ಅಹಮದಾಬಾದ್, ಡಿಸೆಂಬರ್ 10: ಊಟದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸುವ ದಂಪತಿ ನಡುವೆ ಉಂಟಾದ ಜಗಳ ವಿಚ್ಛೇದನ(ವಿಚ್ಛೇದನ)ನೊಂದಿಗೆ ಅಂತ್ಯಗೊಂಡಿದೆ. ವಾದ ಎಷ್ಟು ತೀವ್ರವಾಗಿತ್ತೆಂದರೆ 11 ವರ್ಷದ ದಾಂಪತ್ಯ ಜೀವನವೇ ಕೊನೆಗೊಂಡಿದೆ. ಈ ವಿಚಿತ್ರ ಅಹಮದಾಬಾದ್ ನಲ್ಲಿ ಘಟನೆ ನಡೆದಿದೆ. ಪತ್ನಿ ಕೂಡಲೇ ಮಗುವಿನೊಂದಿಗೆ ಮನೆಬಿಟ್ಟು ಹೊರಟು ಹೋಗಿದ್ದಳು, ಪತಿ ಬಳಿಕ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣವು ತೀವ್ರ್ ಮಟ್ಟಿಲೇರಿತ್ತು. ಅಲ್ಲಿ ನ್ಯಾಯಾಲಯವು ವಿಚ್ಛೇದನವನ್ನು ಪ್ರಶ್ನಿಸಿ ಪತ್ನಿಯ ಮೇಲ್ಮನವಿಯನ್ನು ವಜಾಗೊಳಿಸಿತು. ಈ ಜೋಡಿ 2002ರಲ್ಲಿ ವಿವಾಹವಾಗಿದ್ದರು. ಪತ್ನಿ ಸ್ವಾಮಿನಾರಾಯಣ ಪಂಥದ ಅನುಯಾಯಿಗಳು.
ಯಾವುದೇ ಊಟದಲ್ಲಿ ಈರುಳ್ಳಿ, ಬೆಳ್ಳುಳ್ಳಿ ತಿನ್ನಲು ಬಿಡಬೇಕು. ಆದರೆ ಪತಿ ಹಾಗೂ ಅತ್ತೆಗೆ ಇದು ಇಷ್ಟವಾಗಲಿಲ್ಲ. ಕೊನೆಗೆ ಆಹಾರದ ಆಯ್ಕೆ ದಾಂಪತ್ಯಕ್ಕೆ ವಿಪತ್ತಾಗಿ ಪರಿಣಮಿಸಿತು. ಜಗಳ ಹೆಚ್ಚಾಗಿ, ಸಂಬಂಧ ಹದಗೆಟ್ಟಿತ್ತು. ಸ್ವಾಮಿನಾರಾಯಣ ಪಂಥದ ನಿಯಮಾವಳಿಗಳನ್ನು ಪಾಲಿಸುತ್ತಿದ್ದ ಪತ್ನಿ ದೇವಸ್ಥಾನಗಳಲ್ಲಿ ಪ್ರಾರ್ಥನೆಗಳು ಮತ್ತು ಧಾರ್ಮಿಕ ಆಚರಣೆಗಳಿಗೆ ಹಾಜರಾಗಲು.
ಆಕೆಯ ಪತಿ ಮತ್ತು ಅತ್ತೆ ತಮ್ಮ ಆಹಾರ ಪದ್ಧತಿಯನ್ನು ಬದಲಾಯಿಸಲು ಇಷ್ಟವಾಗಲಿಲ್ಲ, ಪರಿಣಾಮವಾಗಿ ಮನೆಯಲ್ಲಿ ಪ್ರತ್ಯೇಕ ಅಡುಗೆ ವ್ಯವಸ್ಥೆಯನ್ನು ಮಾಡಲಾಗಿತ್ತು. 2013 ರಲ್ಲಿ, ಪತಿ ಅಹಮದಾಬಾದ್ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದರು, ಆಹಾರದ ವಿಷಯದಲ್ಲಿ ತನ್ನ ಹೆಂಡತಿ ತನ್ನ ಬಳಿ ಕ್ರೂರವಾಗಿ ವರ್ತಿಸಿದ ನಂತರ ತನ್ನನ್ನು ಬಿಟ್ಟುಹೋಗಿದ್ದಾಳೆ ಎಂದು ಆರೋಪಿಸಿದ್ದರು.
ಮತ್ತಷ್ಟು ಓದಿ: ವಿಚ್ಛೇದನ ಕೇಳಿದ್ದಕ್ಕೆ ಪತ್ನಿಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ ಪತಿ! ಅಮಲೇನಾಯ್ತು?
2024 ರಲ್ಲಿ, ಕೌಟುಂಬಿಕ ನ್ಯಾಯಾಲಯವು ಅವರಿಗೆ ವಿಚ್ಛೇದನವನ್ನು ನೀಡಿ, ಪತ್ನಿಗೆ ಜೀವನಾಂಶವನ್ನು ನೀಡುವಂತೆ ಸೂಚಿಸಿತು. ದಂಪತಿ ಉನ್ನತ ಮೆಟ್ಟಿಲೇರಿದರು.
ಪತ್ನಿಯ ಧಾರ್ಮಿಕ ನಂಬಿಕೆಗಳಿಂದ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ತಪ್ಪಿಸುವ ಅಭ್ಯಾಸವು ಜಗಳಗಳಿಗೆ ಕಾರಣವಾಯಿತು ಎಂದು ಪತಿ ಕುಟುಂಬ ನ್ಯಾಯಾಲಯದಲ್ಲಿ ಹೇಳಿಕೊಂಡಿದ್ದು, ಆಕೆ ಬದಲಾಗಲು ಸಿದ್ಧಳಿಲ್ಲ ಎಂದು ಮಹಿಳೆ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು. ಈ ಕಾನೂನು ಪ್ರಕ್ರಿಯೆಯು ಸುಮಾರು 12 ವರ್ಷಗಳ ಕಾಲ ನಡೆಯಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ