ಕ್ರಮ ತೆಗೆದುಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.