Headlines

ಸಕಲೇಶಪುರ: ಅರಣ್ಯ ಇಲಾಖೆ ಸಿಬ್ಬಂದಿ ಕಂಡು ರೌದ್ರಾವತಾರ ತಾಳಿ ಬೈಕ್​ಗಳ ಮೆಟ್ಟಿ ಪುಡಿ ಮಾಡಿದ ಕಾಡಾನೆ! ವಿಡಿಯೋ ನೋಡಿ

ಸಕಲೇಶಪುರ: ಅರಣ್ಯ ಇಲಾಖೆ ಸಿಬ್ಬಂದಿ ಕಂಡು ರೌದ್ರಾವತಾರ ತಾಳಿ ಬೈಕ್​ಗಳ ಮೆಟ್ಟಿ ಪುಡಿ ಮಾಡಿದ ಕಾಡಾನೆ! ವಿಡಿಯೋ ನೋಡಿ


ಸಕಲೇಶಪುರ: ಅರಣ್ಯ ಇಲಾಖೆ ಸಿಬ್ಬಂದಿ ಕಂಡು ರೌದ್ರಾವತಾರ ತಾಳಿ ಬೈಕ್ ಮೆಟ್ಟಿ ಪುಡಿ ಮಾಡಿದ ಕಾಡಾನೆ! ವಿಡಿಯೋ ನೋಡಿ

ಹಾಸನ, ಏಪ್ರಿಲ್ 1: ಜಿಲ್ಲೆಯ ಸಕಲೇಶಪುರ ತಾಲೂಕಿನೂರು ಗ್ರಾಮದಲ್ಲಿ ಕಾಡಾನೆಗಳ ಚಲನವಲನವನ್ನು ಗಮನಿಸುತ್ತಿರುವ ಅರಣ್ಯ ಇಲಾಖೆಯ ಎಲಿಫೆಂಟ್ ಟಾಸ್ಕ್ ಫೋರ್ಸ್ (ಇಟಿಎಫ್) ಸಿಬ್ಬಂದಿ ಮೇಲೆ ಕಾಡಾನೆಯೊಂದು ಭೀಕರವಾಗಿ ದಾಳಿ ನಡೆಸಿದೆ. ಈ ವೇಳೆ ಸಿಬ್ಬಂದಿ ಕೂಡಲೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಐಟಿಎಫ್ ಸಿಬ್ಬಂದಿಯಾದ ಪ್ರಸನ್ನ, ಯುವರಾಜ್ ಮತ್ತು ಧನಂಜಯ ಮತ್ತೂರು ಗ್ರಾಮದ ಬಳಿ ಕಾಡಾನೆಗಳ ಮೇಲೆ ನಿಗಾ ಇರಿಸಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಆನೆಯೊಂದು ಇವರತ್ತ ನುಗ್ಗಿ ಬಂದಿದೆ. ಆನೆ ದಾಳಿ ಮಾಡಿದ್ದರಿಂದ ಗಾಬರಿಗೊಂಡ ಸಿಬ್ಬಂದಿ ಬೈಕ್‌ಗಳನ್ನು ಸ್ಥಳದಲ್ಲೇ ಬಿಟ್ಟು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಸಿಬ್ಬಂದಿ ನಂತರ ಆನೆಯು ಅಲ್ಲಿದ್ದ ಬೈಕ್‌ಗಳನ್ನು ಸಂಪೂರ್ಣವಾಗಿ ಜಖಂಗೊಳಿಸಿದೆ.

ಈ ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು, ಕಾಡಾನೆಗಳನ್ನು ಓಡಿಸುವ ಅರಣ್ಯ ಇಲಾಖೆ ಸಿಬ್ಬಂದಿಗೆ ಸರಿಯಾದ ರಕ್ಷಣೆ ಇಲ್ಲ. ಇನ್ನು ಸಾಮಾನ್ಯ ಜನರ ಕಥೆ ಏನು? ಎಂದು ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *