Headlines

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಕೊನೆ ಸಲ ಮಗಳ ಮುಖ ನೋಡಲು ಬಾರದ ಪೋಷಕರು, ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಕೊನೆ ಸಲ ಮಗಳ ಮುಖ ನೋಡಲು ಬಾರದ ಪೋಷಕರು, ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ


ಹುಬ್ಬಳ್ಳಿ, (ಡಿಸೆಂಬರ್ 22): ಹುಬ್ಬಳ್ಳಿಯ (ಹುಬ್ಬಳ್ಳಿ) ಮಾನ್ಯ ಹಾಗೂ ವಿವೇಕಾನಂದ ಇವರಿಬ್ಬರೂ ಜಾತಿ ಗಡಿ ಮೀರಿ ಪ್ರೀತಿ ಮಾಡಿದ್ರು. ಮದುವೆಯಾಗಿ 7 ತಿಂಗಳು ಕಳೆದಿತ್ತು. ಯುವತಿ ಸಹ 6 ತಿಂಗಳ ಗರ್ಭಿಣಿಯಾಗಿದ್ಳು. ಆದರೆ ಜಾತಿ ಅಮಲು ತಲೆಗೇರಿಸಿಕೊಂಡಿದ್ದ ಯುವತಿ ತಂದೆ, ಗರ್ಭಿಣಿ ಮನ್ನೇ ಬಡಿದುಕೊಂಡಿದ್ದಾನೆ. ಈ ಮರ್ಯಾದೆಗೇಡು ಹತ್ಯೆಗೆ ಹುಬ್ಬಳ್ಳಿ( ಹುಬ್ಬಳ್ಳಿ ಮರ್ಯಾದೆ ಹತ್ಯೆ) ಬೆಚ್ಚಿಬಿದ್ದಿದೆ.

ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲೇ ಇನಾಮ್ ವೀರಾಪುರ ಗ್ರಾಮದ ಹಳ್ಳದಲ್ಲಿ ಮಾನ್ಯಾಳ ಅಂತ್ಯಕ್ರಿಯೆ ಆಗಿದ್ದು, ಹುಟ್ಟಿಸಿ ಬೆಳೆಸಿದ್ದ ಮಗಳ ಅಂತಿಮ ದರ್ಶನಕ್ಕೂ ಮಾನ್ಯತೆ ಬಂದಿಲ್ಲ. ಹೀಗಾಗಿ ಹತ್ಯೆಯಾದ ವಿವೇಕಾನಂದ ಕುಟುಂಬಸ್ಥರೇ ಮಾನ್ಯಾಳ ಶವಸಂಸ್ಕಾರ ನೆರವೇರಿಸಿದ್ದಾರೆ. ಪತಿ ವಿವೇಕಾನಂದ ದೊಡ್ಮನಿ ಮಾನ್ಯಾಳ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ಗೋಳಾಡಿದ್ದು, ಪತಿ ವಿವೇಕಾನಂದ ಮಾನ್ಯಾಳನ್ನು ಪ್ರೀತಿಸಿ ಕೊನೆಯವರೆಗೂ ಕೈಬಿಟ್ಟಿಲ್ಲ. ಈ ಸನ್ನಿವೇಶ ನೆರೆದವರ ಕಣ್ಣಲ್ಲಿ ನೀರು ತರಿಸಿದೆ.

ಇದನ್ನೂ ಓದಿ: ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳು ಕ್ರೂರವಾಗಿ ಹತ್ಯೆಗೈದ ತಂದೆ: ಪೈಶಾಚಿಕ ಕೃತ್ಯಕ್ಕೆ ಬೆಚ್ಚಿಬಿದ್ದ ಧಾರವಾಡ



Source link

Leave a Reply

Your email address will not be published. Required fields are marked *