ಹಾಸನ, ಡಿ.31 : ತಂದೆ ತಾಯಿ ಮಡಿ ಸೇರಿಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆಲಿಗೆ ಗ್ರಾಮದಲ್ಲಿ ನಡೆದಿದೆ. ಬಾಲಕಿ ನಿನ್ನೆ ರಾತ್ರಿ ತಾಯಿಯಿಂದ ತಪ್ಪಿಸಿಕೊಂಡಿದ್ದಾಳೆ. ತಾಯಿ, ಮಗು ಸೇರಿ ಆರು ಜನರ ತಂಡ ಧರ್ಮಸ್ಥಳದಿಂದ ಕೋಲಾರಕ್ಕೆ ತೆರಳುತ್ತಿದ್ದ ವೇಳೆ ಬಾಗೆ ಗ್ರಾಮದ ಬಳಿ ಸಾರಿಗೆ ಬಸ್ ಕೆಟ್ಟು ನಿಂತಿದೆ. ಈ ವೇಳೆ ಪ್ರಯಾಣಿಕರನ್ನು ಕಂಡಕ್ಟರ್ ಮತ್ತೊಂದು ಬಸ್ಸಿನಲ್ಲಿ ಕಳುಹಿಸಿದ್ದಾನೆ. ಆದರೆ ಬಾಲಕಿ ಗೊಂದಲದಿಂದ ಕೆಟ್ಟು ನಿಂತಿದ್ದ ಬಸ್ಸಿನಲ್ಲೇ ಕುಳಿತಿದ್ದಾಳೆ. ಮತ್ತೊಂದು ಕಡೆ ಬಾಲಕಿಯ ತಾಯಿ ಮಗಳು ಬಸ್ ಹತ್ತಿದ್ದಾಳೋ ಇಲ್ಲವೋ ಎಂದು ಗಮನಿಸದೆ ಸ್ನೇಹಿತೆಯರ ಜೊತೆ ತೆರಳಿದ್ದಾಳೆ. ರಿಪೇರಿಯಾದ ನಂತರ ಬೆಂಗಳೂರು ಕಡೆಗೆ ಹೊರಟಿದ್ದ ಬಸ್ನಲ್ಲಿ ಬಾಲಕಿಯನ್ನು ಕಂಡು ಬಸ್ ನಿರ್ವಾಹಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿ ಬಾಲಕಿ ತಾಯಿಗೆ ಕರೆ ಮಾಡಿದ್ದಾರೆ. ಅಷ್ಟರಲ್ಲಿ ಹಾಸನ ಸಮೀಪ ಬಂದಿದ್ದ ತಾಯಿ, ವಾಪಾಸ್ ಬಂದು ಮಗಳನ್ನು ಕರೆದುಕೊಂಡು ಹೋಗಿದ್ದಾಳೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ