ಬಳ್ಳಾರಿ, ಫೆ.14: ವಿಶ್ವವಿಖ್ಯಾತ ಹಂಪಿ ಉತ್ಸವವು ಈ ಬಾರಿ ಸರ್ಕಾರಿ ಶಾಲಾ ಮಕ್ಕಳ ಪಾಲಿಗೆ ಅವಿಸ್ಮರಣೀಯ ಕ್ಷಣವಾಗಿದೆ. ದೂರದಿಂದ ಹೆಲಿಕಾಪ್ಟರ್ ನೋಡಿ ಸಂಭ್ರಮಿಸುತ್ತಿದ್ದ ಪುಟಾಣಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಆಕಾಶದಲ್ಲಿ ಹಾರಾಡುವ ಅವಕಾಶ ಮಾಡಿಕೊಡುವ ಮೂಲಕ ದೊಡ್ಡ ‘ಸರ್ಪ್ರೈಸ್’ ನೀಡಿದ್ದಾರೆ. ಕಮಲಾಪುರದ ಮಯೂರ ಹೋಟೆಲ್ ಅದರ ಹೆಲಿಕಾಪ್ಟರ್ ರೈಡ್ ವ್ಯವಸ್ಥೆಯನ್ನು ಮಾಡಲಾಗಿದೆ. ಇದನ್ನು ನೋಡಲು ಸುತ್ತಮುತ್ತಲಿನ ಸರ್ಕಾರಿ ಶಾಲಾ ಮಕ್ಕಳು ಕುತೂಹಲದಿಂದ ಬಂದಿದ್ದರು.ಈ ವೇಳೆ ಸ್ಥಳದಲ್ಲಿದ್ದ ಸಚಿವ ಜಮೀರ್ ಅಹಮದ್ ಖಾನ್ ಅವರು ಮಕ್ಕಳ ಬಳಿ ತೆರಳಿ ಮಾತುಕತೆ ನಡೆಸಿದರು. “ನಿಮಗೂ ಹೆಲಿಕಾಪ್ಟರ್ ಹತ್ತಬೇಕಾ?” ಎಂದು ಸಚಿವರು ಕೇಳಿದ ತಕ್ಷಣ, ಮಕ್ಕಳು ಸಂಭ್ರಮದಿಂದ “ಹೌದು ಸರ್” ಎಂದು ಕೂಗಿದರು. ಮಕ್ಕಳ ಆಸೆಯನ್ನು ಕಂಡ ಸಚಿವರು ವಿಳಂಬ ಮಾಡದೆ, ತಮ್ಮ ಸ್ವಂತ ಖರ್ಚಿನಲ್ಲಿ ಸುಮಾರು 60ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಜೀವನದಲ್ಲಿ ಒಮ್ಮೆಯಾದರೂ ವಿಮಾನ ಅಥವಾ ಹೆಲಿಕಾಪ್ಟರ್ ಏರಬೇಕು ಎಂಬ ಕನಸು ಹೊತ್ತಿದ್ದ ಬಡ ಕುಟುಂಬದ ಮಕ್ಕಳು ಆಕಾಶಕ್ಕೆ ಹಾರಿದ್ದರಿಂದ ಅವರ ಸಂತೋಷಕ್ಕೆ ಪಾರವೇ ಇರಲಿಲ್ಲ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ