Horoscope Today 29 June: ಇಂದು ಈ ರಾಶಿಯವರು ಪರರ ಪ್ರೇಮದಲ್ಲಿ ಪ್ರವೇಶ ಪಡೆಯುವರು

Horoscope Today 29 June: ಇಂದು ಈ ರಾಶಿಯವರು ಪರರ ಪ್ರೇಮದಲ್ಲಿ ಪ್ರವೇಶ ಪಡೆಯುವರು


ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಸುಕರ್ಮ, ಕರಣ: ವಣಿಜ, ಸೂರ್ಯೋದಯ – 06 : 08 am, ಸೂರ್ಯಾಸ್ತ – 07 : 04 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:27 – 19:04, ಯಮಘಂಡ ಕಾಲ 12:36 – 14:13, ಗುಳಿಕ ಕಾಲ 15:50 – 17:27

ಮೇಷ ರಾಶಿ: ಸಂಗಾತಿಯ ಜೊತೆ ತೆರಳಿ ಬಹುದಿನದ ಕನಸನ್ನು ನನಸು ಮಾಡಿಕೊಳ್ಳುವಿರಿ. ಇಂದು ಶ್ರಮಪಟ್ಟು ಮಾಡಿದ ಕೆಲಸವು ಕೊನೆಯ ಕ್ಷಣದಲ್ಲಿ ಹಾಳಾಗಬಹುದು. ಕರ್ತವ್ಯಗಳನ್ನು ನಿಷ್ಠೆಯಿಂದ ಮಾಡಿ. ಹಿರಿಯರ ದಿನವನ್ನು ಶ್ರದ್ಧೆಯಿಂದ ಮಾಡಿ.‌ ಅನೇಕ ಲಾಭಗಳು ನಿಮಗಾಗಲಿವೆ. ಸುವಸ್ತುವಿನ ದಾನವನ್ನು ಮಾಡಿ ಪುಣ್ಯ ಸಂಗ್ರಹ ಮಾಡಿಕೊಳ್ಳುವಿರಿ. ಬುದ್ಧಿಪೂರ್ವಕವಾಗಿ ನೀವಿಂದು ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿರಿ.‌ ನಿಮ್ಮ ಬಗ್ಗೆ ಅಸಮಾಧಾನದ ಮಾತುಗಳು ಕೇಳಿಬರಬಹುದು. ನಿಮಗಿರುವ ಗೊಂದಲವನ್ನು ಪರಿಹರಿಸಲು ನಿಮಗೆ ನೂರಾರು ಮಾರ್ಗಗಳು ಇರಲಿವೆ. ಹಿರಿಯರ ಉಪದೇಶವನ್ನು ಕೇಳುವಿರಿ. ದೇವತಾದರ್ಶನವನ್ನು ಪಡೆಯುವುದು ಉತ್ತಮ. ದಾಂಪತ್ಯದಲ್ಲಿ ಕಲಹವಿದ್ದರೂ ಶಾಂತವಾಗಿ ಹೊಂದಾಣಿಕೆಯಿಂದ ಮುಂದುವರಿಯುವಿರಿ. ಸಣ್ಣ ಕಲಾವಿದರಿಗೆ ಪ್ರೋತ್ಸಾಹದ ಅವಶ್ಯಕತೆ ಕಾಣಿಸುವುದು. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರ ಕಳಿಸುವಿರಿ.

ವೃಷಭ ರಾಶಿ: ಗಮನ ಸೆಳೆದು ಪರರಿಂದ ಪ್ರಶಂಸೆ ಪಡೆಯುವಿರಿ. ಇಂದು ನಿಮ್ಮ ಹಣವು ಯಾವುದೋ ಒಂದು ರೀತಿಯಲ್ಲಿ ಖರ್ಚಾಗುವ ಸಾಧ್ಯತೆ ಇದ್ದು, ಅದನ್ನು ನಿಭಾಯಿಸಿ. ಶತ್ರುಗಳು ನಿಮ್ಮ ಪತನವನ್ನು ನಿರೀಕ್ಷಿಸುತ್ತಿರುತ್ತಾರೆ. ಜಾರಿ ಬಿದ್ದು ನೋವನ್ನು ಅನುಭವಿಸುವಿರಿ. ನೀವಂದುಕೊಂಡ ಉದ್ಯೋಗವು ಸಿಗದೇ ಹೋಗಬಹದು. ನಿಮ್ಮ ಸ್ತರವನ್ನು ಅರಿತು ವರ್ತಿಸಬೇಕು. ಅತ್ತ ಕಡೆ ನಿಮ್ಮ ಗಮನ ಯಾವಾಗಲೂ ಬೇಕು. ಅನಿರೀಕ್ಷಿತ ಪ್ರಯಾಣವನ್ನು ಮಾಡಬೇಕಾಗಬಹುದು. ಮಕ್ಕಳಿಂದ ಸಂತೋಷವಾಗಲಿದೆ. ತಿರುಗಾಟದಿಂದ‌ ಏನಾದರೂ ಅನಾಹುತವಾಗಬಹದು. ಮಾತುಗಳನ್ನು ಆಡಿವಾಗ ಎಚ್ಚರವಿರಲಿ. ಕಾಲ್ನಡೆಗೆಯಲ್ಲಿಯೇ ಬಹಳ ದೂರ ಕ್ರಮಿಸಬೇಕಾಗಬಹುದು. ನಡೆದಾಡುವ ಹಾದಿಗಳು ಒಂದೇ ರೀತಿ ಇರದು ಎನ್ನುವುದು ಗಮನದಲ್ಲಿಟ್ಟುಕೊಳ್ಳಿ. ಅತಿಯಾದ ಮನೆಯ ಕೆಲಸದಿಂದ ಆಯಾಸವಾಗಬಹುದು. ನಿಮ್ಮ ಹೆಜ್ಜೆಗಳೆಲ್ಲ ಗುರುತಾಗಬೇಕು ಎಂದರೆ ಸಾಧ್ಯವಾಗದು.

ಮಿಥುನ ರಾಶಿ: ನಿಮ್ಮನ್ನು ನಿಯಂತ್ರಿಸುವ ತಂತ್ರ ವಿಫಲವಾಗುವುದು. ನೀವು ನಾಲ್ಕು ಜನರನ್ನು ಕೇಳಿಯಾದರೂ ತೊಂದರೆಯಿಲ್ಲ, ನಿಮ್ಮ ಹೆಜ್ಜೆಗಳು ಸರಿಯಾಗಿರಿಲಿ. ಉನ್ನತ ಚಿಂತನೆಗಳು ನಿಮ್ಮನ್ನು ಉತ್ತಮ ಸ್ತರಕ್ಕೆ ಕೊಂಡೊಯ್ಯುವುದು. ಇಂದು ನಿಮಗೆ ಭವಿಷ್ಯದ ಬಗ್ಗೆ ಬಹಳ ಆಲೋಚನೆ ಇರಲಿದೆ‌. ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬೇಕೆನಿಸುವುದು. ಒನ್ಬರನ್ನೇ ಸಹಾಯಕ್ಕಾಗಿ ಬೇಡುವುದು ಬೇಡ. ಎಲ್ಲದಕ್ಕೂ ಇನ್ನೊಬ್ಬರ ತಪ್ಪನ್ನೇ ತೋರಿಸುವುದು ಸಮಂಜಸವಲ್ಲ. ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು. ದೂರಪ್ರಯಾಣದಿಂದ ನಿಮಗೆ ತೊಂದರೆಗಳು ಕಾಣಿಸಿಕೊಳ್ಳುವುದು. ದೊಡ್ಡ ಅಪಾಯವೊಂದು ತಪ್ಪಿಹೋಗಿವುದು. ಕೃಷಿಯಲ್ಲಿ ಏನನ್ನಾದರೂ ಸಾಧಿಸಬೇಕೆನ್ನುವ ಹಂಬಲ ಇರಲಿದೆ. ಸಂಗಾತಿಯ ಜೊತೆ ಕಾಲಕಳೆಯುವಿರಿ. ತಂದೆಯಿಂದ ಅಸಮಾಧನಾವಾದೀತು. ದೈವವೇ ನಿಮ್ಮನ್ನು ಅನುಕೂಲ ವಾತಾವರಣದ ಕಡೆ ಒಯ್ಯಲಿದೆ. ಉದ್ಯೋಗದಲ್ಲಿ ನಿಮ್ಮ ಸ್ಥಾನಕ್ಕೆ ಬರಲು ಯಾರಾದರೂ ಕಾಯುತ್ತಿರಬಹುದು.

ಕರ್ಕಾಟಕ ರಾಶಿ: ಇಂದು ನಿಮ್ಮ ಮನೆಯ ಹಿರಿಯರ ಸೇವೆಯಿಂದ ನೆಮ್ಮದಿ ಸಿಗುವುದು. ತಂತ್ರಜ್ಞರು ಉನ್ನತ ಸ್ಥಾನದ ಬಯಕೆಯಿಂದ ಕಛೇರಿಯನ್ನು ಬಿಡಬಹುದು. ನೂತನ ಉದ್ಯೋಗವನ್ನು ಪ್ರಾರಂಭಿಸುವ ಅಲೋಚನೆ ಇದ್ದರೆ ಸದ್ಯ ಕೂಗೂಡುವುದು ಕಷ್ಟ. ಉದ್ಯೋಗಕ್ಕೆ ಸಂಬಂಧಿಸಿದಂತೆ ಗೊಂದಲಗಳನ್ನು ಪೂರ್ಣವಾಗಿ ಸರಿ ಮಾಡಿಕೊಳ್ಳಿ. ಬಿರುಕಿನ ಬಾಂಧವ್ಯದಿಂದ ಹೊರಬರುವಿರಿ. ಮಕ್ಕಳ ವಿಚಾರದಲ್ಲಿ ನಿಮಗೆ ಹೆಮ್ಮೆ ಎನಿಸಬಹುದು. ಸುಂದರವಾದ ಪುರುಷನ ಬಲೆಗೆ ಬೀಳುವಿರಿ. ಮೋಜಿ ಮಸ್ತಿನಲ್ಲಿ ಜಾಗರೂಕತೆ ಬೇಕು. ಅಪಾಯ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿ. ಸಕಾರಾತ್ಮಕ ಚಿಂತನೆಗಳು ಇರಲಿ. ಅತಿಯಾದ ಆಲೋಚನೆಯಿಂದ ಪ್ರಯೋಜನವಾಗದು. ನಿಮ್ಮದಾದ ಜನರನ್ನು ಸಂಪಾದಿಸಿಕೊಳ್ಳಿ. ವಸ್ತುಗಳ ಖರೀದಿಯು ಖರ್ಚನ್ನು ಹೆಚ್ಚು ಮಾಡುವುದು. ಯಾರ ಜೊತೆಗೂ ನಿಮ್ಮ ವರ್ತನೆಯು ಸಹಜತವಾಗಿ ಇರದು. ಯಂತ್ರಗಳ ಕೆಲಸವು ನಿಮಗೆ ಸಾಕೆನಿಸಬಹುದು. ಆಸ್ತಿಯ ವಿಚಾರದಲ್ಲಿ ಆಕಸ್ಮಿಕ ತಿರುವು ಬರಬಹುದು. ಅನಿರೀಕ್ಷಿತ ತಿರುವುಗಳಲ್ಲಿ ನಿಮ್ಮ ನಡತೆ ಸಹಜವಾಗಿರಲಿ.

ಸಿಂಹ ರಾಶಿ: ನಿಷ್ಕುರುಣೆಯಿಂದ ವರ್ತಿಸುವುದು ಬೇಡ. ನಿಮ್ಮ ಅನಾರೋಗ್ಯದಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗಲಿದೆ. ಇಂದು ಪೂರ್ಣವಿಶ್ರಾಂತಿಯ ಕಡೆಗೆ ನೀವು ಹೋಗಬೇಕಾಗುವುದು. ಅರ್ಥಿಕತೆಯು ಏರಿಕೆಯಾಗಲಿದೆ. ನಿಮ್ಮವರ ಮೇಲೆ‌ ನಿಮಗೆ ಬೇಸರ ಉಂಟಾಗಬಹುದು. ನಿಮ್ಮ ಹೃದಯ ವೈಶಾಲ್ಯವನ್ನು ತೋರಿಸುವಿರಿ. ವಿವಾಹವಾಗಬೇಕೆಂಬ ಆತುರ ಸರಿಯಲ್ಲ.‌ ಆಡಿದ ಮಾತನ್ನೇ ಮತ್ತೆ ಮತ್ತೆ ಹೇಳಿ ಕಿರಿಕಿರಿ ತರಿಸುವಿರಿ. ಕಾಲ ಬಂದಾಗ ಎಲ್ಲವೂ ಸರಿಯಾಗುತ್ತದೆ. ಪರಪುರುಷರ ಜೊತೆ ಮಾತನಾಡುವುದನದನು ಕಡಿಮೆ‌ ಮಾಡಿ. ಮನೆಯ ವಾತಾವರಣ ಹಿಡಿಸದೇ ಮನೆಯಿಂದ ದೂರವಿರುವ ಆಲೋಚನೆಯನ್ನು ಮಾಡುವಿರಿ. ಪ್ರಯತ್ನ ಪೂರ್ವಕ ಮಿತಭಾಷಿಗಳಾದರೆ ಉತ್ತಮ. ಭೂಮಿಯ ವ್ಯವಹಾರದಲ್ಲಿ ಅಲ್ಪಲಾಭವನ್ನು ಪಡೆಯಬಹುದು. ಯಾರನ್ನೂ ಒತ್ತಾಯಕ್ಕೆ ಬಳಸಿಕೊಳ್ಳುವುದು ಬೇಡ. ಅತಿಯಾದ ಆಸೆಯಿಂದ ಮೋಸ ಹೋಗಬೇಕಾಗಬಹುದು. ಎಚ್ಚರಿಕೆ ಇಂದ ವ್ಯವಹರಿಸಿ. ನಿಮ್ಮ ಕೈ ಮೀರಿದ ಕೆಲಸದಲ್ಲಿ ನಿಮಗೆ ಆತಂಕ ಬೇಡ. ಪ್ರೇಮವು ನಿಮಗೆ ಬಂಧನವಾಗಿ ಕಾಣಿಸುವುದು.

ಕನ್ಯಾ ರಾಶಿ: ಧೈರ್ಯವನ್ನು ಕಳೆದುಕೊಳ್ಳುವ ಸ್ಥಿತಿ ಬರಬಹುದು. ಇಂದು ಮಾಡುವ ಕಾರ್ಯವು ನಿಮ್ಮ ಕುಟುಂಬಕ್ಕೆ ಯೋಗ್ಯವಾದ ಹೆಸರನ್ನು ತಂದುಕೊಡುವುದು. ವಿದೇಶಕ್ಕೆ ಹೋಗಲು ನಿಮಗೆ ಕಛೇರಿಯಲ್ಲಿ ಅನುಮೋದನೆ ಸಿಗಬಹುದು. ಸುಪ್ತ ಮನಸ್ಸಿನ ಮಾತು ನಿಜವಾಗಬಹುದು. ಗೊಂದಲವಿರುವ ವಿಚಾರದ ಬಗ್ಗೆ ಅತಿಯಾಗಿ ತಲೆ ಕಡಸಿಕೊಳ್ಳಬೇಡಿ.‌ ಸ್ವಲ್ಪ ದಿನ ಅದನ್ನು ತಲೆಯಿಂದ ತೆಗದು ಹಾಕಿ. ನಿಮ್ಮ ಗೊಂದಲವನ್ನು ಇನ್ನೊಬ್ಬರಿಗೆ ಹೇರುವುದು ಬೇಡ. ಮೇಲಧಿಕಾರಿಗಳನ್ನು ಚೆನ್ನಾಗಿ ನೋಡಿಕೊಳ್ಳಿ.‌ ಅವರ ಕೆಲಸಗಳಿಗೆ ಸ್ಪಂದಿಸಿ. ಅವರ ಕಾರ್ಯಗಳನ್ನು ಪ್ರೀತಿಯಿಂದ ಮಾಡಿಕೊಡುವಿರಿ. ಅಪಶಕುನವನ್ನು ನಿಂದಿಸುವ ಅವಶ್ಯಕತೆಯಿಲ್ಲ. ನಿಮ್ಮೊಳಗಿನ ಜಗಳವು ಬೀದಿಗೆ ಬರಬಹುದು. ಸಂಗಾತಿಗೆ ನೂತನ ವಸ್ತ್ರವನ್ನು ಖರೀದಿಸಿ ಕೊಂಡೊಯ್ಯುವಿರಿ. ನಿಮ್ಮ ಬೆಳವಣಿಗೆತಿಂದ ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ವೈದ್ಯವೃತ್ತಿಯಲ್ಲಿ ಒತ್ತಡವಿರುವುದು. ನೀವು ಕಷ್ಟವನ್ನೂ ಸಂತೋಷದಿಂದ ಕಳೆಯುವಿರಿ. ಇಂದು ಕೆಲಸಕ್ಕಿಂತ ಪ್ರಯಾಣವೇ ಹೆಚ್ಚಾಗಬಹುದು.

ತುಲಾ ರಾಶಿ: ಚಿಕಿತ್ಸೆಗಾಗಿ ದೂರ ಪ್ರಯಾಣ ಮಾಡಬೇಕಾಗುವುದು. ಇಂದು ನಿಮಗೆ ಒಳ್ಳೆಯತನಕ್ಕೆ ಯಾವ ಫಲವಿಲ್ಲ ಎಂಬ ಬೇಸರವಿರಲಿದೆ. ಎಲ್ಲ ನಿರರ್ಥಕ ಎನ್ನುವ ಭಾವನೆಯು ನಿಮ್ಮಲ್ಲಿ ಬರಬಹುದು. ಒಂಟಿಯಾಗೆ ಸುತ್ತಾಡುವ ಬಯಕೆ ಉಂಟಾಗಲಿದೆ. ಅಧಿಕ ಸುತ್ತಾಟದಿಂದ ಆಯಾಸವಾಗಬಹುದು. ಸ್ವಂತ ಖರ್ಚಿನಿಂದಲಾದರೂ ಬೇಕಾದುದನ್ನು ಕೊಡಿಸುವಿರಿ. ನಿಮ್ಮ ಶಕ್ತಿಯನ್ನು ಆಧರಿಸಿಕೊಂಡು ಮುಂದುವರಿಯಿರಿ. ಜೀವನಕ್ಕೆ ಅನುಭವಿಗಳ ಮಾರ್ಗದಶರ್ನವನ್ನು ಪಡೆದುಕೊಳ್ಳುವಿರಿ. ಹಣಕಾಸಿನ ವಿಷಯದಲ್ಲಿ ಸಾಕಷ್ಟು ಗೊಂದಲವಿರಬಹುದು. ಸಹಾಯಕ್ಕೆ ಯಾರೂ ಬರುವುದಿಲ್ಲ ಎಂಬ ಅನಾಥ ಪ್ರಜ್ಞೆಯು ಕಾಡಬಹುದು. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇದ್ದು ಅದನ್ನು ಆಪ್ತರ ಬಳಿ ಹೇಳಿಕೊಳ್ಳುವ ಮನಸ್ಸಾದೀತು. ಹಳೆಯ ನೋವುಗಳು ಬಾಧಿಸುವುದು. ನಿಮ್ಮ ವಾಹನವು ದುರಸ್ತಿಗೆ ಬರಬಹುದು. ಹಣಕಾಸಿನ ವಿಚಾರಕ್ಕೆ ಸಂಗಾತಿಯ ಜೊತೆ ಮಾತಾಗಬಹುದು. ಇಂದು ಮನೋರಂಜನೆಯಿಂದ ನಿಮಗೆ ಸಮಾಧಾನ ಸಿಗಲಿದೆ. ಕೆಲವು ವಿಚಾರಗಳಿಗೆ ಸುಮ್ಮನೇ ಪ್ರತಿಕ್ರಿಯೆ ನೀಡಬೇಕಿಲ್ಲ.

ವೃಶ್ಚಿಕ ರಾಶಿ: ನೀವಿಂದು ಎಲ್ಲರ ಆಕರ್ಷಕ ವ್ಯಕ್ತಿಗಳು. ಭವ್ಯ ಗೃಹದ ಕನಸನ್ನು ಯಾರ ಬಳಿಯಾದರೂ ಹೇಳಿಕೊಳ್ಳುವಿರಿ. ಕೃಷಿಯಲ್ಲಿ ಏನಾದರೂ ಮಾಡಬೇಕು ಎಂಬ ಆಸಕ್ತಿಯು ಬರವುದು. ವಾಹನಕ್ಕೋಸ್ಕರ ಸಾಲಮಾಡುವ ಸ್ಥಿತಿ. ಬಂಧುಗಳ ಸಹಕಾರ ಸಿಗದೇ ಅವರನ್ನು ದ್ವೇಷಿಸಬಹುದು. ಸಾಮಾಜಿಕ ಕಾರ್ಯಗಳಲ್ಲಿ ಸಲ್ಪ ಕಾಲ ತೊಡಗುವಿರಿ. ಅತಿಯಾದ ಹಠವು ಒಳ್ಳೆಯದಲ್ಲ. ನೀವು ಏನನ್ನಾದರೂ ಪಡೆಯಲು ಪ್ರಯತ್ನಿಸಿದರೆ ಕೂಡಲೇ ಸಿಗುತ್ತದೆ ಎಂಬ ಭ್ರಮೆ ಬೇಡ. ಯಾರ ಹಂಗಿಲ್ಲದೇ ಸ್ವಾತಂತ್ರ್ಯವಾಗಿ ಇರಲು ಬಯಸುವಿರಿ. ಇಂದು ಮಾಡಬೇಕೆಂಬ ಕೆಲಸವನ್ನು ಮುಂದೂಡುವುದು ಒಳ್ಳೆಯದು. ಮನೆಯಿಂದ ದೂರವಿರುವವರಿಗೆ ಇಂದು ಮನೆಯ ನೆನಪಾಗಬಹುದು. ದ್ವಂದ್ವದಲ್ಲಿ ನಿಮ್ಮ ಮನಸ್ಸು ಇರಲಿದೆ. ದೇವರ ವಿಷಯದಲ್ಲಿ ನಂಬಿಕೆ ಕಡಿಮೆ ಆಗಬಹುದು. ಆಲಸ್ಯದಿಂದ‌ ಮಾಡಬೇಕಾದ ಕೆಲಸವನ್ನು ಮಾಡದೇ ಇರುವಿರಿ. ಪ್ರವಾಸ ಹೋಗುವ ಮನಸ್ಸಾದೀತು. ಅಧಿಕಾರಿಗಳು ನಿಮ್ಮ ಉದ್ಯಮವನ್ನು ಪರಿಶೀಲಿಸಬಹುದು. ನಿಮಗೆ ಬೇಡವೆನಿಸಿದ ವಿಚಾರವೇ ಮತ್ತೆ ಮತ್ತೆ ಕೇಳಿ ಹಿಂಸೆಯಾದೀತು.

ಧನು ರಾಶಿ: ನಿರಾಳತೆಯನ್ನು ಅನುಭವಿಸಲು ಆಗದು. ಏನಾದರೂ ತಾಪತ್ರಯಗಳು ನಿಮ್ಮ ಅಟ್ಟಿಕೊಂಡೇ ಬರುತ್ತವೆ. ಇಂದು ನಿಮ್ಮ ನಡತೆಯು ಸಾಮಾನ್ಯರಂತೆ ಕಂಡರೂ ಪ್ರಭಾವವು ಅಧಿಕವಾಗಿರುತ್ತದೆ‌. ಸಾಮಾಜಿಕವಾಗಿ ನಿಮ್ಮ ಕಾರ್ಯವನ್ನು ಗುರುತಿಸಿ ಸಮ್ಮಾನಿಸಬಹುದು. ಹೂಡಿಕೆಯನ್ನು ಮಾಡಿ ಹಣವನ್ನು ಉಳಿಸಿಕೊಳ್ಳುವುದು ಉತ್ತಮ. ಹೊಂದಣೆಯನ್ನು ಅಲ್ಪ ಪ್ರಮಾಣದಲ್ಲಿ ಮಾಡಿಕೊಳ್ಳುವಿರಿ. ಇಂದಿನ ಒತ್ತಡವನ್ನು ಚೆನ್ನಾಗಿ ನಿಭಾಯಿಸಬಲ್ಲಿರಿ. ಉದ್ಯೋಗವನ್ನು ಬಿಡುವ ಮನಸ್ಸಾಗಬಹುದು. ರಮಣೀಯವಾದ ಪ್ರದೇಶಕ್ಕೆ ಹೋಗಬೇಕೆನ್ನುವ ಆಸೆ ಬರಬಹುದು. ಚಂಚಲವಾದ ಮನಸ್ಸಿಗೆ ಧ್ಯಾನ ಪರಿಹಾರವಾಗಲಿದೆ. ನಿಮ್ಮ ಕಷ್ಟಕ್ಕೆ ಬಂದವರು ಆಪ್ತರಾಗಬಹುದು. ಮನೆಯ ಕೆಲಸವು ನಿಧಾನವಾಗಿ ಸಾಗಬಹುದು. ಯಾವುದನ್ನೇ ಆದರೂ ಸಾಮರ್ಥ್ಯದಷ್ಟೇ ಸೇವಿಸಿ. ಇಲ್ಲವಾದರೆ ಅಜೀರ್ಣವಾದೀತು. ಆಕಸ್ಮಿಕವಾಗಿ ಧನಲಾಭವು ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು. ಮನಸ್ಸಿನ ಸ್ಥಿರತೆಯಲ್ಲಿ ಅಭಾವವಿದ್ದು ನಿಮ್ಮ ಗುರಿಯೂ ಬದಲಾಗುವುದು. ಪ್ರೇಮವು ಕೊನೆಗೂ ನಿಮ್ಮ ಇಚ್ಛೆಯಂತೆ ಆಗಲಿದೆ.

ಮಕರ ರಾಶಿ: ವಾಣಿಜ್ಯ ವ್ಯವಹಾರಕ್ಕೆ ದೂರ ಪ್ರಯಾಣ. ನಿಮ್ಮ ಕಾರ್ಯದ ದಕ್ಷತೆಯಿಂದ ಉನ್ನತ ಸ್ಥಾನವು ಸಿಗುವುದು. ಕೆಲವರಿಗೆ ವೃತ್ತಿಯನ್ನು ಬದಲಿಸಬೇಕಾಗಿ ಬರಬಹುದು. ವಂಚನೆಯಿಂದ ನಿಮ್ಮ ಹಣ ನಷ್ಟ ಮಾಡಿಕೊಳ್ಳುವಿರಿ. ಮನೆಯಲ್ಲಿ ಮಕ್ಕಳ ಜೊತೆ ಸುಂದರ ವಾತಾವರಣವಿರುತ್ತದೆ. ಸಂಗಾತಿಯಿಂದ ದೂರ ಉಳಿಯಬೇಕಾದ ಸ್ಥಿತಿ ಬರಬಹುದು. ಕುಟುಂಬದಲ್ಲಿ ನಿಮ್ಮ ಬಗ್ಗೆ ಆಡಿಕೊಂಡಾರು. ಸಹೋದ್ಯೋಗಿಗಳು ನಿಮ್ಮ ಮೇಲೆ ಕೆಲಸದ ಭಾರವನ್ನು ಹೊರಿಸಬಹುದು. ನಿಮ್ಮ ನೋವನ್ನು ಸಂಗಾತಿಯ ಜೊತೆ ಹಂಚಿಕೊಳ್ಳಿ. ಮನೆಗೆ ಬಂದ ಅತಿಥಿಗಳ ಜೊತೆ ಸಮಯವನ್ನು ಕಳೆಯುವಿರಿ. ವಿದ್ಯಾರ್ಥಿಗಳು ಶಿಕ್ಷಕರ ಸಹಾಯವನ್ನು ಪಡೆದು ಮುಂದಿನ ಓದಿನ ಬಗ್ಗೆ ಗಮನಹರಿಸಬಹುದು. ಕೆಲಸವು ಅಪೂರ್ಣವಾಗಿ ನೀವು ಆದಷ್ಟು ಬೇಗ ಮುಗಿಸುವ ತವಕದಲ್ಲಿ ಇರುವಿರಿ. ದಾಂಪತ್ಯದ ವಿರಸವು ಬಗೆ ಹರಿಯಬಹುದು. ಕುಟುಂಬದ ನೆಮ್ಮದಿಯು ನಿಮ್ಮ ಕಠೋರ ಮಾತಿನಿಂದ ವಿಚಲಿತವಾಗುವುದು.

ಕುಂಭ ರಾಶಿ: ನಿಮ್ಮ ಮೇಲೆ ಕೆಲಸವನ್ನು ಹೇರುವ ಪ್ರಯತ್ನ ಮಾಡಬಹುದು. ಇಂದು ನಿಮ್ಮವರ ಅವಶ್ಯಕತೆ ತಿಳಿಯುವುದು. ಮನೆಯವರ ನೆನಪು ನಿಮ್ಮನ್ನು ಬಹಳ ಕಾಡಬಹುದು. ಸಹೋದರರ ಜೊತೆ ಕಲಹವಾಗಿ ಕೆಲವು ಕಾಲ ಮೌನವಹಿಸುವಿರಿ. ಕೆಟ್ಟವರ ಸಹವಾಸದಿಂದ ಕೆಟ್ಟ ಹೆಸರೇ ಬರಲಿದೆ.‌ ಆರ್ಥಿಕತೆಯ ಬಗ್ಗೆ ಇರುವ ನಿಮ್ಮ ಧೋರಣೆ ಬದಲಾಗುವುದು. ಮನೆಯ ಕಾರ್ಯದಲ್ಲಿ ನೀವು ಭಾಗಿಯಾಗುವಿರಿ. ನಿಗದಿತ ಸಮಯಕ್ಕೆ ನಿಮ್ಮ ಕೆಲಸಗಳು ಮುಗಿಯದು. ಮುಂದೆ ಮಾಡಿದರಾಯಿತು ಎಂಬ ಮಾನಸಿಕ ಸ್ಥಿತಿಯನ್ನು ಬಿಡುವುದು ಒಳ್ಳೆಯದು. ತಂದೆಯಿಂದ ಹಿತವಚನವು ಸಿಗಬಹುದು. ಹಳೆಯ ಸ್ನೇತರು ದೂರವಾಣಿಯ ಮೂಲಕ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಾರು.‌ ತಾಳ್ಮೆಯಿಂದ ಎಲ್ಲವನ್ನೂ ಆಲಿಸಿ. ಅವರಿಗೆ ಪರಿಹಾರ ಸಿಗದಿದ್ದರೂ ಸಮಾಧಾನವಂತೂ ಸಿಗಲಿದೆ. ಅವರಿಗೆ ಬೇಸರವಾಗುವಂತೆ ನೋಡಿಕೊಳ್ಳಬೇಡಿ. ಅಪರಿಚಿತರ ಜೊತೆ ಕಲಹವಾಡಿ ಸಮಯವನ್ನು ವ್ಯರ್ಥ ಮಾಡುವಿರಿ.‌ ಪ್ರೀತಿಗೆ ಯೋಗ್ಯರನ್ನು ಹುಡುಕುವಿರಿ. ವಿದ್ಯಾಭ್ಯಾಸದ ಪ್ರಗತಿಯಿಂದ ಮನೆಯಲ್ಲಿ ಖುಷಿ ಇರಲಿದೆ.

ಮೀನ ರಾಶಿ: ನಿಮಗೆ ಬೆಂಬಲ ಸಿಗದೇ ಸ್ವತಂತ್ರವಾಗಿ ಏನನ್ನೂ ಮಾಡಲಾಗದು. ಇಂದು ನೀವು ಭೂಮಿಯ ವಿಚಾರವಾಗಿ ಕಲಹವನ್ನು ಮಾಡಬೇಕಾಗಿಬರಬಹುದು. ನೀವು ಪ್ರಯತ್ನಿಸಿದ ಕಾರ್ಯಗಳು ಫಲಿಸುವುದು ಎಂಬ ನಂಬಿಕೆ ಇರುವುದು. ವಾಹನವನ್ನು ಓಡಿಸುವ ಎಚ್ಚರಿಕೆಯಿಂದ ಇರಿ. ಚರ್ಚಿತ ವಿಚಾರವನ್ನೇ ಚರ್ಚಿಸಿ ಪ್ರಯೋಜನವಾಗದು. ನೀವು ಮಾಡಲು ಹೊರಟ ಕೆಲಸದ ಮೇಲೇ ಹೆಚ್ಚು ಗಮನವಿರಲಿ. ಅನ್ಯ ವಿಚಾರದಲ್ಲಿ ನೀವು ತಲೆ ಹಾಕಿ ಮುಖ್ಯ ಕೆಲಸವನ್ನು ಮರೆಯಬಹುದು. ತಪ್ಪು ನಡೆಯದೇ ಇದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆ ಇಲ್ಲ. ನಿಮ್ಮ ಕೆಲಸವನ್ನು ಸುಲಭಗೊಳಿಸುವ ವಿಧಾನವನ್ನು ಕಂಡುಕೊಳ್ಳಿ. ಸ್ನೇಹಿತರ ಜೊತೆ ಆಪ್ತಸಮಾಲೋಚನೆ ನಡೆಯಲಿದೆ. ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು. ನಿಮ್ಮ ಗುರಿಯ ಬಗ್ಗೆ ವಿಶ್ವಾಸವು ನಿಮಗಿರಲಿ. ನಿಮ್ಮಿಂದ ಸಹಾಯ ಪಡೆಯಲು ನಿಮ್ಮನ್ನು ಹೊಗಳುವರು. ಮನೆಯ ಸಮಸ್ಯೆಗೆ ಪರಿಹಾರ ಕಾಣುವಲ್ಲಿ ಜೀವನ ಸಂಗಾತಿಯು ಸಂಪೂರ್ಣ ಬೆಂಬಲವು ಇರುವದು.

-ಲೋಹಿತ ಹೆಬ್ಬಾರ್ – 8762924271 (what’s app only)



Source link

Leave a Reply

Your email address will not be published. Required fields are marked *