Headlines

ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೊ ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?

ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೊ ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?


ಹೈದರಾಬಾದ್, ಅಕ್ಟೋಬರ್ 24: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್ ನ ವೋಲ್ವೊ ಬಸ್(ವೋಲ್ವೋ ಬಸ್) ಬೆಂಕಿಗಾಹುತಿಯಾಗಿದೆ. 10ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೈದರಾಬಾದ್-ಬೆಂಗಳೂರು ರಸ್ತೆಯ ಚಿನ್ನ ಟೆಕೂರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ, ಬಸ್ ಪ್ರಯಾಣದ ಜನರಿಗೆ ದೂಡಿದೆ.

ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದೆಯೇ?
ಬಸ್ ಮೊದಲು ಬೈಕ್ ಗೆ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ಬಳಿಕ ಅಲ್ಲೇ ಬಸ್ ನಿಂತಿದ್ದರೆ ಇಷ್ಟೊಂದು ಅನಾಹುತ ಸಂಭವಿಸಿದೆ, ಬಸ್ ನಿಲ್ಲಿಸದೆ ಮುಂದಕ್ಕೆ ಹೋದ ಪರಿಣಾಮ ಬೈಕ್ ಬಸ್ ಸಿಲುಕಿತ್ತು. ಬೈಕ್ ನೆಲಕ್ಕೆ ಉಜ್ಜಿದ ಪರಿಣಾಮದಿಂದ ಬೆಂಕಿ ಹೊತ್ತಿಕೊಂಡಿತ್ತು. ಅದು ಇಡೀ ಬಸ್ ಅನ್ನೇ ಆವರಿಸಿತ್ತು. ಬೈಕ್ ಸವಾರ ಕೂಡ ಸಾವನ್ನಪಿರಬಹುದು ಎಂದು ಅಂದಾಜಿಸಲಾಗಿದೆ. ಆ ಸಮಯದಲ್ಲಿ ಎಲ್ಲಾ ಪ್ರಯಾಣಿಕರು ಬಲಗಿದ್ದರು.

ಬಸ್ ಚಾಲಕ ಬದಲಿ ಚಾಕನನ್ನು ಎಬ್ಬಿಸಿ ಪ್ರಯಾಣಿಕರನ್ನು ಬಸ್‌ನಿಂದ ಕೆಳಗೆ ಇಳಿಸುವ ಪ್ರಯತ್ನ ಮಾಡಲಾಗಿದೆ. ವೋಲ್ವೊ ಬಸ್ ಆದ ಬೆಂಕಿ ಕೂಡ ಹತ್ತಿತ್ತು, ಜೊತೆಗೆ ಕಿಟಕಿಗಳು ಮುಚ್ಚಿರುವ ಪರಿಣಾಮ ಕಿಟಕಿಯನ್ನು ಒಡೆದು ಬೇಗ ಪ್ರಯಾಣಿಕರನ್ನು ಹೊರತರಲಾಯಿತು. ಅಷ್ಟರೊಳಗೆ ಹಲವು ಪ್ರಯಾಣಿಕರು ಉಸಿರುಚೆಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಓದಿ: ಬೈಕ್- ಶಾಲಾ ಬಸ್ ನಡುವೆ ಭೀಕರ ಅಪಘಾತ: ಮಕ್ಕಳು ಸೇರಿ ನಾಲ್ವರು ದುರ್ಮರಣ

ಪ್ರತ್ಯಕ್ಷದರ್ಶಿಗಳು ಹೇಳುವಂತೆ ಬೆಂಕಿ ಎಷ್ಟು ಬೇಗನೆ ಹರಡಿತೆಂದರೆ, ಹೆಚ್ಚಿನ ಪ್ರಯಾಣಿಕರು ಏನಾಗುತ್ತಿದೆ ಎಂದು ಅರಿತುಕೊಳ್ಳುವ ಮೊದಲೇ ಬೆಂಕಿಯಲ್ಲಿ ಬೆಂದುಹೋದರು. ಕೆಲವರು ಸುಟ್ಟಗಾಯದಿಂದ ಮೃತಪಟ್ಟಿದ್ದಾರೆ, ಇನ್ನು ಕೆಲವರು ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ಇದೆ.

ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು ಮತ್ತು ಅವಶೇಷಗಳನ್ನು ಹೊರತೆಗೆಯಲು ಹೆಣಗಾಡಿದವು. ಇನ್ನೂ ಅಧಿಕಾರಿಗಳು ಸಾವಿನ ಸಂಖ್ಯೆಯನ್ನು ದೃಢಪಡಿಸಿಲ್ಲ, ಆದರೆ ವಿನಾಶದ ಪ್ರಮಾಣವು ಹೆಚ್ಚಿನ ಸಂಖ್ಯೆಯ ಸಾವುನೋವುಗಳನ್ನು ಹೊಂದಿದೆ.

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದರು ಮತ್ತು ಬರುವವರಿಗೆ ತ್ವರಿತ ಪರಿಹಾರ ಮತ್ತು ವೈದ್ಯಕೀಯ ನೆರವು ನೀಡುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದನ್ನು ಅವರು ಅತ್ಯಂತ ದುರಂತ ಘಟನೆ ಎಂದು ಕರೆದರು.

ಮೃತ ಹಾಗೂ ರೋಗಿಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಹೈದರಾಬಾದ್ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ರೋಗಿಗಳಿಗೆ 50 ಸಾವಿರ ರೂ. ಪರಿಹಾರ ನೀಡಲಾಗಿದೆ.

ರಾಜಸ್ಥಾನದಲ್ಲಿ ಭೀಕರ ಬಸ್ ಬೆಂಕಿ ಅವಘಡ ಸಂಭವಿಸಿ, ಮೂವರು ಮಕ್ಕಳು ಸೇರಿದಂತೆ 22 ಜನರು ಸಾವನ್ನಪ್ಪಿದ ವಾರದ ನಂತರ ಕರ್ನೂಲ್ ಅಪಘಾತ ಸಂಭವಿಸಿದೆ. ಆ ಘಟನೆಯಲ್ಲಿ, ಅಕ್ಟೋಬರ್ 14 ರಂದು ಥೈಯಾತ್ ಗ್ರಾಮದ ಬಳಿ ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಪ್ರಯಾಣಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿತ್ತು. ವಾಹನದ ಹವಾನಿಯಂತ್ರಣ ವ್ಯವಸ್ಥೆಯಲ್ಲಿನ ಶಾರ್ಟ್ ಅನಿಲ ಸೋರಿಕೆಗೆ ಕಾರಣವಾಗಿದ್ದು, ಇದು ಬೆಂಕಿಗೆ ಕಾರಣ ಎಂದು ತನಿಖೆಯಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *