‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ (ಬಿಗ್ ಬಾಸ್ ಕನ್ನಡ ಸೀಸನ್ 12 ವಿಜೇತ) ಗಿಲ್ಲಿ ನಟ ಅವರು ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಕರ್ನಾಟಕದಲ್ಲಿಯೇ ಅಕ್ಕಪಕ್ಕದ ರಾಜ್ಯಗಳಲ್ಲಿ ಕೂಡ ಗಿಲ್ಲಿ ನಟ ಫೇಮಸ್ ಆಗಿದ್ದಾರೆ. ಅವರ ರೀಲ್ಸ್ ಎಲ್ಲ ಕಡೆ ವೈರಲ್ ಆಗಿದೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಕಾಮಿಡಿ ಮೂಲಕ ಗಿಲ್ಲಿ ನಟ (ಗಿಲ್ಲಿ ನಾಟಾ) ಅವರು ವೀಕ್ಷಕರ ಮನ ಗೆದ್ದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ಕೂಡ ಅವರ ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರ ಆಗುತ್ತಿದೆ. ತಮ್ಮ ಜೊತೆಯಾಗಿದ್ದ ಅಶ್ವಿನಿ ಗೌಡ, ಸತೀಶ್ವರ ಮುಂತಾದವರ ಮೇಲೆ ಕಿಂಚಿತ್ತೂ ದ್ವೇಷ ಇಲ್ಲ ಎಂದು ಗಿಲ್ಲಿ ನಟ ಹೇಳಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಜಗಳಗಳು ಸಹಜ. ಟಾಸ್ಕ್ ಗೆಲ್ಲಬೇಕು ಎಂಬ ಸಲುವಾಗಿ ಪರಸ್ಪರ ಕಿತ್ತಾಟ ಇದ್ದೇ ಇರುತ್ತದೆ. ನಾಮಿನೇಷನ್ ಸಮಯದಲ್ಲಿ ಒಬ್ಬರಿಗೊಬ್ಬರು ಕೆಸರು ಎರಚಿಕೊಳ್ಳುವುದು ಕೂಡ ನಡೆಯುತ್ತಿದೆ. ಆದರೆ ಅದೆಲ್ಲವೂ ಆಟದ ಸಲುವಾಗಿ ಮಾತ್ರ. ಬಿಗ್ ಬಾಸ್ ಮುಗಿದ ಮೇಲೆ ಗಿಲ್ಲಿ ನಟ ಅವರು ಯಾವ ವಿಚಾರಗಳನ್ನೂ ಮನಸ್ಸಿನಲ್ಲಿ ಇಟ್ಟುಕೊಂಡಿಲ್ಲ.
ಈ ಸೀಸನ್ನಲ್ಲಿ ಅನೇಕ ಸ್ಪರ್ಧಿಗಳು ಮಾಧ್ಯಮಗಳಿಗೆ ಸಂದರ್ಶನವನ್ನು ನೀಡಿವೆ. ಡಾಗ್ ಸತೀಶ್ ಅವರು ಗಿಲ್ಲಿ ಬಗ್ಗೆ ನೆಗೆಟಿವ್ ಆಗಿ ಮಾತನಾಡಿದ್ದರು. ಅಶ್ವಿನಿ ಗೌಡ ಅವರು ಗಿಲ್ಲಿ ಗೆಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಆ ಯಾವ ವಿಷಯಕ್ಕೂ ಗಿಲ್ಲಿ ನಟ ಅವರು ದ್ವೇಷ ಸಾಧಿಸುತ್ತಿಲ್ಲ. ಯಾರ ಮೇಲೂ ತಮಗೆ ದ್ವೇಷ ಎಲ್ಲ ಎಂದು ಅವರು ಹೇಳಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ. ‘ಒಪ್ಪಿದೆ ಕಣಯ್ಯ.. ನಿನ್ನ ಮನಸ್ಸು ಎಷ್ಟು ಪರಿಶುದ್ಧವಾಗಿದೆಯೋ ಅಷ್ಟು ಚೆನ್ನಾಗಿ ನೀನು ಬದುಕುತ್ತೀಯ’ ಎಂದು ಸೂರ್ಯವಂಶ ಸಿನಿಮಾದ ಸ್ಟೈಲ್ ನಲ್ಲಿ ಗಿಲ್ಲಿಗೆ ಅಭಿಮಾನಿಗಳು ಹಾರೈಸುತ್ತಿದ್ದಾರೆ. ನಿಷ್ಕಲ್ಮಶವಾದ ಮಾತುಗಳ ಮೂಲಕ ಗಿಲ್ಲಿ ನಟ ಅವರು ಜನರ ಮನಸ್ಸನ್ನು ಗೆಲ್ಲುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಗಿಲ್ಲಿಗೆ ಅಭಿನಂದನೆ.
ಇದನ್ನೂ ಓದಿ: ‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ಗಿಲ್ಲಿ ನಟ ಅವರು ತುಂಬಾ ಕಷ್ಟಪಟ್ಟು ಈ ಮಟ್ಟಕ್ಕೆ ಬಂದಿದ್ದಾರೆ. ಕಾಮಿಡಿ ಪಾತ್ರಗಳ ಮೂಲಕ ಜನರನ್ನು ರಂಜಿಸಿದ್ದಾರೆ. ಈಗ ಅವರಿಗೆ ಸಿನಿಮಾ ಅವಕಾಶಗಳು ಹೆಚ್ಚಾಗಿವೆ. ಅನೇಕ ಕಾರ್ಯಕ್ರಮಗಳಿಗೆ ಅತಿಥಿಯಾಗಿಯೂ ಅವರು ತೆರಳುತ್ತಿದ್ದಾರೆ. ಇನ್ ಸ್ಟಾಗ್ರಾಮ್ ನಲ್ಲಿ ಗಿಲ್ಲಿ ನಟ ಅವರಿಗೆ 2 ಮಿಲಿಯನ್ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.