
ಈ ವರ್ಷ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರಾಜ್ಯದೆಲ್ಲೆಡೆ ಬೆಳೆ ಹಾನಿ ಉಂಟಾಗಿದೆ, ಇತ್ತ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ನವೆಂಬರ್ ಆರಂಭವಾದರೂ ಪ್ರವಾಸಿತಾಣಗಳು ಬಿಕೋ ಎನ್ನುತ್ತಿವೆ.

ಗೋಕರ್ಣ, ಮುರುಡೇಶ್ವರ, ಹೊನ್ನಾವರ, ಕಾರವಾರ ಕಡಲ ತೀರಕ್ಕೆ ಬರುವ ಸಂಖ್ಯೆ ಸಂಪೂರ್ಣ ಇಳಿಕೆ, ನಿಲುಗಡೆ ತಾಣಗಳು ಖಾಲಿಯಾಗುತ್ತಿವೆ.

ಪ್ರವಾಸೋದ್ಯಮ ಮತ್ತು ಮೀನುಗಾರಿಕೆಯೇ ಆರ್ಥಿಕ ಮೂಲವಾಗಿರುವ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಕಳೆದ ಒಂದು ತಿಂಗಳಿನಿಂದ ಹವಮಾನದ ದೊಡ್ಡ ಹೊಡೆತ ಬಿದ್ದಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ರೆಡ್ ಮತ್ತು ಆರೆಂಜ್ ಅಲರ್ಟ ನೀಡಲಾಯಿತು, ಮೀನುಗಾರಿಕೆ ಮತ್ತು ಕಡಲ ಪ್ರವಾಸೋದ್ಯಮವನ್ನು ನಿಷೇಧಿಸಲಾಗಿದೆ.

ವೀಕೆಂಡ್ ಸೇರಿದಂತೆ ರಜೆಯ ಮಜಾ ಅನುಭವಿಸಲು ಬಂದ ಜನ ಕಡಲಿಗಿಳಿಯದೇ ಮರಳಿ ಹೋಗಿದ್ದರೆ, ಮೀನುಗಾರರು ತಮ್ಮ ಬೋಟುಗಳನ್ನ ಬಂದರಿನಲ್ಲಿ ಲಂಗುರು ಹಾಕಿದ್ದಾರೆ. ಹೀಗಾಗಿ ಜಿಲ್ಲೆಯ ಕರಾವಳಿ ತೀರ ಸೇರಿದಂತೆ ಪ್ರವಾಸಿ ತಾಣಗಳು ಖಾಲಿ ಹೊಡೆಯುತ್ತಿವೆ.

ಮಳೆಗಾಲದಲ್ಲಿ ಸ್ಥಗಿತಗೊಳ್ಳುವ ಪ್ರವಾಸೋದ್ಯಮ, ಸೆಪ್ಟೆಂಬರ್ ಮುಗಿಯುವವರೆಗೆ ಪ್ರವಾಸೋದ್ಯಮ ಪ್ರಾರಂಭವಾಗಲಿದೆ. ಆದರೆ ಈ ವರ್ಷ ಪದೇ ಪದೇ ಸುರಿಯುತ್ತಿರುವ ಮಳೆಯಿಂದ, ನವೆಂಬರ್ ಆರಂಭವಾದರೂ ಇನ್ನೂ ಅಷ್ಟಾಗಿ ಬರುತ್ತಿಲ್ಲ. ಕಳೆದ ವರ್ಷ ಅಕ್ಟೋಬರ್ ನಲ್ಲಿ 4.61 ಲಕ್ಷ ಭೇಟಿ ನೀಡಿದರೇ, ಈ ವರ್ಷ ಒಂದೂವರೆ ಲಕ್ಷ ಮಂದಿ ಕಡಿಮೆಯಾಗಿದ್ದು ಸಂಪೂರ್ಣ ಇಳಿಮುಖವಾಗಿದೆ.

ಹವಾಮಾನ ಬದಲಾವಣೆ, ಮಳೆಯ ಹೊಡೆತ, ಪದೇ ಪದೇ ಕಡಲ ತೀರದ ನಿರ್ಬಂಧಗಳು ಸಂಖ್ಯೆ ಇಳುಮುಖಕ್ಕೆ ಉತ್ತಮವಾಗಿದೆ. ಇನ್ನು ವಿದೇಶಿ ಪ್ರಜೆಗಳ ಸಂಖ್ಯೆ ಬೆರಳಣಿಕೆಯಷ್ಟಿದ್ದು, ದೊಡ್ಡ ಮಟ್ಟದಲ್ಲಿ ಇಳಿಕೆ ಕಂಡುಬಂದಿದೆ.
ರಂದು ಪ್ರಕಟಿಸಲಾಗಿದೆ – 6:39 pm, ಶುಕ್ರ, 31 ಅಕ್ಟೋಬರ್ 25