
<p><strong>Car-KSRTC Bus Accident</strong>: ಡಿಕ್ಕಿಯ ರಭಸಕ್ಕೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳಿಂದ ಅಂಗಾಂಗಗಳು ಹೊರಬಂದು ಚೆಲ್ಲಾಪಿಲ್ಲಿಯಾಗಿವೆ. ಮೃತ ಮೂವರು ಕಾರ್ ಪ್ರಯಾಣಿಕರಾಗಿದ್ದಾರೆ.</p><img><p>ಕಾರ್ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳಿಂದ ಅಂಗಾಂಗಗಳು ಹೊರಬಂದು ಚೆಲ್ಲಾಪಿಲ್ಲಿಯಾಗಿವೆ. ಮೃತ ಮೂವರು ಕಾರ್ ಪ್ರಯಾಣಿಕರಾಗಿದ್ದಾರೆ.</p><img><p>ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಭೀಕರವಾದ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್, ಡಿವೈಡರ್ ಹಾರಿ ಪಕ್ಕದ ರಸ್ತೆಯಲ್ಲಿ ತೆರಳುತ್ತಿದ್ದ ಸಾರಿಗೆ ಬಸ್ಗೆ ಡಿಕ್ಕಿಯಾಗಿದೆ. ಬಸ್ ಮುಂಭಾಗ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p><img><p>KA 50 MA 0789 ಸಂಖ್ಯೆಯ ಕಾರ್ ವೇಗವಾಗಿ ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿಯತ್ತ ತೆರಳುತ್ತಿತ್ತು. ಮೃತರನ್ನು ಮೋಹನ್ ಕುಮಾರ್ (33), ಸುಮನ್ (28), ಸಾಗರ್ (23) ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ಅತಿಯಾದ ವೇಗ ಕಾರಣ ಎಂದು ಹೇಳಲಾಗುತ್ತಿದೆ.</p><img><p>ಗಾಯಗೊಂಡು ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಅಪಘಾತದಿಂದಾಗಿ ಟ್ರಾಫಿಕ್ ತಿಳಿಗೊಳಿಸಿ, ಮೃತದೇಹಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವ ಕೆಲಸ ಮಾಡ್ತಿದ್ದಾರೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.</p>
Source link
ಡಿವೈಡರ್ನಿಂದ ಹಾರಿ KSRTC ಬಸ್ಗೆ ಡಿಕ್ಕಿಯಾದ ಕಾರ್, ಮೂರು ಸಾವು ಚೆಲ್ಲಾಪಿಲ್ಲಿಯಾದ ಮೃತದೇಹಗಳು