
ಬೀದರ್, ಮಾರ್ಚ್ 29: ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಚಿಯಾ (ಚಿಯಾ) ಬೆಳೆಗಾರರಿಗೆ ತಟ್ಟಿದೆ. ಚಿಯಾ ಬೀಜದ ದರ ಅರ್ಧದಷ್ಟು ಇಳಿಕೆ, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಯುದ್ಧ ಮುಂದುವರೆದ ಹಿನ್ನಲೆಯಲ್ಲಿ ರಫ್ತು ಮಾಡಲಾಗದೇ ಸಮಸ್ಯೆ ಉಂಟಾಗಿದ್ದು, ಚಿಯಾ ದರದಲ್ಲಿ (ದರ) ಭಾರೀ ಕುಸಿತವಾಗಿದೆ. ಸದ್ಯ ಇದು ರೈತರ ಕಂಗಾಲು ಮಾಡಿದೆ.
ಒಂದೇ ತಿಂಗಳಲ್ಲಿ 10 ಸಾವಿರ ರೂ. ಇಳಿಕೆ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಚಿಯಾ ಬೆಳೆಗಾರರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಚಿಯಾ ಬೆಳೆಗಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ತಿಂಗಳ ಹಿಂದೆ ಪ್ರತಿ ಕ್ವಿಂಟಾಲ್ಗೆ 22 ಸಾವಿರ ರೂ.ಗೆ ಮಾರಾಟವಾಗುತ್ತಿದ್ದ ಚಿಯಾ ಬೀಜ ಇದೀಗ 12 ಸಾವಿರ ರೂ.ಗೆ ಭಾರೀ ಕುಸಿತ ಕಂಡಿದೆ. ಅಂದರೆ ಒಂದೇ ತಿಂಗಳಲ್ಲಿ 10 ಸಾವಿರ ರೂ. ವರೆಗೆ ಇಳಿಕೆ, ರೈತರಿಗೆ ದೊಡ್ಡ ನಷ್ಟ ಉಂಟಾಗಿದೆ.
ಇದನ್ನೂ ಓದಿ: ಕಬ್ಬಿಗೆ ಗುಡ್ ಬಾಯಿ ಹೇಳಿ ಬಹುಬೇಡಿ ಮುಖಮಾಡಿದ ಗಡಿ ಜಿಲ್ಲೆ ರೈತರು: ಕೈತುಂಬಾ ಲಾಭ
ಚಿಯಾ ಬೀಜವನ್ನು ಹೆಚ್ಚಿನ ಪ್ರಮಾಣದಲ್ಲಿ ಗಲ್ಫ್ ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತದೆ. ಆದರೆ ಯುದ್ಧದ ಪರಿಣಾಮ ರಫ್ತು ವ್ಯವಹಾರದಲ್ಲಿ ಉಂಟಾಗಿದೆ, ಬೇಡಿಕೆ ಕಡಿಮೆಯಾಗಿದೆ. ಇದರ ಪರಿಣಾಮವೇ ಚಿಯಾ ಬೆಲೆ ಕುಸಿತಕ್ಕೆ ಕಾರಣ. ಈ ಬೆಳೆಯಲ್ಲಿ ಇಂತಹ ದರ ಕುಸಿತದಿಂದ ರೈತರು ಸಂಕಷ್ಟಕ್ಕೀಡಾಗಿದ್ದರೆ, ಸರ್ಕಾರದಿಂದ ತಕ್ಷಣದ ನೆರವು ಮತ್ತು ಪರ್ಯಾಯ ಮಾರುಕಟ್ಟೆ ವ್ಯವಸ್ಥೆಗಳ ಬಗ್ಗೆ ರೈತರ ಮನವಿ.
ಚಿಯಾ ಬೆಳೆಯನ್ನ ಹೆಚ್ಚಾಗಿ ಬೆಳೆಯುದೇಕೆ?
ಬೀದರ್ ಜಿಲ್ಲೆಯಾದ್ಯಂತ ಸುಮಾರು 3 ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಚಿಯಾ ಬೆಳೆಯುತ್ತಿದೆ. ಚಿಯಾ ಧಾನ್ಯದಲ್ಲಿ ಅಧಿಕ ಕ್ಯಾಲ್ಸಿಯಂ, ಮ್ಯಾಗ್ನಿಷಿಯಂ, ಫಾಸ್ಫರಸ್ ಎಂಬ ಔಷಧೀಯ ಗುಣಗಳು ಹಾಗೂ ಪೌಷ್ಟಿಕಾಂಶವಿದ್ದು, ಗಲ್ಫ್ ರಾಷ್ಟ್ರಕ್ಕೆ ಹೆಚ್ಚಾಗಿ ರಫ್ತು ಆಗುತ್ತಿದೆ. ಈ ಬೆಳೆ ಜಾನುವಾರು ಅಥವಾ ಕಾಡುಪ್ರಾಣಿಗಳ ಹಾವಳಿ ಇಲ್ಲದೆ ನೆಮ್ಮದಿಯಿಂದ ರೈತ ಬೆಳೆಯಲಿಲ್ಲ. ಇನ್ನೂ ಚಿಯಾ ಬೆಳೆಗೆ ಅಂತಾರಾಷ್ಟ್ರಿಯ ಮಟ್ಟದಲ್ಲಿ ಬಹುಬೇಡಿಕೆಯಿರುವ ಸಿರಿಧಾನ್ಯವಾಗಿದ್ದು, ಒಣ ಹವಾಮಾನದಲ್ಲಿ, ವಾರಕ್ಕೊಂದು ಬಾರಿ ತುಂತುರು ನೀರಾವರಿ ನೀಡಿದರೆ ಸಾಕು. 90 ರಿಂದ 100 ದಿನದಲ್ಲಿ ಫಸಲು ಪಡೆಯಬಹುದು.
ಕಡಿಮೆ ಖರ್ಚು: ಹೆಚ್ಚು ಲಾಭ
ಒಂದು ಪ್ರದೇಶಕ್ಕೆ 3 ರಿಂದ 4 ಸಾವಿರ ರೂ ವೆಚ್ಚ ಬರಲಿದೆ, ಪೈರು ಬೆಳೆಸಿ ನಾಟಿ ಅಥವಾ ಬಿತ್ತನೆ ಬೀಜ ನೇರವಾಗಿ ಸಾಲು ಬಿಟ್ಟು ಬೆಳೆಯಬಹುದು. ಒಮ್ಮೆ ಮಾತ್ರ ರಾಸಾಯನಿಕ ಗೊಬ್ಬರ ಹಾಕಿದರೆ ಸಾಕು. ಸ್ಥಳಿಯ ವಾತಾವರಣಕ್ಕೆ ಬೆಳೆಯಬಹುದಾದ ವಾಣಿಜ್ಯ ಬೆಳೆ ಚಿಯಾಗೆ 4 ರಿಂದ 5 ಕ್ವಿಂಟಲ್ ಇಳುವರಿ ಸಿಗಲಿದೆ. ಪ್ರಸ್ತುತ ಕ್ವಿಂಟಲ್ಗೆ 14 ರಿಂದ 19 ಸಾವಿರ ರೂ.ವರೆಗೆ ದರವಿದ್ದು, ರೈತರು ಹೆಚ್ಚಿನ ಲಾಭ ಪಡೆಯುತ್ತಾರೆ. ಹೀಗಾಗಿ ಹೆಚ್ಚಿನ ರೈತರು ಚಿಯಾ ಬೆಳೆಯಲು. ಆದರೆ ಯುದ್ದ ಹಿನ್ನಲೆಯಲ್ಲಿ ಕುಸಿತವಾಗಿದೆ, ನಮಗೆ ದಿಕ್ಕೆ ತೋಚದಂತಾಗಿದ್ದರೆ ಏನಾದರೂ ಸಹಾಯ ಮಾಡಿ ಎಂದು ರೈತ ಬಸವರಾಜ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಬೀದರ್ ರೈತನ ಕೈ ಹಿಡಿದ ಹಳದಿ ಸುಂದರಿ: ವರ್ಷಕ್ಕೆ ಲಕ್ಷಾಂತರ ರೂ ಆದಾಯ, ಆಧುನಿಕ ಯುಗದಲ್ಲಿ ಕ್ರಾಂತಿ
ಬೀದರ್ ಜಿಲ್ಲೆಯ ರೈತರು ಚಿಯಾ ಕೃಷಿಯಲ್ಲಿ ತೊಡಗಿದ್ದಾರೆ. ಒಮ್ಮೆ ನಾಟಿ ಮಾಡಿದ ನಂತರ ಯಾವುದೇ ಖರ್ಚು ಇಲ್ಲದೇ ಶೂನ್ಯ ಬಂಡವಾಳದಲ್ಲಿ ಬೆಳೆಯಬಹುದಾದ ಬೆಳೆ ಇದೆ. ಆದರೆ ಯುದ್ದದಿಂದಾಗಿ ದರ ಕುಸಿತವಾಗಿದೆ ರೈತರ ಕಂಗಾಲು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.