
ವಿಜಯಪುರ, ಏಪ್ರಿಲ್ 13: ಜಿಲ್ಲೆಯ ಸರ್ಕಾರಿ ಅಧಿಕಾರಿಗಳು (ಸರ್ಕಾರಿ ಕಛೇರಿಗಳು) ಹಾಗೂ ಸಿಬ್ಬಂದಿ ಅನ್ನ ಹೇಳುವವರು, ಕೇಳುವವರು ಯಾರೂ ಇಲ್ಲ. ಕಾರಣ ಯಾರೋಬ್ಬರು ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸುತ್ತಿಲ್ಲ. ಬಿಸಿಲಿನ (ಬೇಸಿಗೆ) ಕಾರಣ ಎಲ್ಲಾ ಸರ್ಕಾರಿ ಇಲಾಖೆಗಳ ಸಮಯ ಬೆಳಿಗ್ಗೆ 8 ರಿಂದ ಮದ್ಯಾಹ್ನ 1:30 ರವರೆಗೆ ನಿಗದಿಪಡಿಸಲಾಗಿದೆ. ಆದರೆ 9ಗಂಟೆಯಾದರೂ ಅಧಿಕಾರಿಗಳು, ಸಿಬ್ಬಂದಿ ಕಚೇರಿಗೆ ಆಗಮಿಸಿ ಸೇವಾ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚುತ್ತಿರುವ ತೀವ್ರ ಬಿಸಿಲು ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಬಿಸಿಲಿನ ತಾಪಮಾನದಿಂದ ಜನತೆ ಬಸವಳಿಯುತ್ತಿದೆ. ಇದನ್ನು ಮನಗಂಡ ಸರ್ಕಾರ ವಿವಿಧ ಸರ್ಕಾರಿ ಕಚೇರಿಗಳ ಕಾರ್ಯವನ್ನು ಬದಲಿಸಿದೆ. ಏಪ್ರಿಲ್ 1 ರಿಂದ ಮೇ ತಿಂಗಳ ಕೊನೆಯವರೆಗೆ ಬೆಳಗಾವಿ ವಿಭಾಗ ವಿಜಯಪುರ, ಬಾಗಕೋಟೆ ಹಾಗೂ ಕಲಬುರಗಿ ಜಿಲ್ಲೆಗಳ ಸರ್ಕಾರಿ ಕಚೇರಿಗಳಿಗೆ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1-30 ರವರೆಗೆ ಕೆಲಸದ ಸಮಯವನ್ನು ನಿಗದಿಪಡಿಸಲಾಗಿದೆ. ಆದರೆ ಸಮಯ ಬದಲಾವಣೆಯಾದರೂ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ಲಕ್ಷ್ಯ ಮುಂದುವರಿದಿದೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: “ಸರ್ ಪ್ಲೀಸ್, ಸುಡುವ ಬಿಸಿಲಲ್ಲಿ ಕೆಲಸ”: ಗದಗದಲ್ಲಿ ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಪಟ್ಟು!
ಹಲವು ಇಲಾಖೆಗಳ ಕಚೇರಿಗಳಲ್ಲಿ ಸಿಬ್ಬಂದಿ ಬೆಳಿಗ್ಗೆ 8 ಗಂಟೆಗೆ ಹಾಜರಾಗುತ್ತಾರೆ, 9ಗಂಟೆಯಾದರೂ ಕಚೇರಿಗೆ ಬಾರದ ಸ್ಥಿತಿ ಇದೆ. ಯೋಜನಾ ನಿರ್ದೇಶಕರ ಕಾರ್ಯಾಲಯ, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ, ತಾಂತ್ರಿಕ ಸಹಾಯಕರು ಹಾಗೂ ನಿಮಿತ್ತ ಭೂದಾಖಲೆಗಳ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಸೇರಿದಂತೆ ಹಲವೆಡೆ ಈ ನಿರ್ಲಕ್ಷ್ಯ ಕಂಡುಬಂದಿದೆ.
ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
ಸರ್ಕಾರಿ ಕೆಲಸದ ದೇವರ ಕೆಲಸವನ್ನು ಪರಿಗಣಿಸಿದರೂ, ನಿಗದಿತ ಸಮಯಕ್ಕೆ ಹಾಜರಾಗದೇ ಜನರ ಕೆಲಸ ವಿಳಂಬವಾಗುತ್ತಿದೆ. ತಡವಾಗಿ ಬರುವ ಸಿಬ್ಬಂದಿ ಮಧ್ಯಾಹ್ನಕ್ಕೂ ಮುನ್ನವೇ ಕಚೇರಿ ತೊರೆಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಿಸಿಲಿನ ತೀವ್ರತೆಯನ್ನು ಮನಗಂಡು ಸರ್ಕಾರ ಸಮಯ ಬದಲಾವಣೆ ಮಾಡಿದ್ದರೂ, ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ಅದನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದಾಗಿ ಆರೋಪಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ನಿಗದಿತ ಸಮಯಕ್ಕೆ ಬಾರದಿದ್ದರೆ ಹಾಜರಾತಿ ಗೈರು
ಸರ್ಕಾರದ ಆದೇಶದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಳಿಗ್ಗೆ 8 ಗಂಟೆಗೆ ಸೇವೆಗೆ ಹಾಜರಾಗಲೇಬೇಕು. ಮಧ್ಯಾಹ್ನ 1:30 ರವರೆಗೆ ಕೆಲಸ ಮಾಡಬೇಕು. ಆದರೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಿಗದಿತ ಸಮಯಕ್ಕೆ ಯಾರೊಬ್ಬ ಅಧಿಕಾರಿಗಳು ಆಗಮಿಸುತ್ತಿಲ್ಲ. ಮನಸ್ಸಿಗೆ ಬಂದಂತೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ವಿವಿ ವಿವಿ ವಿವಿ ಇತರ ಅಧಿಕಾರಿಗಳು, ಸಿಬ್ಬಂದಿ ಹಾಜರಾತಿ ಪುಸ್ತಕವನ್ನು ತಮ್ಮ ಚೇಂಬರ್ನಲ್ಲೇ ಇಟ್ಟುಕೊಂಡಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಬಾರದ ಅಧಿಕಾರಿಗಳು, ಸಿಬ್ಬಂದಿ ಹಾಜರಾತಿಯನ್ನು ಗೈರು ಎಂದು ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.
ಡಿಸಿ ಕೆ ಆನಂದ್ ಹೇಳಿದ್ದಿಷ್ಟು
ಇನ್ನು ಈ ವಿಷಯ ಕುರಿತು ಡಿಸಿ ಕೆ ಆನಂದ್ ಅವರು ಮಾತನಾಡಿದ್ದು, ಬಿಸಿಲಿನ ಕಾರಣ ಏಪ್ರಿಲ್ 1 ರಿಂದ ಕೊನೆಯವರೆಗೆ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳ ಸಮಯ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1-30 ರವರೆಗೆ. ನಿಗದಿತ ಸಮಯಕ್ಕೆ ಅಧಿಕಾರಿಗಳು, ಸಿಬ್ಬಂದಿ ಹಾಜರಾಗಬೇಕು. ಇಲ್ಲವಾದರೆ ನೋಟಿಸ್ ಜಾರಿಯಾಗುತ್ತದೆ. ಆಗಲೂ ಸರಿಯಾಗಿ ಸೇವೆಗೆ ಹಾಜರಾಗದಿದ್ದರೆ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ವಿಜಯಪುರ: 21 ವರ್ಷಗಳ ಕಳ್ಳ-ಪೊಲೀಸ್ ಆಟಕ್ಕೆ ಬ್ರೇಕ್: ಪೆರೋಲ್ ಮೇಲೆ ಎಸ್ಕೇಪ್ ಆಗಿದ್ದ ಕೈದಿ ಅಂದರು.
ಸದ್ಯ ವಿಜಯಪುರ ಜಿಲ್ಲಾ ಸರ್ಕಾರಿ ಕಚೇರಿಗಳ ಅಧಿಕಾರಿಗಳು, ಸಿಬ್ಬಂದಿಗೆ ಒಂದು ರೀತಿಯ ಸಮ್ಮರ್ ವೆಕೇಷನ್ ಆಗಿದೆ. ಬಿಸಿಲಿನ ಕಾರಣ ಕಚೇರಿ ಸಮಯ ಬದಲಾವಣೆಯಾಗಿದ್ದರೂ ಸರಿಯಾಗಿ ಕಚೇರಿಗೆ ಆಗಮಿಸಿದ ಅಧಿಕಾರಿಗಳು, ಸಿಬ್ಬಂದಿ ಮೇಲೆ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಕ್ರಮಕೈಗೊಳ್ಳಬೇಕಿದೆ. ಇಲ್ಲದಿದ್ದರೆ ಸಾರ್ವಜನಿಕರಿಗೆ ಸಮಸ್ಯೆ ಮುಂದುವರಿಯಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.