ಮೇಷ ರಾಶಿ:
ಒಂದೇ ಕೆಲಸವನ್ನು ನಿರಂತರವಾಗಿ ಮಾಡಿ ಶಿಸ್ತನ್ನು ಪಡೆದುಕೊಳ್ಳಿ. ದೊಡ್ಡ ಕನಸನ್ನು ಇಟ್ಟುಕೊಳ್ಳುವುದು ಸೂಕ್ತ. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆ ಇರುವುದು. ಆಹಾರದಿಂದ ಆರೋಗ್ಯ ಕೆಡುವುದು. ನಿಮಗೆ ಬೇಕಾದ ವಸ್ತುವೇ ಆದರೂ ಯಾರು ಕೇಳಿದರೂ ಕೊಡುವಿರಿ. ದೂರದ ಬಂಧುವಿನ ಭೇಟಿಯಾಗಿ ಪರಿಚಯ ಮಾಡಿಕೊಳ್ಳುವಿರಿ. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ್ದು ಬೇಸರಕ್ಕೆ ಕಾರಣ.
ವೃಷಭ ರಾಶಿ:
ಪ್ರೀತಿಯ ವಿಷಯದಲ್ಲಿ ಪರಿಚಿತರ ಜೊತೆ ಚರ್ಚಿಸಿ. ರಾಜಕೀಯ ವ್ಯಕ್ತಿಗಳಿಂದ ನಿಮಗೆ ಸ್ವಲ್ಪಮಟ್ಟಿನ ಲಾಭವಾಗುವುದು. ನಿತ್ಯಕರ್ಮದಲ್ಲಿ ವ್ಯತ್ಯಾಸವಾದ ಕಾರಣ ಎಲ್ಲವೂ ವೇಗವಾಗಿ ಮಾಡಬೇಕಾದೀತು. ಕೆಲವು ವಿಚಾರಗಳನ್ನು ನಿರ್ಲಕ್ಷ್ಯಿಸದಿದ್ದರೆ ದೊಡ್ಡದಾಗಬಹುದು. ಇತರ ವಸ್ತುವನ್ನು ನೀವು ಇಟ್ಟುಕೊಳ್ಳಬೇಕು. ವಿದೇಶದಲ್ಲಿ ಇರುವವರಿಗೆ ಆರೋಗ್ಯ ಕೆಡಬಹುದು. ವ್ಯಾಪಾರಸ್ಥರು ಲಾಭವನ್ನು ಗಳಿಸುವ ಯೋಜನೆ ರೂಪಿಸಿಕೊಳ್ಳುವುದು.
ಮಿಥುನ ರಾಶಿ:
ಪರರ ಸ್ವತ್ತನ್ನು ಯಾವುದಾದರೂ ರೀತಿಯಲ್ಲಿ ಪಡೆಯುವ ಯೋಚನೆ ಬರಬಹುದು. ಕಾರ್ಯದ ನಿರುತ್ಸಾಹವನ್ನು ನಿಮ್ಮದೇ ಆದ ವಿಧಾನದಿಂದ ಸರಿ ಮಾಡಿಕೊಳ್ಳುವಿರಿ. ಇಂದಿನ ಕನಸು ನಿಮಗೆ ಭೀತಿಯನ್ನು ತಂದೀತು. ಕಳೆದುಕೊಂಡ ಸಂಬಂಧವನ್ನು ಮತ್ತೆ ಕೂಡಿಸಿಕೊಳ್ಳಲು ಪ್ರಯತ್ನಿಸುವಿರಿ. ಹೂಡಿಕೆಯನ್ನು ಮಾಡಲು ಎಲ್ಲರಿಂದ ಮಾಹಿತಿಯನ್ನು ಸಂಗ್ರಹಿಸುವಿರಿ. ಭವಿಷ್ಯದ ಬಗ್ಗೆ ಏನೇನೋ ಕಲ್ಪನೆಯನ್ನು ಇಟ್ಟುಕೊಂಡು ಹತಾಶೆ.
ಕರ್ಕಾಟಕ ರಾಶಿ:
ನಿಮ್ಮ ಬಗ್ಗೆ ನೀವೇ ಪ್ರಶಂಸೆ ಮಾಡಿಕೊಳ್ಳುವಿರಿ. ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಚಲಿಸುವ ಕಾರ್ಯರೂಪಕ್ಕೆ ತರಲು ನೋಡುವಿರಿ. ನಿಮ್ಮ ವೈಯಕ್ತಿಕ ಕಾರ್ಯದಲ್ಲಿ ಹೆಚ್ಚು ತೊಡಗಿಸಿಕೊಳ್ಳಿ. ನೀವು ನಿರೀಕ್ಷಿಸಿದ ಹಣವು ಬಾರದೇ ಹೋಗಬಹುದು. ಪೂರ್ಣಪ್ರಮಾಣದ ಕೃಷಿಯಲ್ಲಿ ತೊಡಗುವ ಆಸಕ್ತಿ ಉಂಟಾಗಬಹುದು. ರಮಣೀಯ ಸ್ಥಳಕ್ಕೆ ಸಂಗಾತಿಯ ಜೊತೆ ಹೋಗಿದ್ದಾರೆ. ಒಂದೇ ರೀತಿ ಜೀವನ ಶೈಲಿಯಿಂದ ಆಚೆ ಬರುವುದು ನಿಮಗೆ ಮುಖ್ಯವಾದೀತು.
ಸಿಂಹ ರಾಶಿ:
ತಿಳಿವಳಿಕೆ ಇಲ್ಲದೇ ಮಾತನಾಡಿ ಅಪಹಾಸ್ಯಕ್ಕೆ ಸಿಲುಕುವಿರಿ. ಪಾಲಿಗೆ ಬಂದಿದ್ದು ಪಂಚಾಮೃತ ಎಂದು ಭಾವಿಸಿ ಸುಮ್ಮನಿರುವುದು ಉತ್ತಮ. ಸಂಗಾತಿಯು ಸಾಲವನ್ನು ಮಾಡಲು ಪ್ರಚೋದನೆ ಕೊಡಬಹುದು. ಕತ್ತಲೆಯಲ್ಲಿ ಗುದ್ದಾಟ ಮಾಡಿ ಆಯಾಸ ಮಾಡಿಕೊಳ್ಳುವಿರಿ. ನಿಮ್ಮ ಬಗ್ಗೆ ಇರುವ ಕಾಳಜಿಗೆ ನೀವು ಮನಸೋಲುವಿರಿ. ಮನೆಯ ಕೆಲಸದಲ್ಲಿ ಸಮಯ ಹೋದದ್ದೇ ಗೊತ್ತಾಗದು. ಇಂದಿನ ಕಾರ್ಯ ಬೆಟ್ಟವನ್ನು ಬಗೆದು ತನ್ನ ಹಿಡಿದಂತೆ ಆಗಬಹುದು.
ಕನ್ಯಾ ರಾಶಿ:
ವೃತ್ತಿಯಲ್ಲಿ ಅನಿರೀಕ್ಷಿತ ಒತ್ತಡಗಳು ಬರಲಿವೆ ಇಂದಿನ ಕಾರ್ಯವನ್ನು ಹಾಳುಮಾಡುವುದು. ಸ್ತ್ರೀಯರು ಕೆಲವರ ಬಗ್ಗೆ ಇರುವ ಪೂರ್ವಾಗ್ರಹವನ್ನು ಕಳೆದುಕೊಳ್ಳುವರು. ಸಪಕ್ವವಾದ ಮನಸ್ಸಿಗೆ ಏನು ಹೇಳಿದರೂ ಪ್ರಯೋಜನವಾಗದು. ಪ್ರೀತಿಯು ನಿಮಗಾಗದವರ ಮೂಲಕ ಎಲ್ಲರಿಗೂ ತಿಳಿಯುವುದು. ಇಂದು ನೀವು ನಂಬಿದ ಅದೃಷ್ಟವು ಕೈ ಕೊಡಬಹುದು. ಕೃಷಿಕರ ವಸ್ತುಗಳು ಕಾಣೆಯಾಗಬಹುದು. ನಿಮಗೆ ಸಿಗಬೇಕಾದ ಹಣವು ಸಿಗದೇ ಬೇಸರ ಬೇಡ.
ತುಲಾ ರಾಶಿ:
ಅಂಗಳವನ್ನೇ ಹಾರಲಾರದವನು ಆಕಾಶವನ್ನು ಹರಿಯನು ಎಂದು ನಿನ್ನನ್ನು ಲೇವಡಿ ಮಾಡಬಹುದು. ತುಂಬಾ ಸೌಕರ್ಯವಿದ್ದರೂ ಇನ್ನಷ್ಟು ಬೇಕೆನಿಸಬಹುದು. ಅತಿಥಿಗಳ ಆಗಮನದಿಂದ ನಿಮ್ಮ ಯೋಜನೆಗಳು ಅಸ್ತವ್ಯಸ್ತ. ಕಠೋರ ಮಾತುಗಳು ನಿಮಗೆ ಇಷ್ಟವಾಗದು. ನಿಮ್ಮ ಬಗ್ಗೆ ಹೇಳಬಹುದು. ಇದು ನಿಮಗೆ ಸಾಧನೆಗೆ ಪ್ರೇರಣೆಯೂ ಆಗಬಹುದು. ಹತ್ತಾರೂ ಆಲೋಚನೆಗಳು ಒಂದಾದಮೇಲೆ ಒಂದರಂತೆ ಬಂದು ನಿಮ್ಮ ದಿನಚರಿಯನ್ನು ಹಾಳು ಮಾಡಬಹುದು.
ವೃಶ್ಚಿಕ ರಾಶಿ:
ಯಾವುದನ್ನೂ ವ್ಯರ್ಥ ಎಂದು ಭಾವಿಸದೇ ಸಕಾರಾತ್ಮಕವಾಗಿ ಇರಿ. ಏಕಕಾಲದಲ್ಲಿ ಅನೇಕ ವಿಚಾರಗಳ ಚಿಂತನೆಯನ್ನು ನಡೆಸುವಿರಿ. ಸಂಬಂಧಗಳನ್ನು ಬೆಳೆಸಿಕೊಳ್ಳುವ ಇಚ್ಛೆ ಇದ್ದರೂ ಮುನ್ನುಗ್ಗಲು ಮನಸ್ಸು ಇರದು. ಸಾಲದಿಂದ ಮುಕ್ತನಾಗಲು ನೀವು ಮಾಡುವ ಕಾರ್ಯ ವಿಫಲವಾಗುವುದು. ಭೂಮಿಯ ಬಗ್ಗೆ ಆಸಕ್ತಿ ಕಡಿಮೆಯಾಗಲಿದೆ. ಕಛೇರಿಯಲ್ಲಿ ನಿಮ್ಮ ಅಸ್ತಿತ್ವವನ್ನು ಹೆಚ್ಚಿಸಿಕೊಳ್ಳಿ. ಕೆಲವು ಸಂದರ್ಭಗಳು ನಿಮ್ಮ ಪರೀಕ್ಷೆಗಾಗಿ ಬರಲಿದೆ ಅದನ್ನು ಎದುರಿಸುವುದು ನಿಮ್ಮ ಮೇಲಿದೆ.
ಧನು ರಾಶಿ:
ನಿಮ್ಮ ಎಲ್ಲಾ ಶ್ರಮದಾಯಕ ಯೋಜನೆ ಮತ್ತು ಸಂಘಟನೆಯು ಅಂತಿಮವಾಗಿ ಫಲವನ್ನು ನೀಡಲಿದೆ. ದೈಹಿಕ ಕ್ರೀಡೆ ಮತ್ತು ಚಟುವಟಿಕೆಗಳಲ್ಲಿ ಜಯ. ವಿಶೇಷವಾಗಿ ಇಂದು ನಿಮ್ಮ ಸಂಗಾತಿಯೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ಒಬ್ಬರಾದರೂ ತಾಳ್ಮೆಯಿಂದ ಇರಬೇಕಾದೀತು. ಅನ್ಯರು ನೆನಪಿಟ್ಟುಕೊಳ್ಳುವ ಯಾವುದಾದರೂ ಕಾರ್ಯವನ್ನು ಮಾಡುವಿರಿ. ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ಎಂಬಂತೆ ನಿಮ್ಮ ಬಹಳ ದಿನದ ಕೂಡಿಟ್ಟ ಹಣವು ಕ್ಷಣಾರ್ಧದಲ್ಲಿ ಖಾಲಿಯಾಗಲಿದೆ ನಿಮಗೆ ಬೇಸರ ತರಿಸೀತು.
ಮಕರ ರಾಶಿ:
ವೃತ್ತಿ ಜೀವನದಲ್ಲಿ ಗೌರವವನ್ನು ಮತ್ತು ಹೆಚ್ಚಿನ ಸ್ಥಾನವನ್ನು ಪಡೆಯಬೇಕು. ಅನಗತ್ಯ ಖರ್ಚಿಗೆ ಇಂದು ಹಲವು ಹಾದಿಗಳು ನಿಮ್ಮ ಕಣ್ಣಿಗೆ ಬೀಳಬಹುದು. ಆರ್ಥಿಕ ವ್ಯವಸ್ಥೆಯು ಎಷ್ಟು ಏರಿಗೆ ಕೋಣ ನೀರಿಗೆ ಎಂಬ ಸ್ಥಿತಿಯು ಬರಬಹುದು. ಗೃಹನಿರ್ಮಾಣವು ನಿಮಗೆ ಅನಿವಾರ್ಯವಾದೀತು. ಬಾಡಿಗೆ ಮನೆಯ ಕಿರಿಕಿರಿಯು ನಿಮಗೆ ಸಾಕಾಗಿ ಹೋಗುವುದು. ಮುನ್ನೋಟ ಸರಿಯಾಗಿದ್ದರೆ ಎಲ್ಲವೂ ನಿಮಗೆ ಜೊತೆಗಾವುದು.
ಕುಂಭ ರಾಶಿ:
ಪರಿಚಿತರ ನಡುವೆ ಆದ ಕಲಹವು ವಿಪರೀತಕ್ಕೆ ಹೋಗುವುದು. ನಿಮ್ಮ ಸುತ್ತಲಿನ ಜನರು ಮಿತಿಯಲ್ಲಿ ಇರುವರು. ಅದಕ್ಕಾಗಿ ಅವರ ಜೊತೆ ಮನಸೋ ಇಚ್ಛೆ ವರ್ತಿಸುವುದು ಬೇಡ. ಅವರಿಗೆ ತಮ್ಮಷ್ಟಕ್ಕೆ ನಿರ್ಧಾರ ತೆಗೆದುಕೊಳ್ಳುವ ಅವಕಾಶ ನೀಡಿ. ಗ್ರಾಹಕರಿಂದ ಮೆಚ್ಚುಗೆ ಸಿಗಲಿದೆ. ಆಕಸ್ಮಿಕವಾಗಿ ನೀವು ಅಶುಭ ಸಮಾಚಾರವನ್ನು ಕೇಳಬೇಕಾಗುವುದು. ನಿಮ್ಮ ಸುತ್ತಲೂ ನಡೆಯುವುದನ್ನು ಹತ್ತಿರದಿಂದ ಗಮನಿಸಿ, ನೀವು ಸರಿಯಾಗಿದ್ದಿರಿ.
ಮೀನ ರಾಶಿ:
ಧಾರ್ಮಿಕ ಕಾರ್ಯವನ್ನು ದೊಡ್ಡ ಮಟ್ಟದಲ್ಲಿ ಮಾಡುವ ಕಾರ್ಯಕ್ರಮ ಅನೇಕರ ಜೊತೆಗೂಡಿ ಚರ್ಚಿಸಿ. ನೀವು ಇತರರ ಅಹಂಕಾರವನ್ನು ಪಡೆಯಲು ಹೋಗುವುದು ಬೇಡ. ಅತ್ಯಂತ ಮುಖ್ಯವೆಂದು ಪರಿಗಣಿಸುವ ವಿಷಯಗಳಲ್ಲಿ ನಿಮ್ಮ ಪ್ರಯತ್ನಗಳನ್ನು ಮುಂದುವರೆಸಿದೆ. ಅಪರಿಚಿತ ಸ್ತ್ರೀಯನ್ನು ಕಂಡು ಮೋಹಗೊಳ್ಳುವಿರಿ. ಇಂದು ನಿಮ್ಮ ಪ್ರಯತ್ನದಲ್ಲಿ ಯಶಸ್ಸು ನಿರೀಕ್ಷಿಸಬಹುದು. ಸಂಗಾತಿಗೆ ಬೇಕಾದ ಸಹಕಾರವನ್ನು ಖುಷಿಯಿಂದ ಮಾಡುವಿರಿ.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ಸೂರ್ಯ ತೃತೀಯಾ, ನಿತ್ಯನಕ್ಷತ್ರ : ಉತ್ತರಾಭಾದ್ರ, : ಯೋಗಾಸ್ತಯ, ಕರ್ಣ – 4 ಗರಜ, ಕರ್ಣ : 4. 06 – 29 pm, ಇಂದಿನ ಶುಭಾಶುಭ ಕಾಲ : ರಾಹು 11:10 – 12:38, ಯಮಗಂಡ ಕಾಲ 15:34 – 17:02, ಗುಳಿಕ ಕಾಲ 08:15 – 09:43
-ಲೋಹಿತ ಹೆಬ್ಬಾರ್ – 8762924271 (What’s app ಮಾತ್ರ)