
ಈ ಹೂಡಿಕೆಯ ಬಗ್ಗೆ ಸಿಎಂ ಚಂದ್ರಬಾಬು ನಾಯ್ಡು ಪ್ರತಿಕ್ರಿಯಿಸಿದ್ದು, ಕಳೆದ 15 ತಿಂಗಳಿನಿಂದ ಹೂಡಿಕೆದಾರರನ್ನು ಆಕರ್ಷಿಸಲು ಮಾಡಿದ ಎಲ್ಲಾ ಪ್ರಯತ್ನಗಳು ಫಲ ನೀಡುತ್ತಿವೆ. ದೊಡ್ಡ ಮೊತ್ತದ ಹೂಡಿಕೆ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಉದ್ಯೋಗ ಸೃಷ್ಟಿಗೆ ಕಾರಣವಾಗಲಿದೆ. ಇದು ರಾಜ್ಯದಲ್ಲಿನ ಆರ್ಥಿಕ ಬೆಳವಣಿಗೆಗೆ ಸಹಾಯವಾಗಲಿದೆ. ಪ್ರತಿಯೊಂದು ಯೋಜನೆಯ ಉಸ್ತುವಾರಿಗೆ ಸರ್ಕಾರದಿಂದ ವಿಶೇಷ ಅಧಿಕಾರಿಯನ್ನು ನೇಮಕ ಮಾಡಲಾಗುತ್ತಿದೆ. ಈ ವಿಶೇಷ ಅಧಿಕಾರಿಗಳು ಯೋಜನೆ ಕಾರ್ಯಗತಗೊಳಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ರತನ್ ಟಾಟಾ ನಿಧನದ ಬಳಿಕ ಟಾಟಾ ಟ್ರಸ್ಟ್ನಲ್ಲಿ ಭಾರೀ ಬಿಕ್ಕಟ್ಟು, ಮಧ್ಯಪ್ರವೇಶಿಸಿದ ಕೇಂದ್ರ ಸರ್ಕಾರ!